ಪಾವಗಡ: ತಾಲ್ಲೂಕಿನ ಬ್ಯಾಡನೂರು ಗ್ರಾ.ಪಂ. ವ್ಯಾಪ್ತಿಯ ಬಿ.ದೊಡ್ಡಹಟ್ಟಿ ಗ್ರಾಮದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ವೆಂಕಟರಮಣಪ್ಪ ಅವರು ಗುದ್ದಲಿಪೂಜೆ ಮಾಡಿದರು.
ಈ ಸಂದರ್ಭದಲ್ಲಿ ಅವರು ಹೈಮಾಸ್ಕ್ ವಿದ್ಯುತ್ ದೀಪವನ್ನೂ ಉದ್ಘಾಟಿಸಿದರು. ಇದೇ ವೇಳೆ ಇಲ್ಲಿನ ದೇವಸ್ಥಾನದ ಆವರಣದಲ್ಲಿ ಸಿಸಿ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಎಚ್ ಜೋಗಪ್ಪ, ಕೆ ಪಾಲೇಳ್ಳಪ್ಪ, ಡಿ.ಎಂ.ಮಲ್ಲಯ್ಯ, ಡಿ.ಎಂ.ಮಹೇಶ್, ಡಿ.ಹೆಚ್. ದೇವರಾಜು, ಯಾದವ ಮುಖಂಡರುಗಳಾದ ಮುಗದಾಳ ಬೆಟ್ಟ ನರಸಿಂಹಪ್ಪ, ರೈತ ಮುಖಂಡ ನರಸಿಂಹರೆಡ್ಡಿ, ಪೂಜಾರಪ್ಪ,ಹಾಗೂ ಇಲಾಖಾಧಿಕಾರಿಗಳಾದ
ಜಿ.ಪಂ. ಎ ಇ ಇ ಸುರೇಶ್, ಬಸವಲಿಂಗಪ್ಪ, ದೇಶಪಾಂಡೆ, ಪಾಪಣ್ಣ ವಿ.ಹೆಚ್.ಪಾಳ್ಯ, ಹನುಮೇಶ್, ಶಿಕ್ಷಕ ಮಲ್ಲಯ್ಯ, ಶಿವರಾಜು, ಕನಕ ಸೇರಿ ಇನ್ನೂ ಹಲವಾರು ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB