nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ವರ್ಷ ಹಿಂದಿನ ಮರ್ಯಾದಾಹತ್ಯೆ ಪ್ರಕರಣ ಬೆಳಕಿಗೆ
    ರಾಜ್ಯ ಸುದ್ದಿ July 20, 2022

    10 ವರ್ಷ ಹಿಂದಿನ ಮರ್ಯಾದಾಹತ್ಯೆ ಪ್ರಕರಣ ಬೆಳಕಿಗೆ

    By adminJuly 20, 2022No Comments3 Mins Read
    vejayapura

    Provided by
    Provided by

    ವಿಜಯಪುರದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣ ಇದೀಗ ಬಹಿರಂಗಗೊಂಡಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬಿಳಿಸುವಂತೆ ಮಾಡಿದೆ.

    ವಿಜಯಪುರ ನಗರದ ಬಸವರಾಜ ಮಮದಾ ಪುರ ಇವರ ಪುತ್ರಿ ಪ್ರಿಯಾಂಕಾ ಇವಳನ್ನು, ತಮ್ಮ ಸಂಬಂಧಿಕ ರಲ್ಲಿಯೇ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಹುಚ್ಚಪ್ಪಗೌಡ ಪಾಟೀಲ ಎನ್ನುವ ನೊಂದಿಗೆ 2008 ರಲ್ಲಿ ಮದುವೆ ಮಾಡಿ ಕೊಡಲಾಗಿತ್ತು.

    ಮದುವೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದ ದಿನಗಳಲ್ಲಿ ಇಬ್ಬರಲ್ಲಿಯೂ ಮನಸ್ತಾಪ ಉಂಟಾಗಿ ಪದೇಪದೇ ತವರು ಮನೆಗೆ ಬರುತ್ತಿ ದ್ದಳು, ಇತ್ತ ಕಡೆಪೋಷಕರೂ ಅವಳ ಮನವೊಲಿಸಿ ಗಂಡನ ಮನೆಗೆ ಬಿಟ್ಟು ಬರುತ್ತಿ ದ್ದರು. 2011ರ ವರೆಗೂ ಹೀಗೆಯೇ ಮುಂದು ವರೆದಿತ್ತು.

    ಒಂದು ದಿನ ಪ್ರಿಯಾಂಕ ನನಗೆ ಗಂಡನ ಜೊತೆಗೆ ಸಂಸಾರ ಮಾಡಲು ಇಷ್ಟವಿಲ್ಲ, ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಪೋಷಕರ ಬಳಿ ಹೇಳಿದ್ದಾಳೆ. ಆಗ ನಿನಗೆ ಮದುವೆಯಾಗಿದ್ದು, ಈ ರೀತಿಯಾಗಿ ಮಾಡು ವುದು ಸರಿಯಲ್ಲ ಎಂದು ಸಂಬಂಧಿಕರು ಎಲ್ಲ ರೀತಿಯ ಬುದ್ಧಿವಾದ ಹೇಳಿ, ಮತ್ತೆ ಗಂಡನ ಮನೆಗೆ ಬಿಟ್ಟು ಬಂದಿದ್ದರು. ಈ ವಿಚಾರ ಗಂಡನ ಮನೆಯವರಿಗೆ ಗೊತ್ತಾಗಿತ್ತು. ಇದು ನಮ್ಮ ಮನೆತನದ ಮರ್ಯಾದೆ ಪ್ರಶ್ನೆ ಎಂದುಕೊಂಡು ಯಾರಿಗೂ ಹೇಳದೇ ಸುಮ್ಮನಾಗಿದ್ದರು. ಈ ಮಧ್ಯೆ ಗಂಡನ ಮನೆಯವರು ಪತ್ನಿ ಪ್ರಿಯಾಂಕ ಅಂಗಡಿಗೆ ಹೋದವಳು ವಾಪಸ್ ಮನೆಗೆ ಬಂದಿಲ್ಲ ಎಂದು ಪ್ರಿಯಾಂಕ ಪೋಷಕರಿಗೆ ಹೇಳಿದ್ದರು. ಬಹುಶಆಕೆ ಪ್ರಿಯಕರನ ಜತೆ ಓಡಿ ಹೋಗಿರ ಬಹುದು ಎಂದು ಅವರು ಸುಮ್ಮನಾಗಿದ್ದರು.

    ಪ್ರಿಯಾಂಕ ಪಾಟೀಲ ಸುಮಾರು 10 ವರ್ಷಗಳ ಕಾಲ ನಾಪತ್ತೆ ಅಂತಲೇ ಬಿಂಬಿಸ ಲಾಗಿತ್ತು. ಒಂದು ದಿನ ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಬಾರ್ ನಲ್ಲಿ ಕುಳಿತು ಕುಡಿಯುವಾಗ ತನ್ನ ಪತ್ನಿಯನ್ನು ಕೊಂದಿರುವುದಾಗಿ ಬಡಬಡಿಸಿದ್ದಾನೆ. ಇಷ್ಟೇ ಸಾಕು ಕೊಲೆ ರಹಸ್ಯ ಪೋಲಿಸ್ ಕಿವಿಗೆ ಬಿದ್ದಿದೆ.

    ತಕ್ಷಣ ಅಲರ್ಟ್ ಆದ ಪೆÇಲೀಸರು ಹುಚ್ಚಪ್ಪಗೌಡನ ಪತ್ನಿ ಪ್ರಿಯಾಂಕ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಆಕೆ ಹತ್ತು ವರ್ಷದ ಹಿಂದೆ ನಾಪತ್ತೆ ಯಾಗಿರುವದು ಗೊತ್ತಾಗುತ್ತದೆ. ತಕ್ಷಣ ಪೋಲಿಸರು ಪ್ರಿಯಾಂಕ ಪೋಷಕರನ್ನು ವಿಚಾರಣೆ ನಡೆಸಿ ನಿಮ್ಮ ಮಗಳು ಕೊಲೆ ಯಾಗಿರುವ ಶಂಕೆ ವ್ಯಕ್ತಪಡಿಸಿದಾಗ ಪ್ರಿಯಾಂಕ ತಾಯಿ ಮುದ್ದೇಬಿಹಾಳ ಪೆÇಲೀಸ್ ಠಾಣೆಗೆ
    ಮಗಳು ಕಾಣೆಯಾದ ಬಗ್ಗೆ 2021 ರ ಜೂನ್ 1ರಂದು ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು.

    ವಿಚಾರಣೆ ಆರಂಭಿಸಿದ ಪೋಲಿಸರು ಪ್ರಿಯಾಂಕ ಯಾರನ್ನು ಪ್ರೀತಿಸುತ್ತಿ ದ್ದಳು ಎನ್ನುವ ಬಗ್ಗೆ ತನಿಖೆ ನಡೆಸಿದಾಗ ಶ್ರೀಧರ ಎಂಬ ಯುವಕ ಎಂದು ಗೊತ್ತಾಗಿದೆ. ಆತನನ್ನು ಹುಡುಕಲು ಹೋದರೆ ಆತನು ಸಹ 10 ವರ್ಷಗಳಿಂದ ನಾಪತ್ತೆಯಾಗಿರುವದು ಗೊತ್ತಾಗಿ, ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಹಾಗೂ ಅವರ ಸಹೋದರ ಸಿದ್ದಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮರ್ಡರ್ ಮಿಸ್ಟರಿ ಹೊರ ಬಂದಿದೆ.

    ನಡೆದಿದ್ದು ಏನು?:

    ಆರಂಭದಲ್ಲಿ ಪ್ರಿಯಾಂಕ ಕಾಣೆಯಾದ ಬಗ್ಗೆ ಕುಟುಂಬಸ್ಥರು ಸುಮ್ಮನಾಗಿದ್ದರು. ತನ್ನ ಪ್ರಿಯಕರ ಶ್ರೀಧರ ಜೊತೆಗೆ ಹೋಗಿರ ಬಹುದು ಎಂದು ತಿಳಿದು ಸುಮ್ಮನಾಗಿದ್ದರು. ಜೊತೆಗೆ ಮರ್ಯಾದೆಗೆ ಹೆದರಿ ಕುಟುಂಬಸ್ಥರು ದೂರ ನೀಡಿರಲಿಲ್ಲ.ಬಾರ್ ನಲ್ಲಿ ವಿಷಯ ಬಾಯ್ಬಿಟ್ಟಿದ್ದ ಹುಚ್ಚಪ್ಪಗೌಡಪೋಲಿಸರ ಎದುರು ತಾವು ಮಾಡಿದ ಕೊಲೆ ರಹಸ್ಯ ಎಳೆ ಎಳೆಯಾಗಿ ಹೇಳಿದಾಗ ಪೋಲಿಸರೇ ಅಚ್ಚರಿ ಪಡು ವಂತಾಗಿತ್ತು.

    ತನ್ನ ಪತ್ನಿ ಬೇರೆಯವರ ಜತೆ ಅನೈತಿಕ ಸಂಬಂಧ ಹೊಂದಿರುವದನ್ನು ಸಹಿಸದ ಹುಚ್ಚಪ್ಪಗೌಡ ಸಹೋದರ ಸಿದ್ದಪ್ಪ ಜತೆ ಸೇರಿ ಪ್ರಿಯಾಂಕಳನ್ನು ದೇವರ ದರ್ಶನಕ್ಕೆ ಶ್ರೀಶೈಲಗೆ ಹೋಗೋಣ ಎಂದು ಪುಸಲಾಯಿಸಿ ಪ್ರಿಯಾಂಕಳನ್ನು ಪುಸಲಾಯಿಸಿ 24 ಜುಲೈ 2011ರಂದು ಬಾಡಿಗೆ ಕಾರು ಮಾಡಿಕೊಂಡು ಶ್ರೀಶೈಲಗೆ ಹೋಗುತ್ತಾರೆ. ದೇವರ ದರ್ಶನ ಪಡೆದು ವಾಪಸ್ ಬರುವಾಗ ಅಂದರೆ 25 ಜುಲೈ 2011ರಂದು ಆಂಧ್ರಪ್ರದೇಶದ ಕೊರಪುರ ಫಾರೆಸ್ಟ್ ಚೆಕ್ ಪೆÇೀಸ್ಟ್ ಬಳಿಯ, ಮಂತನಾಲಮ್ ಹಳ್ಳಿಯ ಬ್ರಿಜ್ ಬಳಿ ಪ್ರಿಯಾಂಕಳನ್ನು ಕುತ್ತಿಗೆಗೆ ನೈಲಾನ್ ಪ್ಲಾಸ್ಟಿಕ್ ಹಗ್ಗದಿಂದ ಬಿಗಿದು ಕೊಲೆ ಮಾಡಿ, ದಟ್ಟವಾದ ಕಾಡಿನ ಬ್ರಿಜ್ ಕೆಳಗೆ ಅವಳನ್ನು ವಿವಸ್ತ್ರಗೊಳಿಸಿ ಎಸೆದು ಹೋಗಿರುತ್ತಾರೆ. ಅವಳ ಮೈಮೇಲಿನ ಬಟ್ಟೆಯನ್ನು ನಾರಾ ಯಣಪುರ ಡ್ಯಾಂನ ಬ್ರಿಜ್ ನಲ್ಲಿ ಎಸೆದು ಹೋಗಿರುತ್ತಾರೆ.

    7 ಜುಲೈ ರಂದು ಆರೋಪಿಗಳನ್ನು ಬಂಧಿಸಿರುವ ಪೋಲಿಸರು ಅವರ ವಿರುದ್ಧ 120ಬಿ, 302, 201, 506, 34 ಐಪಿಸಿ ಸೆಕ್ಷನ್ ಗಳನ್ನು ಹಾಕಿ ಜೈಲಿಗಟ್ಟಿದ್ದಾರೆ.ಹೀಗೆ ಸುಮಾರು 10 ವರ್ಷಗಳ ಹಿಂದೆ ನಡೆದಿರುವ ಒಂದು ಭಯಾನಕ, ಸಿನಿಮೀಯ ರೀತಿಯ ಕೊಲೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಮರ್ಯಾದೆಗೆ ಹೆದರಿ ದೂರು ಕೊಡಲು ಹಿಂಜರಿದಿದ್ದ ಪ್ರಿಯಾಂಕಳ ಪೋಷಕರು ಮಗಳನ್ನು ಕಳೆದುಕೊಂಡು ಶಾಕ್ ಗೆ ಒಳಗಾಗುವಂತೆ ಮಾಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಪಾಟೀಲ ಆತನ ಸಹೋದರ ಸಿದ್ದನಗೌಡ ಪಾಟೀಲ ಹಾಗೂ ಅಂದು ಶ್ರೀಶೈಲಕ್ಕೆ ಹೋಗಿದ್ದ ಕಾರಿನ ಚಾಲಕ ಉಮೇಶ ಕಮಲಾಪುರ ಅವರನ್ನು ಬಂಧಿಸಿದ್ದಾರೆ.
    ಅಲ್ಲದೆ ಮುದ್ದೇಬಿಹಾಳ ಠಾಣೆ ಪೋಲಿಸರು ಆಂಧ್ರ ಪ್ರದೇಶದ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.
    ಸದ್ಯ ಆಕೆಯ ಪ್ರಿಯಕರ ಶ್ರೀಧರನ ಹುಡು ಕಾಡುತ್ತಿರುವ ಪೆÇಲೀಸರು. ಆತನಿಗೆ ಏನಾದರೂ ಸಮಸ್ಯೆ ಆಗಿದೆಯಾ ಅವನು ಎಲ್ಲಿದ್ದಾನೆ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು…

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.