nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023
    Facebook Twitter Instagram
    ಟ್ರೆಂಡಿಂಗ್
    • ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ
    • ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ
    • ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಿ ನೀನೆಷ್ಟು ಕ್ರೂರಿ; ಬಾಲ ಕಲಾವಿದೆ ಸಮನ್ವಿ ನಿಧನಕ್ಕೆ ಕಂಬನಿ
    ರಾಜ್ಯ ಸುದ್ದಿ January 15, 2022

    ವಿಧಿ ನೀನೆಷ್ಟು ಕ್ರೂರಿ; ಬಾಲ ಕಲಾವಿದೆ ಸಮನ್ವಿ ನಿಧನಕ್ಕೆ ಕಂಬನಿ

    By adminJanuary 15, 2022No Comments2 Mins Read

    ಕನ್ನಡ ಕಿರುತೆರೆ ಪಾಲಿಗೆ ಮಕರ ಸಂಕ್ರಾಂತಿಗೆ ಸೂತಕದ ಛಾಯೆ ಆವರಿಸಿ ಬಾಲ ಕಲಾವಿದೆ ಸಮನ್ವಿ (6) ನಿಧನಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ಸಂಜೆ 5 ಗಂಟೆ ಸುಮಾರಿನಲ್ಲಿ ಕಿರುತೆರೆ ಕಲಾವಿದರಾದ ಅಮೃತಾ ನಾಯ್ಡು ಅವರು ಮಗಳು ಸಮನ್ವಿ ಯನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ವಾಜರಹಳ್ಳಿಯಿಂದ ಮೆಟ್ರೋ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಕನಕಪುರ ಮುಖ್ಯರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.

    ತಾಯಿ-ಮಗಳು ಇಬ್ಬರೂ ಕೆಳಗೆ ಬಿದ್ದಾಗ ಮಗಳಿಗೆ ಲಾರಿಯ ಬಂಪರ್ ಹೊಡೆದಿದ್ದರಿಂದ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿದೆ. ತಕ್ಷಣ ಸಾರ್ವಜನಿಕರ ಸಹಾಯದಿಂದ ಮಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಮೃತಾ ಕುಟುಂಬ ಆಘಾತಕ್ಕೊಳಗಾಗಿದೆ.

    ಕಿರುತೆರೆ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಮೂಲಕ ಸಮನ್ವಿ ಎಲ್ಲರ ಮನೆ ಮಾತಾಗಿದ್ದಳು. ಮನರಂಜನಾ ಲೋಕದಲ್ಲಿ ಸಾಧನೆ ಮಾಡಬೇಕಾಗಿದ್ದ ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾವನ್ನಪ್ಪಿರುವುದು ನೋವಿನ ಸಂಗತಿ.ಈ ರಿಯಾಲಿಟಿ ಶೋನಲ್ಲಿ ಭಾಗವಹಿಸಿರುವ ಎಲ್ಲಾ ಮಕ್ಕಳ ಜತೆ ಆಟವಾಡುತ್ತಾ, ಪಟಪಟನೆ ಮಾತನಾಡುತ್ತಿದ್ದ ಚಿನಕುರುಳಿ ಸಮನ್ವಿ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ.

    ಸಮನ್ವಿ ನಿಧನಕ್ಕೆ ಕಿರುತೆರೆಯಲ್ಲದೆ, ರಿಯಾಲಿಟಿ ಶೋ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ತಾಯಿ ಅಮೃತಾ ಬಾಳಲ್ಲಿ ಸಮನ್ವಿ ಬೆಳಕು ಮೂಡಿಸಿದ್ದಳು. ಮಗಳ ಜತೆ ರಿಯಾಲಿಟಿ ಶೋನಲ್ಲಿ ಹಾಡಿ ಕುಣಿದಿದ್ದ ಅಮೃತಾ ಬಾಳಲ್ಲಿ ವಿ ಬೇರೆಯಾಟವಾಡಿದೆ. ಮಗಳನ್ನು ಕಳೆದುಕೊಂಡಿರುವ ಅಪ್ಪ-ಅಮ್ಮನ ರೋದನ ಮುಗಿಲು ಮುಟ್ಟಿತ್ತು.ಕುಟುಂಬಸ್ಥರು, ಸ್ನೇಹಿತರು, ಸಂಬಂಕರು, ಕಲಾವಿದರು ಸಮನ್ವಿ ನಿಧನಕ್ಕೆ ಕಂಬನಿ ಮಿಡಿದು ಅಮೃತಾ ದಂಪತಿಗೆ ಸಾಂತ್ವನ ಹೇಳಿದ್ದಾರೆ.

    ತಾರಮ್ಮ ಕಣ್ಣೀರು: ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಜಡ್ಜ್ಗಳ ಪೈಕಿ ನಟಿ ತಾರಾ (ತಾರಮ್ಮ) ಸಮನ್ವಿ ಸಾವಿನ ವಿಷಯ ತಿಳಿಯುತ್ತಿದ್ದಂತೆ ದುಃಖತಪ್ತರಾಗಿ ಮಾತನಾಡಿ, ನನಗೆ ಈ ಸುದ್ದಿ ನಂಬಲಾಗುತ್ತಿಲ್ಲ. ಏಳೆಂಟು ವಾರ ಆ ಬಾಲಕಿ ನಮ್ಮ ಜತೆ ಇದ್ದಳು. ನನಗೆ ಎಲ್ಲ ಮಕ್ಕಳೊಂದಿಗೆ ಆಪ್ತತೆ ಪ್ರಾರಂಭವಾಗಿ ಬಿಟ್ಟಿದೆ. ಆ ಶೋನ ಎಲ್ಲ ಮಕ್ಕಳು ನನ್ನ ಕುಟುಂಬ ಸದಸ್ಯರೆಂಬಂತೆ ಭಾಸವಾಗಿದೆ. ಇದೀಗ ಸಮನ್ವಿ ಹೋಗಿರುವುದು ಕುಟುಂಬದ ಸದಸ್ಯೆಯನ್ನೇ ಕಳೆದುಕೊಂಡಂತೆ ಆಗಿದೆ ಎಂದು ದುಃಖಿತರಾದರು.

    ಅಮೃತಾ ಅವರು ಗರ್ಭಿಣಿ ಆಗಿದ್ದರು. ಅವರಿಂದ ರಿಯಾಲಿಟಿ ಶೋನಲ್ಲಿ ಡ್ಯಾನ್ಸ್ ಮಾಡಿಸುವುದು ಸರಿಯಲ್ಲ ಎಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು ನಾವು ಕಳೆದ ವಾರ ಎಲಿಮಿನೇಟ್ ಮಾಡುವ ನಿರ್ಣಯ ತೆಗೆದುಕೊಂಡೆವು ಎಂದು ತಾರಮ್ಮ ಹೇಳಿದರು.

    ಸೃಜನ್ ಸಂತಾಪ: ರಿಯಾಲಿಟಿ ಶೋನ ಪ್ರಮುಖ ಜಡ್ಜ್ ಆಗಿರುವ ನಟ, ನಿರೂಪಕ ಸೃಜನ್ ಲೋಕೇಶ್ ಅವರು ಇಂತಹ ಕರುಣಾಜನಕ ಸ್ಥಿತಿಯ ಬಗ್ಗೆ ಮನನೊಂದು ದೇವರು ಇದ್ದಾನೋ ಇಲ್ಲವೋ ಎಂಬ ಪ್ರಶ್ನೆ ನನ್ನನ್ನು ಗಾಢವಾಗಿ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ, ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನೊಂದು ನುಡಿದಿದ್ದಾರೆ.

    ಅಂತ್ಯಕ್ರಿಯೆ: ಅತಿ ಚಿಕ್ಕವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸಮನ್ವಿ ಅಂತ್ಯಕ್ರಿಯೆ ಮಧ್ಯಾಹ್ನ ಅಂತಿಮ ವಿ-ವಿಧಾನದೊಂದಿಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

    January 28, 2023
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023

    ತುಮಕೂರು: ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದಿದ್ದ ನಾಯಿಯನ್ನು ಸಿದ್ದಗಂಗಾ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿಯ ಮುತುವರ್ಜಿಯಿಂದ ಹಾಗೂ  ಅಗ್ನಿಶಾಮಕ…

    ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ  ಆಚರಣೆ

    January 28, 2023

    ಈ ಕೆಲಸ ಮಾಡಿದರೆ ಸಾಕು ದೇಹದ ಬೊಜ್ಜು ಕರಗಿ ಹೋಗುತ್ತದೆ!

    January 28, 2023

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.