ಮಧುಗಿರಿ: ಕುರಿ ಮರಿಗಳನ್ನು ನಾಯಿಗಳು ಕಚ್ಚಿ ಕೊಂದು ಹಾಕಿದ ಘಟನೆ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಗೆ ಒಳಪಡುವ ತೊಣಚಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕುರಿಗಾಯಿಯಾದ ದೊಡ್ಡ ರಂಗಯ್ಯನವರಿಗೆ ಸೇರಿದ ಸುಮಾರು 14 ಕುರಿಗಳು ನಾಯಿಗಳ ದಾಳಿಗೆ ಬಲಿಯಾಗಿವೆ. ಕುರಿಗಳನ್ನೇ ನಂಬಿಕೊಂಡು ಬದುಕಿರುವ ಇವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಈ ಭಾಗದಲ್ಲಿ ನಾಯಿ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ರೈತರಿಗೆ ಕಷ್ಟಕರವಾಗಿದೆ. ಕಷ್ಟಪಟ್ಟು ಸಾಕಿರುವ 14 ಕುರಿಗಳನ್ನು ನಾಯಿಗಳು ಕಚ್ಚಿ ಕೊಂದು ಹಾಕಿವೆ. ಸಂಕಷ್ಟದಲ್ಲಿರುವ ರೈತನಿಗೆ ಸರ್ಕಾರ ಪರಿಹಾರ ನೀಡುವ ಮೂಲಕ ರೈತರ ರಕ್ಷಣೆಗೆ ಮುಂದಾಗಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz