nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ವರ್ಷ ಹಿಂದಿನ ಮರ್ಯಾದಾಹತ್ಯೆ ಪ್ರಕರಣ ಬೆಳಕಿಗೆ
    ರಾಜ್ಯ ಸುದ್ದಿ July 20, 2022

    10 ವರ್ಷ ಹಿಂದಿನ ಮರ್ಯಾದಾಹತ್ಯೆ ಪ್ರಕರಣ ಬೆಳಕಿಗೆ

    By adminJuly 20, 2022No Comments3 Mins Read
    vejayapura

    ವಿಜಯಪುರದಲ್ಲಿ 10 ವರ್ಷಗಳ ಹಿಂದೆ ನಡೆದಿದ್ದ ಮರ್ಯಾದಾ ಹತ್ಯೆ ಪ್ರಕರಣ ಇದೀಗ ಬಹಿರಂಗಗೊಂಡಿದೆ. ಈ ಪ್ರಕರಣ ಇಡೀ ಜಿಲ್ಲೆಯನ್ನೇ ಬೆಚ್ಚಿ ಬಿಳಿಸುವಂತೆ ಮಾಡಿದೆ.

    ವಿಜಯಪುರ ನಗರದ ಬಸವರಾಜ ಮಮದಾ ಪುರ ಇವರ ಪುತ್ರಿ ಪ್ರಿಯಾಂಕಾ ಇವಳನ್ನು, ತಮ್ಮ ಸಂಬಂಧಿಕ ರಲ್ಲಿಯೇ ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಹುಚ್ಚಪ್ಪಗೌಡ ಪಾಟೀಲ ಎನ್ನುವ ನೊಂದಿಗೆ 2008 ರಲ್ಲಿ ಮದುವೆ ಮಾಡಿ ಕೊಡಲಾಗಿತ್ತು.

    ಮದುವೆ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ನಂತರದ ದಿನಗಳಲ್ಲಿ ಇಬ್ಬರಲ್ಲಿಯೂ ಮನಸ್ತಾಪ ಉಂಟಾಗಿ ಪದೇಪದೇ ತವರು ಮನೆಗೆ ಬರುತ್ತಿ ದ್ದಳು, ಇತ್ತ ಕಡೆಪೋಷಕರೂ ಅವಳ ಮನವೊಲಿಸಿ ಗಂಡನ ಮನೆಗೆ ಬಿಟ್ಟು ಬರುತ್ತಿ ದ್ದರು. 2011ರ ವರೆಗೂ ಹೀಗೆಯೇ ಮುಂದು ವರೆದಿತ್ತು.

    ಒಂದು ದಿನ ಪ್ರಿಯಾಂಕ ನನಗೆ ಗಂಡನ ಜೊತೆಗೆ ಸಂಸಾರ ಮಾಡಲು ಇಷ್ಟವಿಲ್ಲ, ನಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದೇನೆ ಎಂದು ಪೋಷಕರ ಬಳಿ ಹೇಳಿದ್ದಾಳೆ. ಆಗ ನಿನಗೆ ಮದುವೆಯಾಗಿದ್ದು, ಈ ರೀತಿಯಾಗಿ ಮಾಡು ವುದು ಸರಿಯಲ್ಲ ಎಂದು ಸಂಬಂಧಿಕರು ಎಲ್ಲ ರೀತಿಯ ಬುದ್ಧಿವಾದ ಹೇಳಿ, ಮತ್ತೆ ಗಂಡನ ಮನೆಗೆ ಬಿಟ್ಟು ಬಂದಿದ್ದರು. ಈ ವಿಚಾರ ಗಂಡನ ಮನೆಯವರಿಗೆ ಗೊತ್ತಾಗಿತ್ತು. ಇದು ನಮ್ಮ ಮನೆತನದ ಮರ್ಯಾದೆ ಪ್ರಶ್ನೆ ಎಂದುಕೊಂಡು ಯಾರಿಗೂ ಹೇಳದೇ ಸುಮ್ಮನಾಗಿದ್ದರು. ಈ ಮಧ್ಯೆ ಗಂಡನ ಮನೆಯವರು ಪತ್ನಿ ಪ್ರಿಯಾಂಕ ಅಂಗಡಿಗೆ ಹೋದವಳು ವಾಪಸ್ ಮನೆಗೆ ಬಂದಿಲ್ಲ ಎಂದು ಪ್ರಿಯಾಂಕ ಪೋಷಕರಿಗೆ ಹೇಳಿದ್ದರು. ಬಹುಶಆಕೆ ಪ್ರಿಯಕರನ ಜತೆ ಓಡಿ ಹೋಗಿರ ಬಹುದು ಎಂದು ಅವರು ಸುಮ್ಮನಾಗಿದ್ದರು.

    ಪ್ರಿಯಾಂಕ ಪಾಟೀಲ ಸುಮಾರು 10 ವರ್ಷಗಳ ಕಾಲ ನಾಪತ್ತೆ ಅಂತಲೇ ಬಿಂಬಿಸ ಲಾಗಿತ್ತು. ಒಂದು ದಿನ ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಬಾರ್ ನಲ್ಲಿ ಕುಳಿತು ಕುಡಿಯುವಾಗ ತನ್ನ ಪತ್ನಿಯನ್ನು ಕೊಂದಿರುವುದಾಗಿ ಬಡಬಡಿಸಿದ್ದಾನೆ. ಇಷ್ಟೇ ಸಾಕು ಕೊಲೆ ರಹಸ್ಯ ಪೋಲಿಸ್ ಕಿವಿಗೆ ಬಿದ್ದಿದೆ.

    ತಕ್ಷಣ ಅಲರ್ಟ್ ಆದ ಪೆÇಲೀಸರು ಹುಚ್ಚಪ್ಪಗೌಡನ ಪತ್ನಿ ಪ್ರಿಯಾಂಕ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಆಕೆ ಹತ್ತು ವರ್ಷದ ಹಿಂದೆ ನಾಪತ್ತೆ ಯಾಗಿರುವದು ಗೊತ್ತಾಗುತ್ತದೆ. ತಕ್ಷಣ ಪೋಲಿಸರು ಪ್ರಿಯಾಂಕ ಪೋಷಕರನ್ನು ವಿಚಾರಣೆ ನಡೆಸಿ ನಿಮ್ಮ ಮಗಳು ಕೊಲೆ ಯಾಗಿರುವ ಶಂಕೆ ವ್ಯಕ್ತಪಡಿಸಿದಾಗ ಪ್ರಿಯಾಂಕ ತಾಯಿ ಮುದ್ದೇಬಿಹಾಳ ಪೆÇಲೀಸ್ ಠಾಣೆಗೆ
    ಮಗಳು ಕಾಣೆಯಾದ ಬಗ್ಗೆ 2021 ರ ಜೂನ್ 1ರಂದು ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು.

    ವಿಚಾರಣೆ ಆರಂಭಿಸಿದ ಪೋಲಿಸರು ಪ್ರಿಯಾಂಕ ಯಾರನ್ನು ಪ್ರೀತಿಸುತ್ತಿ ದ್ದಳು ಎನ್ನುವ ಬಗ್ಗೆ ತನಿಖೆ ನಡೆಸಿದಾಗ ಶ್ರೀಧರ ಎಂಬ ಯುವಕ ಎಂದು ಗೊತ್ತಾಗಿದೆ. ಆತನನ್ನು ಹುಡುಕಲು ಹೋದರೆ ಆತನು ಸಹ 10 ವರ್ಷಗಳಿಂದ ನಾಪತ್ತೆಯಾಗಿರುವದು ಗೊತ್ತಾಗಿ, ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಹಾಗೂ ಅವರ ಸಹೋದರ ಸಿದ್ದಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮರ್ಡರ್ ಮಿಸ್ಟರಿ ಹೊರ ಬಂದಿದೆ.

    ನಡೆದಿದ್ದು ಏನು?:

    ಆರಂಭದಲ್ಲಿ ಪ್ರಿಯಾಂಕ ಕಾಣೆಯಾದ ಬಗ್ಗೆ ಕುಟುಂಬಸ್ಥರು ಸುಮ್ಮನಾಗಿದ್ದರು. ತನ್ನ ಪ್ರಿಯಕರ ಶ್ರೀಧರ ಜೊತೆಗೆ ಹೋಗಿರ ಬಹುದು ಎಂದು ತಿಳಿದು ಸುಮ್ಮನಾಗಿದ್ದರು. ಜೊತೆಗೆ ಮರ್ಯಾದೆಗೆ ಹೆದರಿ ಕುಟುಂಬಸ್ಥರು ದೂರ ನೀಡಿರಲಿಲ್ಲ.ಬಾರ್ ನಲ್ಲಿ ವಿಷಯ ಬಾಯ್ಬಿಟ್ಟಿದ್ದ ಹುಚ್ಚಪ್ಪಗೌಡಪೋಲಿಸರ ಎದುರು ತಾವು ಮಾಡಿದ ಕೊಲೆ ರಹಸ್ಯ ಎಳೆ ಎಳೆಯಾಗಿ ಹೇಳಿದಾಗ ಪೋಲಿಸರೇ ಅಚ್ಚರಿ ಪಡು ವಂತಾಗಿತ್ತು.

    ತನ್ನ ಪತ್ನಿ ಬೇರೆಯವರ ಜತೆ ಅನೈತಿಕ ಸಂಬಂಧ ಹೊಂದಿರುವದನ್ನು ಸಹಿಸದ ಹುಚ್ಚಪ್ಪಗೌಡ ಸಹೋದರ ಸಿದ್ದಪ್ಪ ಜತೆ ಸೇರಿ ಪ್ರಿಯಾಂಕಳನ್ನು ದೇವರ ದರ್ಶನಕ್ಕೆ ಶ್ರೀಶೈಲಗೆ ಹೋಗೋಣ ಎಂದು ಪುಸಲಾಯಿಸಿ ಪ್ರಿಯಾಂಕಳನ್ನು ಪುಸಲಾಯಿಸಿ 24 ಜುಲೈ 2011ರಂದು ಬಾಡಿಗೆ ಕಾರು ಮಾಡಿಕೊಂಡು ಶ್ರೀಶೈಲಗೆ ಹೋಗುತ್ತಾರೆ. ದೇವರ ದರ್ಶನ ಪಡೆದು ವಾಪಸ್ ಬರುವಾಗ ಅಂದರೆ 25 ಜುಲೈ 2011ರಂದು ಆಂಧ್ರಪ್ರದೇಶದ ಕೊರಪುರ ಫಾರೆಸ್ಟ್ ಚೆಕ್ ಪೆÇೀಸ್ಟ್ ಬಳಿಯ, ಮಂತನಾಲಮ್ ಹಳ್ಳಿಯ ಬ್ರಿಜ್ ಬಳಿ ಪ್ರಿಯಾಂಕಳನ್ನು ಕುತ್ತಿಗೆಗೆ ನೈಲಾನ್ ಪ್ಲಾಸ್ಟಿಕ್ ಹಗ್ಗದಿಂದ ಬಿಗಿದು ಕೊಲೆ ಮಾಡಿ, ದಟ್ಟವಾದ ಕಾಡಿನ ಬ್ರಿಜ್ ಕೆಳಗೆ ಅವಳನ್ನು ವಿವಸ್ತ್ರಗೊಳಿಸಿ ಎಸೆದು ಹೋಗಿರುತ್ತಾರೆ. ಅವಳ ಮೈಮೇಲಿನ ಬಟ್ಟೆಯನ್ನು ನಾರಾ ಯಣಪುರ ಡ್ಯಾಂನ ಬ್ರಿಜ್ ನಲ್ಲಿ ಎಸೆದು ಹೋಗಿರುತ್ತಾರೆ.

    7 ಜುಲೈ ರಂದು ಆರೋಪಿಗಳನ್ನು ಬಂಧಿಸಿರುವ ಪೋಲಿಸರು ಅವರ ವಿರುದ್ಧ 120ಬಿ, 302, 201, 506, 34 ಐಪಿಸಿ ಸೆಕ್ಷನ್ ಗಳನ್ನು ಹಾಕಿ ಜೈಲಿಗಟ್ಟಿದ್ದಾರೆ.ಹೀಗೆ ಸುಮಾರು 10 ವರ್ಷಗಳ ಹಿಂದೆ ನಡೆದಿರುವ ಒಂದು ಭಯಾನಕ, ಸಿನಿಮೀಯ ರೀತಿಯ ಕೊಲೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಮರ್ಯಾದೆಗೆ ಹೆದರಿ ದೂರು ಕೊಡಲು ಹಿಂಜರಿದಿದ್ದ ಪ್ರಿಯಾಂಕಳ ಪೋಷಕರು ಮಗಳನ್ನು ಕಳೆದುಕೊಂಡು ಶಾಕ್ ಗೆ ಒಳಗಾಗುವಂತೆ ಮಾಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ ಪತಿ ಹುಚ್ಚಪ್ಪಗೌಡ ಪಾಟೀಲ ಆತನ ಸಹೋದರ ಸಿದ್ದನಗೌಡ ಪಾಟೀಲ ಹಾಗೂ ಅಂದು ಶ್ರೀಶೈಲಕ್ಕೆ ಹೋಗಿದ್ದ ಕಾರಿನ ಚಾಲಕ ಉಮೇಶ ಕಮಲಾಪುರ ಅವರನ್ನು ಬಂಧಿಸಿದ್ದಾರೆ.
    ಅಲ್ಲದೆ ಮುದ್ದೇಬಿಹಾಳ ಠಾಣೆ ಪೋಲಿಸರು ಆಂಧ್ರ ಪ್ರದೇಶದ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.
    ಸದ್ಯ ಆಕೆಯ ಪ್ರಿಯಕರ ಶ್ರೀಧರನ ಹುಡು ಕಾಡುತ್ತಿರುವ ಪೆÇಲೀಸರು. ಆತನಿಗೆ ಏನಾದರೂ ಸಮಸ್ಯೆ ಆಗಿದೆಯಾ ಅವನು ಎಲ್ಲಿದ್ದಾನೆ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.