nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023
    Facebook Twitter Instagram
    ಟ್ರೆಂಡಿಂಗ್
    • ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    • ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ
    • ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ
    ಸ್ಪೆಷಲ್ ನ್ಯೂಸ್ December 15, 2021

    ಮಳೆಹಾನಿ: ಪರಿಹಾರ ಬೇಕಾದರೆ, 60 ಸಾವಿರ ಲಂಚಕೊಡಬೇಕು | ಕೊತ್ತೇಗಾಲ ಗ್ರಾಮಸ್ಥರಿಂದ ಗಂಭೀರ ಆರೋಪ

    By adminDecember 15, 2021No Comments2 Mins Read
    kottegala

    ಸರಗೂರು:  ಮಳೆಯಿಂದ ಹಾನಿಗೊಳಗಾದ ಮನೆ ದುರಸ್ತಿಗೆ ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60ರಿಂದ 80 ಸಾವಿರ ರೂಪಾಯಿ ಹಣ ಲಂಚ ನೀಡಬೇಕು ಎಂದು ಬೇಡಿಕೆಯಿಡುತ್ತಿದ್ದಾರೆ ಎಂದು ಆರೋಪಿಸಿ, ಕೊತ್ತೇಗಾಲ ಗ್ರಾಮಸ್ಥರು ತಾಲ್ಲೂಕು ಕಛೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

    ಈ ಸಂಬಂಧ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ತಹಸೀಲ್ದಾರ್ ಚಲುವರಾಜು ರವರಿಗೆ ಮನವಿ ಪತ್ರ ಸಲ್ಲಿಸಿದರು.

    ತಾಲ್ಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಉಂಟಾದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಯ ಗೋಡೆಗಳು, ಮೇಲ್ಚಾವಣಿಗಳು ಕುಸಿದು ಹೋಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿತ್ತು. ಗ್ರಾಮಸ್ಥರು ಸಹ ಪ್ರವಾಹ ಪೀಡಿತ ಯೋಜನೆಯ ಅಡಿಯಲ್ಲಿ ಪರಿಹಾರವನ್ನು ನೀಡಿ ಮನೆಗಳ ದುರಸ್ತಿಗೆ ಸಹಕರಿಸುವಂತೆ ಕೋರಿ ಅರ್ಜಿಗಳನ್ನು ಸಹ ಗ್ರಾಮ ಪಂಚಾಯಿತಿಗೆ ಸಲ್ಲಿಸಿದ್ದರು.

    kottegala

    ಆ ಸಂಬಂಧ ಪರಿಶೀಲನೆಗೆ ಬಂದಿದ್ದ ಗ್ರಾಮ ಲೆಕ್ಕಿಗರು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವ ಸುಮಾರು 20 ಮನೆಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಅಲ್ಲದೇ ಕೆಲವರ ಬಳಿ ಹಣ ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಉಳಿದ 20 ಮನೆಯ ಫಲಾನುಭವಿಗಳ ಹೆಸರನ್ನು ಸೇರಿಸಲು 60-80 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಬುಧವಾರ ಗ್ರಾಮಸ್ಥರು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ದಂಡಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆಗ್ರಹಿಸಿದರು.  ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮದ ಮುಖಂಡ ಬಸವಣ್ಣ, ನಮ್ಮ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿದ್ದ ಮನೆಗಳ ಪರಿಹಾರಕ್ಕೆ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಆದರೆ ಪರಿಶೀಲನೆಗೆ ಬಂದ ಗ್ರಾಮ ಲೆಕ್ಕಿಗರು ಕೆಲವರ ಬಳಿ 70-80 ಸಾವಿರ ಹಣವನ್ನು ಪಡೆದು ಅವರನ್ನು ಫಲಾನುಭವಿಗಳ ಪಟ್ಟಿಗೆ ಸೇರಿಸಿದ್ದಾರೆ. ಆದರೆ ಬಡವರನ್ನು ಕೈ ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    ಮೊದಲು ಬಡವರಿಗೆ ಆದ್ಯತೆ ಕೊಡುವಂತಾಗಬೇಕು. ಈ ಬಗ್ಗೆ ತನಿಖೆ ನಡೆಸಿ ಬಡರಿಗೆ ಮನೆಗಳನ್ನು ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಕಳೆದ ಬಾರಿಯೂ ಸಹ ಈ ಬಗ್ಗೆ ತಹಸೀಲ್ದಾರ್ ರವರಿಗೆ ಮನವಿ ಮಾಡಲಾಗಿದೆ. ಆದರೂ ಯಾವುದೇ ಪ್ರಯೋಜನವಾಗದೆ ತನಿಖೆ ನಡೆಸುವಂತೆ ಆಗ್ರಹಿಸಿ ಈ ಬಾರಿ ಪ್ರತಿಭಟಿಸಿ ಇಂದು ತಹಸೀಲ್ದಾರ್‍ರವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಇದು ಕೇವಲ ನಮ್ಮ ಗ್ರಾಮದ ಸಮಸ್ಯೆ ಮಾತ್ರವಲ್ಲ ಇದು ನಮ್ಮ ತಾಲ್ಲೂಕಿನ ಸಾಕಷ್ಟು ಗ್ರಾಮ ಪಂಚಾಯಿತಿಗಳ ಸಮಸ್ಯೆಯಾಗಿದೆ ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

    ಮನವಿಯನ್ನು ಸ್ವೀಕರಿಸಿ ಬಳಿಕ ಮಾತನಾಡಿದ ತಹಸೀಲ್ದಾರ್ ಚಲುವರಾಜು, ಈ ಮನವಿಯ ಕುರಿತಂತೆ ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುವುದು. ಇದು ಯಾರಿಗೂ ಮನೆ ಹಂಚಿಕೆಯ ಯೋಜನೆಯಲ್ಲ ಬದಲಿಗೆ ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸುವುದಾಗಿದೆ. ಅರ್ಜಿಗಳು ಬಂದ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ಮಾಡಿ ಹಾನಿಯ ಪ್ರಮಾಣವನ್ನು ನೋಡಿ ಅದಕ್ಕನುಗುವಾಗಿ ಪರಿಹಾರದ ಪಟ್ಟಿಗೆ ಸೇರಿಸಬೇಕು. ಆದರೆ ಇದರಲ್ಲಿ ಲೋಪವಾಗಿದೆ ಎಂದು ಕೊತ್ತೇಗಾಲ ಗ್ರಾಮದಿಂದ ಬಂದಿರುವ ದೂರಿನ ಅನ್ವಯ ಗ್ರಾಮ ಲೆಕ್ಕಿಗರಿಗೆ ನೋಟಿಸ್ ನೀಡಿ ಘಟನೆಯ ಕುರಿತಂತೆ ಅವರಿಂದ ಉತ್ತರ ಪಡೆದು ಬಳಿಕ ಕಾನೂನಿನ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಲೋಪ ಕಂಡುಬಂದಲ್ಲಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

    ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶೋಭ, ಗ್ರಾಮಸ್ಥರಾದ ರಾಮಚಂದ್ರ, ಆದಿರಾಜಪ್ಪ, ನಾಗಗೌಡ, ಬಿ.ನಾಗರರಾಜು, ಬಸವರಾಜು, ದೇವಮಣಿ, ನಾಗಮ್ಮ, ರತ್ನಮ್ಮ, ಶಿವಮ್ಮ, ಬೀರೇಗೌಡ, ಮಲ್ಲೇಗೌಡ, ಪ್ರಭುಸ್ವಾಮಿ, ಹರೀಶ, ಶಂಕರೇಗೌಡ, ಗಿರೀಶ್, ಶಿವು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರಹಾದನೂರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಪ್ರಪಂಚದ ಅಂತ್ಯಕ್ಕೆ ಕೇವಲ 90 ಸೆಕೆಂಡುಗಳು ಉಳಿದಿರುವ ಮಾನವೀಯ ಗಡಿಯಾರ

    January 28, 2023

    ಛೆ…! ಇವರೆಂಥಾ ಜನ?: ತುಂಬಿದ ಮರಳೂರು ಕೆರೆಗೆ ತ್ಯಾಜ್ಯದ ಬಾಗಿನ!: ಎಲ್ಲಿದ್ದಾರೆ ಅಧಿಕಾರಿಗಳು, ಜನಪ್ರತಿನಿಧಿಗಳು?

    January 26, 2023

    ನಟ ಕಿಶೋರ್ — ಪೃಥ್ವಿ ಅಂಬರ್ ನಟನೆಯ ‘ಪೆಂಟಗನ್’ ಚಿತ್ರ ಟೀಸರ್ ವಿರುದ್ಧ ಕನ್ನಡ ಸಂಘಟನೆಗಳು ಗರಂ!

    January 21, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ…

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.