nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್

    January 6, 2026

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ

    January 6, 2026

    ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    January 6, 2026
    Facebook Twitter Instagram
    ಟ್ರೆಂಡಿಂಗ್
    • ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್
    • ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ
    • ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ
    • ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ
    • ತುಮಕೂರಿನಲ್ಲಿ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ: ಜ. 16ರಿಂದ ಕ್ರೀಡಾ ಹಬ್ಬ ಆರಂಭ
    • ಹೊಳೆನರಸೀಪುರ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್ ಭೇಟಿ: ಅಧಿಕಾರಿಗಳಿಗೆ ತರಾಟೆ
    • ತಿಪಟೂರು: ಜನವರಿ 8 ರಿಂದ ವಿವೇಕಾನಂದ ಇಂಟರ್ನ್ಯಾಷನಲ್ ಶಾಲೆಯ 17ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ
    • ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ
    ಸ್ಪೆಷಲ್ ನ್ಯೂಸ್ December 10, 2021

    ವಿದ್ಯಾರ್ಥಿಯ ಗುಂಪು ಹತ್ಯೆ: 20 ವಿದ್ಯಾರ್ಥಿಗಳಿಗೆ ಮರಣದಂಡನೆ

    By adminDecember 10, 2021No Comments2 Mins Read
    bangladesh

    ಬಾಂಗ್ಲಾದೇಶ: ಸರ್ಕಾರವನ್ನ ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ವಿದ್ಯಾರ್ಥಿಯೊಬ್ಬನನ್ನ ಸಹ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿ ಕೊಲೆ ಮಾಡಿತ್ತು.. ಈ ಘಟನೆಗೆ ಸಂಬಂಧಿಸಿದಂತೆ 20 ವಿದ್ಯಾರ್ಥಿಗಳಿಗೆ ಬಾಂಗ್ಲಾದೇಶದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.. ಸರ್ಕಾರವನ್ನು ಟೀಕಿಸಿ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿಯೊಬ್ಬನನ್ನು ಕಾಲೇಜು ಆವರಣದಲ್ಲೇ ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.. ಹೀಗಾಗಿ ಪ್ರಕರಣದಲ್ಲಿ 20 ವಿದ್ಯಾರ್ಥಿಗಳಿಗೆ ಢಾಕಾ ಕೋರ್ಟ್‌ ಮರಣದಂಡನೆ ಶಿಕ್ಷೆ ವಿಧಿಸಿದೆ.

    ಈ ಮೂಲಕ ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿರುವುದಾಗಿ ಕೋರ್ಟ್‌ ಹೇಳಿದೆ. ಆರೋಪಿಗಳೆಲ್ಲರೂ ದೋಷಿಗಳೆಂದು ಸಾಬೀತಾಗಿದ್ದು, 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಮೂರ್ತಿ ಅಬು ಜಾಫರ್‌ ಮೊಹಮ್ಮದ್‌ ಕಮ್ರುಜ್ಜಾಮನ್‌ ಘೋಷಿಸಿದ್ದಾರೆ. ಒಟ್ಟು 25 ತಪ್ಪಿತಸ್ಥರ ಪೈಕಿ ಮೂವರು ಕೃತ್ಯ ನಡೆದ ದಿನದಿಂದಲೂ   ತಲೆಮರೆಸಿಕೊಂಡಿದ್ದು, ಉಳಿದ ಎಲ್ಲರೂ ಜೈಲಿನಲ್ಲಿದ್ದಾರೆ.


    Provided by
    Provided by

    2019ರ ಅಕ್ಟೋಬರ್‌ 6ರಂದು ಬಾಂಗ್ಲಾದೇಶದ ಇಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ವಿದ್ಯಾರ್ಥಿ ಅಬ್ರಾರ್‌ ಫಹಾದ್‌ ಎಂಬುವವರನ್ನು ಕಾಲೇಜಿನ ಆವರಣದಲ್ಲಿ ಉದ್ರಿಕ್ತ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿತ್ತು. ಶಿಕ್ಷೆಗೊಳಗಾಗಿರುವ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌ ಮತ್ತಿತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ ಫಹಾದ್‌ ಮೇಲೆ ಹಲ್ಲೆ ನಡೆಸಿದ್ದರು. ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಬಾಂಗ್ಲಾದೇಶ್‌ ಛಾತ್ರ ಲೀಗ್‌ (ಬಿಸಿಎಲ್‌)ನ ಕಾರ್ಯಕರ್ತರು ಹಲ್ಲೆಯಲ್ಲಿ ಭಾಗಿಯಾಗಿದ್ದರು.

    21 ವರ್ಷದ ವಿದ್ಯಾರ್ಥಿಯ ಹತ್ಯೆಗೆ ಸಂಬಂಧಿಸಿ ಬಾಂಗ್ಲಾದೇಶದೆಲ್ಲೆಡೆ ಪ್ರತಿಭಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ಫೂಟೇಜ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಘಟನೆ ನಡೆದ ಬಳಿಕ ಬಿಸಿಎಲ್‌ ವಿದ್ಯಾರ್ಥಿ ಸಂಘಟನೆಯಿಂದ ಎಲ್ಲ ಆರೋಪಿಗಳನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಶೇಖ್ ಹಸೀನಾ ಅವರೇ ಆರೋಪಿಗಳನ್ನು ಸಂಘಟನೆಯಿಂದ ಹೊರಹಾಕುವಂತೆ ಸೂಚಿಸಿದ್ದರು. ಕಾಲೇಜಿನಿಂದಲೂ ಅವರನ್ನು ಹೊರ ಹಾಕಲಾಗಿತ್ತು. ಭಾರತ ಮತ್ತು ಬಾಂಗ್ಲಾ ನಡುವಣ ನದಿ ನೀರು ಹಂಚಿಕೆ ವಿಚಾರವಾಗಿ ಆಡಳಿತರೂಢ ಅವಾಮಿ ಲೀಗ್‌ ಸರ್ಕಾರವನ್ನು ಫಹಾದ್‌ ಫೇಸ್‌ ಬುಕ್‌ನಲ್ಲಿ ಟೀಕಿಸಿದ್ದಕ್ಕೆ ವಿದ್ಯಾರ್ತಿಗಳ ಗುಂಪು ಉದ್ವೇಗಕ್ಕೆ ಒಳಗಾಗಿ ವಿದ್ಯಾರ್ಥಿಯನ್ನ ಕೊಲೆ ಮಾಡಿದ್ದರು ಎನ್ನಲಾಗಿದೆ.

    ವರದಿ : ಆಂಟೋನಿ ಬೇಗೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್

    January 6, 2026

    ತುರುವೇಕೆರೆ: “ತುಮಕೂರು ಜಿಲ್ಲೆಯಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ರಥವನ್ನು ಮುನ್ನಡೆಸಿದ ಸಾಲಿನಲ್ಲಿ ಬಂದಕುಂಟೆ ನಾಗರಾಜುರವರು…

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ

    January 6, 2026

    ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    January 6, 2026

    ತುಮಕೂರು: ಜ.8ರಿಂದ ಗೊಲ್ಲರಹಟ್ಟಿಗಳಲ್ಲಿ ಜನ ಜಾಗೃತಿ ಕಾರ್ಯಕ್ರಮ

    January 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.