nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023
    Facebook Twitter Instagram
    ಟ್ರೆಂಡಿಂಗ್
    • ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    • ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ
    • ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು
    ಚಿಕ್ಕನಾಯಕನಹಳ್ಳಿ December 23, 2021

    ಚಿಕ್ಕನಾಯಕನ ಹಳ್ಳಿ ತಹಶೀಲ್ದಾರ್ ವಿರುದ್ಧ ದೂರು ನೀಡಿದ ಅಲೆಮಾರಿ ಕುಟುಂಬದ ಸದಸ್ಯರು

    By adminDecember 23, 2021No Comments2 Mins Read
    chikkanayakana halli

    namma tumakuru

    ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ.

    ಇದಕ್ಕೂ‌ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು  ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು ಹೋಗು ಎಂದು ತಿಳಿಸಿರುತ್ತಾರೆ.

    ಪರಿಹಾರ ಪಡೆಯಲು ಮರುದಿನ ಕಚೇರಿಗೆ ತೆರಳಿದ ಸಂದರ್ಭದಲ್ಲಿ ಏಕಾಏಕಿ ಪರಮೇಶ್ ಗೆ ಸಾರ್ವಜನಿಕರ ಮುಂದೆ ನಿಂದಿಸಿ 107, 109, ರೌಡಿಶೀಟರ್, ಗಡಿಪಾರು ಈ ಪದಗಳು ಗೊತ್ತಿಲ್ಲ ನಿನಗೆ, ಇವಲ್ಲವನ್ನೂ ನಿನ್ನ ಮೇಲೆ ಹಾಕಿಸುತ್ತೇನೆಂದು ಮನಸೋ ಇಚ್ಛೆ ನಿಂದಿಸಿದರು. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿ.ನಾ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹೋದರೆ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ  ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲು ಬಂದಿರುವುದಾಗಿ ತಿಳಿಸಿದರು.

    ಇನ್ನು ನೊಂದವರ ಪರವಾಗಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ನಿಂತಿದ್ದು ವೇದಿಕೆಯ ಜಿಲ್ಲಾಧ್ಯಕ್ಷ ನಾಗಭೂಷಣ್ ಹಂದ್ರಾಳ್ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ನೌಕರ ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಸಹಿಸುವುದಿಲ್ಲ. ಕೂಡಲೇ ತಹಶೀಲ್ದಾರ್ ರವರ ಮೇಲೆ ಎಫ್.ಐ.ಆರ್.ದಾಖಲಿಸಬೇಕು.. ಇಲ್ಲವಾದಲ್ಲಿ ತಾವು ಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿದರು

    ಬಡವರ ನೆರವಿಗೆ ಧಾವಿಸಬೇಕಾದ ಅಧಿಕಾರಿಗಳೇ ಹೀಗೆ ಸೌಜನ್ಯ ಇಲ್ಲದ ರೀತಿಯಲ್ಲಿ ವರ್ತಿಸಿದರೆ ದಲಿತರು ನೊಂದವರು ಯಾರಬಳಿ ನ್ಯಾಯ ಕೇಳಬೇಕು ಎನ್ನುವುದು ಯಕ್ಷ ಪ್ರಶ್ನೆಯಾಗಿ ಉಳಿಯುತ್ತದೆ

     ವರದಿ: ರಾಜೇಶ್ ರಂಗನಾಥ್ ತುಮಕೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾನೂನು ಸಚಿವ ಮಾಧುಸ್ವಾಮಿಗೆ ಎಚ್ಚರಿಕೆ ನೀಡಿದ ಒಕ್ಕಲಿಗ ಸಮುದಾಯ!

    January 25, 2023

    ಕಚೇರಿಯಲ್ಲೇ ಪಿಡಿಓಗೆ ಗ್ರಾಮ ಪಂಚಾಯತ್ ಸದಸ್ಯನಿಂದ ಲೈಂಗಿಕ ಕಿರುಕುಳ!

    July 3, 2022

    ಮರ ಕಡಿಯುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!

    June 14, 2022
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ…

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.