nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023
    Facebook Twitter Instagram
    ಟ್ರೆಂಡಿಂಗ್
    • ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ
    • ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?
    • ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ
    • ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ
    • ತುರುವೇಕೆರೆ: ನೂರಾರು ಅನಾಥ ಶವಗಳಿಗೆ ಮುಕ್ತಿ ದೊರಕಿಸಿದ ಆಟೋ ಚಾಲಕ ಖಲೀಲ್
    • ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು
    • ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ
    • ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಕ್ಕಲಿಗರ ಸಂಘದ ಚುನಾವಣೆ: ಆಮಿಷ ಒಡ್ಡಿ ಮತಬೇಡುವವರನ್ನು ಬೆಂಬಲಿಸಬೇಡಿ | ಯುವ ಮುಖಂಡ ಸಚಿನ್ ಸರಗೂರು
    ರಾಜ್ಯ ಸುದ್ದಿ December 2, 2021

    ಒಕ್ಕಲಿಗರ ಸಂಘದ ಚುನಾವಣೆ: ಆಮಿಷ ಒಡ್ಡಿ ಮತಬೇಡುವವರನ್ನು ಬೆಂಬಲಿಸಬೇಡಿ | ಯುವ ಮುಖಂಡ ಸಚಿನ್ ಸರಗೂರು

    By adminDecember 2, 2021No Comments2 Mins Read
    okkaligara sangha

    ಹಾಸನ:  ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹಣ, ಹೆಂಡದ ಆಮಿಷ ಒಡ್ಡಿ ಮತಯಾಚಿಸುವವರನ್ನು ಬೆಂಬಲಿಸದೇ,  ಒಕ್ಕಲಿಗ ಸಮುದಾಯದ ಧ್ಯೇಯ, ಗೌರವ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಸನದ ಯುವ ಮುಖಂಡ ಸಚಿನ್ ಸರಗೂರು ಮನವಿ ಮಾಡಿದ್ದಾರೆ.

    ಕೃಷಿಯನ್ನೇ ಅವಲಂಬಿಸಿರುವ ಶ್ರಮಿಕ ವರ್ಗವಾಗಿರುವ ಒಕ್ಕಲಿಗ ಸಮಾಜವು ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಒಕ್ಕಲಿಗರ ಸಂಘಕ್ಕೆ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಚುನಾವಣೆಯ ಸಂದರ್ಭ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ಮಂತ್ರ ಜಪಿಸಿದರೂ, ಗೆದ್ದ ಬಳಿಕ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕೆ ಕೆಲಸ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಸಚಿನ್ ಬೇಸರ ವ್ಯಕ್ತಪಡಿಸಿದರು.

    ಇನ್ನೊಂದೆಡೆಯಲ್ಲಿ ಒಕ್ಕಲಿಗರ ಸಂಘದ ಚುನಾವಣೆ ಬರುವ ಸಮಯದಲ್ಲಿ, ಹಣ, ಹೆಂಡದ ಆಮಿಷವೊಡ್ಡಿ ಮತ ಹಾಕಿಸಿಕೊಂಡು ಕೆಲವರು ಗೆಲುವು ಸಾಧಿಸುತ್ತಿದ್ದಾರೆ. ಈ ರೀತಿಯಾಗಿ ಗೆದ್ದವರು, ಗೆದ್ದ ಬಳಿಕ ತಮ್ಮ ವೈಯಕ್ತಿಕ ಅಭಿವೃದ್ಧಿ ಮಾಡಿಕೊಳ್ಳುತ್ತಾರೆಯೇ ಹೊರತು, ಸಮುದಾಯದ ಅಭಿವೃದ್ಧಿ ಇವರಿಂದ ಸಾಧ್ಯವಿಲ್ಲ. ಹಾಗಾಗಿ ಮತದಾರರು ಯಾವುದೇ ಆಮಿಷಗಳಿಗೊಳಗಾಗದೇ ಸಮುದಾಯದ ಅಭಿವೃದ್ಧಿ ಮಾಡುವಂತಹ ಸೂಕ್ತ ಅಭ್ಯರ್ಥಿಗಳನ್ನು ವಿಜಯಶಾಲಿಯಾಗಿಸಬೇಕು ಎಂದು ಸಚಿನ್ ಮನವಿ ಮಾಡಿದರು.

    ಒಕ್ಕಲಿಗರ ಸಂಘದಿಂದ ಗೆದ್ದವರು, ರೈತರ ದಿನಾಚರಣೆ ಮಾಡುತ್ತಿಲ್ಲ, ಒಕ್ಕಲಿಗರ ದಿನಾಚರಣೆ ಮಾಡುತ್ತಿಲ್ಲ, ಕೆಂಪೇಗೌಡ ದಿನಾಚರಣೆ ಕಾಟಾಚಾರಕ್ಕೆ ಅಥವಾ ತಮ್ಮ ಸ್ವಂತ ಪ್ರಚಾರಕ್ಕೆ ಎಂಬಂತೆ ಮಾಡುತ್ತಿದ್ದಾರೆ. ಒಕ್ಕಲಿಗರ ಪರವಾಗಿ, ರೈತರ ಪರವಾಗಿ ಯಾವುದೇ ಹೋರಾಟ ಮಾಡುತ್ತಿಲ್ಲ. ಪ್ರತಿ ಜಿಲ್ಲೆಯಲ್ಲಿಯೂ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಗೌರವಿಸುವ ಕೆಲಸ ಕೂಡ ಮಾಡುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನ ಮಾಡುತ್ತಿರುವುದನ್ನು ಪ್ರಶ್ನಿಸಲು ಕೂಡ ಮುಂದಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

    ಇಂದು ಹಾಸನದಲ್ಲಿ ಒಕ್ಕಲಿಗರ ಮಕ್ಕಳ ವಿದ್ಯಾಭ್ಯಾಸಕ್ಕೆ  ಸರಿಯಾದ ಹಾಸ್ಟೆಲ್ ಸೌಲಭ್ಯಗಳು ಕೂಡ ಇಲ್ಲವಾಗಿದೆ. ಇದರಿಂದಾಗಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು 40ರಿಂದ 45 ಕಿ.ಮೀ. ದೂರದಿಂದ ದಿನ ನಿತ್ಯ ಪ್ರಯಾಣಿಸುತ್ತಿದ್ದಾರೆ. ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗುತ್ತಿದ್ದರೂ, ಬಸ್ ವ್ಯವಸ್ಥೆ ಮಾಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿಲ್ಲ. ಸಮುದಾಯದ ಸಂಘಟನೆಯ ಮುಖಂಡರುಗಳಾಗಿ, ಮಕ್ಕಳ ಶಿಕ್ಷಣದ ಅಭಿವೃದ್ಧಿಯ ಬಗ್ಗೆ ಕಾಳಜಿವಹಿಸುತ್ತಿಲ್ಲ. ಅವರ ಶೈಕ್ಷಣಿಕ ಏಳಿಗೆಗಾಗಿ ಪ್ರೋತ್ಸಾಹಿಸುತ್ತಿಲ್ಲ ಎಂದು ಅವರು ಆರೋಪಿಸಿದರು.

    ರಾಜ್ಯ ಒಕ್ಕಲಿಗರ ನಿರ್ದೇಶನ ಅಭ್ಯರ್ಥಿಗಳು ಹಣ ಬೆಂಬಲದಿಂದ ಗೆಲುವು ಸಾಧಿಸಿದರೆ ಇದರಿಂದ ಸಮುದಾಯಕ್ಕೆ ಯಾವುದೇ ರೀತಿಯ ಉಪಯೋಗವಿಲ್ಲ. ಕೊವಿಡ್ ಸಂಕಷ್ಟದಂತಹ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಕಷ್ಟದಲ್ಲಿದ್ದಾಗ ಯಾರು ಕೂಡ ಸಮುದಾಯದ ಕಡೆಗೆ ತಿರುಗಿ ನೋಡಿಲ್ಲ. ಇಂದಿಗೂ ಸಮುದಾಯದ ಯುವಕರು ಅತ್ಯುತ್ತಮ ವಿದ್ಯಾಭ್ಯಾಸ ಪಡೆದಿದ್ದರೂ, ಕೂಲಿ ಕೆಲಸ ಮಾಡುವುದು ಅನಿವಾರ್ಯ ಎನ್ನುವಂತಹ ಸ್ಥಿತಿಗೆ ತಲುಪಿದ್ದಾರೆ. ಸಮುದಾಯದ ಯುವಕರಿಗೆ ಉದ್ಯೋಗ ಒದಗಿಸುವುದಕ್ಕೆ ಸಂಘದಲ್ಲಿ ಗೆಲುವು ಸಾಧಿಸುತ್ತಿರುವ ಅಭ್ಯರ್ಥಿಗಳು ಯಾಕೆ ಮುಂದಾಗುತ್ತಿಲ್ಲ? ಎಂದು ಅವರು ಪ್ರಶ್ನಿಸಿದರು.

    ರಾಜ್ಯ ಒಕ್ಕಲಿಗರ ಸಂಘ ಒಕ್ಕಲಿಗರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾದರೆ, ಮತದಾರರು ಹಣ, ಹೆಂಡದ ಆಮಿಷಗೊಳಗಾಗದೇ, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಆಮಿಷ ಒಡ್ಡಿ ಮತಪಡೆಯುವವರಿಂದ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಾಗಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ನಮ್ಮ ಸಮುದಾಯದ ಸಂಘಕ್ಕೆ ಬಲತುಂಬೋಣ, ಸಮುದಾಯದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಸಚಿನ್ ಸರಗೂರು ಮನವಿ ಮಾಡಿದರು.

    admin
    • Website

    Related Posts

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023

    ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರ ಆಕ್ರೋಶ

    May 27, 2023
    Our Picks

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    ಬುಲೆಟ್ ರೈಲು ಯೋಜನೆಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗಾಗಿ ಪಡೆದ ಮೊತ್ತದಿಂದ ರೈತರೊಬ್ಬರಿಂದ 75 ಲಕ್ಷ ಸುಲಿಗೆ ಮಾಡಿದ ಆರೋಪಿಗಳು

    May 27, 2023

    ಮಣಿಪುರದಲ್ಲಿ ಅಗತ್ಯ ವಸ್ತುಗಳವರೆಗೆ ಬೆಲೆ ದುಪ್ಪಟ್ಟು: ಜನರ ಜೀವನವು ಶೋಚನೀಯ

    May 27, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭ

    May 28, 2023

    ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್​​ ಪ್ರತಿಷ್ಠಾಪನೆ ನೆರವೇರಿತು.…

    ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ: ಮೊದಲ ಬಾರಿಗೆ ಸಚಿವರಾದವರ ಸಂಖ್ಯೆ ಎಷ್ಟು?

    May 27, 2023

    ಖಾತೆ ಹಂಚಿಕೆಯಾಗಿಲ್ಲ, ವೈರಲ್ ಆದ ಪಟ್ಟಿ ನಕಲಿ: ಕಾಂಗ್ರೆಸ್ ಸ್ಪಷ್ಟನೆ

    May 27, 2023

    ಮಧ್ಯಾಹ್ನದ ಬಿಸಿ ಊಟದಲ್ಲಿ ಹಾವಿನ ಮರಿ: ಹಲವು ಮಕ್ಕಳು ಅಸ್ವಸ್ಥ

    May 27, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.