ಬೆಂಗಳೂರು: ಮಳೆಗಾಲದಲ್ಲಿ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮರಗಳನ್ನು ರಕ್ಷಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಇತ್ತೀಚೆಗೆ ಮರದ ಕೊಂಬೆ ಬಿದ್ದು 29 ವರ್ಷದ ಅಕ್ಷಯ್ ಸಾವಿಗೀಡಾಗಿದ್ದಕ್ಕೆ ದುಃಖ ವ್ಯಕ್ತಪಡಿಸಿದರು.
ಮಳೆ ಮತ್ತು ಬಲವಾದ ಗಾಳಿ ಬೀಸುವ ಸಮಯದಲ್ಲಿ ಎತ್ತರದ ಅಥವಾ ಆಳವಾಗಿ ಬೇರೂರಿರದ ಮರಗಳು ಬೀಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ, ಕಾಂಕ್ರೀಟ್, ಕಲ್ಲಿನ ಚಪ್ಪಡಿಗಳು ಮತ್ತು ಬೇರುಗಳ ಸುತ್ತಲೂ ಹಾಕಲಾದ ಹೆಂಚುಗಳು, ನೀರು ನೆಲಕ್ಕೆ ಇಳಿಯುವುದನ್ನು ತಡೆಯುವುದು ಎಂದು ತಜ್ಞರನ್ನು ಉಲ್ಲೇಖಿಸಿ ಹೇಳಿದರು.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಕೂಡ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ ಮತ್ತು ರಾಜ್ಯ ಸರ್ಕಾರ ಈಗಾಗಲೇ ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿದೆ. ಗುರುವಾರ ಬಿಬಿಎಂಪಿ ವಿಶೇಷ ಆಯುಕ್ತರು ಮರಗಳ ಸುತ್ತಲಿನ ಕಾಂಕ್ರೀಟ್ ತೆಗೆಯಲು ಆದೇಶಿಸಿದ್ದಾರೆ. ಇನ್ನು ಮುಂದೆ ರಸ್ತೆಬದಿಗಳಲ್ಲಿ ಸಸಿಗಳನ್ನು ನೆಡುವಾಗ, ಅದರ ಸುತ್ತ ಒಂದು ಮೀಟರ್ ವ್ಯಾಪ್ತಿಯಲ್ಲಿ ಮಣ್ಣು ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW