ಯುವಕನೋರ್ವ ಅತೀ ವೇಗವಾಗಿ ಚಲಿಸುವುದರ ಮೂಲಕ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ.
ಯುವಕನೊಬ್ಬ ಬೈಕ್ ನಲ್ಲಿ ವೇಗವಾಗಿ ಬರುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದ. ಈ ವೇಳೆ ಹಿಂದಿನಿಂದ ಬಂದ ಮೂರ್ನಾಲ್ಕು ವಾಹನಗಳು ಯುವಕನ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬೈಪಾಸ್ ನಲ್ಲಿ ನಡೆದಿದೆ. ರಾಕೇಶ್ ವಿ.ಆರ್. (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಹಾಸನ ನಗರದ ಗೌರಿಕೊಪ್ಪಲಿನ ನಿವಾಸಿಯಾದ ರಾಕೇಶ್, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಬೈಕ್ ನಲ್ಲಿ ವೇಗವಾಗಿ ಬರುವಾಗ ನಿಯಂತ್ರಣಕ್ಕೆ ಸಿಗದೆ ಕೆಳಗೆ ಬಿದ್ದಿದ್ದ. ಈ ವೇಳೆ ಇತರೆ ವಾಹನಗಳು ರಾಕೇಶ್ ಮೇಲೆ ಹರಿದಿತ್ತು. ವಾಹನಗಳು ಹರಿದ ರಭಸಕ್ಕೆ ರಾಕೇಶ್ ದೇಹವೇ ಛಿದ್ರ ಛಿದ್ರವಾಗಿತ್ತು.
ಇನ್ನು ಅಪಘಾತದಲ್ಲಿ ಸವಾರರು ವಾಹನ ನಿಲ್ಲಿಸದೆ ಪರಾರಿಯಾಗಿದ್ದಾರೆ. ಮತ್ತೊಂದು ಕಡೆ ರಾಕೇಶ್ ಮೇಲೆ ವಾಹನ ಹತ್ತಿಸುವುದನ್ನು ನಿಯಂತ್ರಿಸಲು ಹೋಗಿ ಕಾರೊಂದು ಡಿವೈಡರ್ಗೆ ಗುದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296