ಬೀದರ: ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಭಾಲ್ಕಿ ಉಪ–ವಿಭಾಗ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೆಟ್ಟಿ ಅವರ ನೇತೃತ್ವದಲ್ಲಿ ಭಾಲ್ಕಿ ನಗರ ಪೊಲೀಸ್ ಠಾಣೆ ಪಿ.ಐ ಅಮರೇಶ ಅವರು ತಮ್ಮ ಪೊಲೀಸ್ ಸಿಬ್ಬಂದಿ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ದ್ವಿಚಕ್ರ ವಾಹನ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದ ಹಿನ್ನೆಲೆ, ತಲೆಗೆ ಏಟು ಬಿದ್ದು ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಸಾವಿಗೀಡಾಗುತ್ತಿರುವ ಪ್ರಕರಣಗಳೇ ಹೆಚ್ಚು, ಹಾಗಾಗಿ ಭಾಲ್ಕಿ ನಗರದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಗಳ ಸವಾರನ್ನು ಗುರುತಿಸಿ, ಅವರಿಗೆ ದಂಡ ವಿಧಿಸುವ ಬದಲು ಹೆಲ್ಮೆಟ್ ವಿತರಿಸಿ, ಹೆಲ್ಮೆಟ್ ಧರಿಸುವಿಕೆಯ ಮಹತ್ವವನ್ನು ತಿಳಿಸಲಾಯಿತು.
ಅಪಘಾತದಲ್ಲಿ ವಾಹನ ಸವಾರರು ಸಾವನ್ನಪ್ಪುತ್ತಿರುವ ಪ್ರಮಾಣವನ್ನು ಇಳಿಕೆ ಮಾಡುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx