ನಗರದಲ್ಲಿ ಎರಡು ಕಡೆ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಎಲೆಕ್ನಿಕ್ ಹಾಗೂ ರಾಸಾಯನಿಕ ವಸ್ತುಗಳು ಹಾನಿಗೀಡಾಗಿವೆ. ಸಿಟಿ ಮಾರ್ಕೆಟ್: ಬಿವಿಕೆ ಅಯ್ಯಂಗಾರ್ ರಸ್ತೆಯ ರಾಮಮಂದಿರ ಬಳಿ ಇರುವ ವಿಕಾಸ್ ಎಲೆಕ್ನಿಕಲ್ಸ್ ಅಂಗಡಿಯಲ್ಲಿ ಇಂದು ಬೆಳಗ್ಗೆ 7. 30ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಒಂದು ಅಗ್ನಿಶಾಮಕ ವಾಹನದೊಂದಿಗೆ ತಕ್ಷಣ ಆಗಮಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಟ್ರ್ಸಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಅಂಗಡಿಯಲ್ಲಿ ಸಂಗ್ರಹಿಸಿಡಲಾಗಿದ್ದ ಎಲೆಕ್ನಿಕಲ್ ವಸ್ತುಗಳು ಬೆಂಕಿಗೀಡಾಗಿವೆ.
ಸುಮಾರು ಏಳು ಅಂತಸ್ತಿನ ಕಟ್ಟಡದಲ್ಲಿ ಈ ಎಲೆಕ್ನಿಕಲ್ ಅಂಗಡಿಯಿದ್ದು, ಸ್ಥಳೀಯರ ಮುನ್ನೆಚ್ಚರಿಕೆ ಕ್ರಮದಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಪುಟ್ಟೇನಹಳ್ಳಿ: ಇಲ್ಲಿನ ದೊರೆಸಾನಿ ಪಾಳ್ಯದಲ್ಲಿರುವ ಕೆಮಿಕಲ್ ಹಾಗೂ ರಟ್ಗಳನ್ನು ಸಂಗ್ರಹಿಸಿಡಲಾಗಿದ್ದ ಗೋದಾಮಿನಲ್ಲಿ ಇಂದು ಬೆಳಗ್ಗೆ 8. 30ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗೋದಾಮಿನಿಂದ ಗಾಢವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.
ತಕ್ಷಣ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ ತಹಬದಿಗೆ ತಂದಿದ್ದಾರೆ. ಶಾಟ್ರ್ಸೆಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA