nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣ ವರದಿ:  ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    ಜಿಲ್ಲಾ ಸುದ್ದಿ January 11, 2025

    ಜಿಲ್ಲೆಯಲ್ಲಿ 13 ಬಾಲ್ಯ ವಿವಾಹ ಪ್ರಕರಣ ವರದಿ:  ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    By adminJanuary 11, 2025No Comments2 Mins Read
    shubha kalyan

    ತುಮಕೂರು:  ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೈಮಾಸಿಕಕ್ಕೆ ಸಂಬಂಧಿಸಿದಂತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.


    Provided by
    Provided by

    ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಾಂತ್ವನ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಾಂತ್ವನ ಕೇಂದ್ರಗಳು ಮಹಿಳೆಯರು ಸುಲಭವಾಗಿ ಗುರುತಿಸಿರುವ ಸ್ಥಳದಲ್ಲಿರಬೇಕು. ಕೇಂದ್ರದಲ್ಲಿ ಶೋಷಣೆಗೊಳಗಾದ, ನೊಂದ ಮಹಿಳೆಯರ ರಕ್ಷಣೆ, ಕಾನೂನಿನ ನೆರವು, ತಾತ್ಕಾಲಿಕ ಆಶ್ರಯ, ಆಪ್ತ ಸಮಾಲೋಚನೆ ಇತ್ಯಾದಿ ನೆರವುಗಳನ್ನು ಒದಗಿಸಬೇಕು. ಸಾಂತ್ವನ ಕೇಂದ್ರಗಳಲ್ಲಿ ಸ್ವೀಕರಿಸಲಾದ ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಬೇಕೆಂದು ಸೂಚನೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಮಾತನಾಡಿ, ಸ್ವೀಕಾರ ಕೇಂದ್ರ, ಸಖಿ ಒನ್ ಸ್ಟಾಪ್ ಸೆಂಟರ್, ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಮಾಹಿತಿಯನ್ನು ಸಭೆಗೆ ತಿಳಿಸಿದರು.

    ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ವಿವಿಧ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ತುಮಕೂರು: ಪಾವಗಡ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು 5ನೇ ತರಗತಿಯಲ್ಲಿ…

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.