nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಡಿಶಾ ರೈಲು ಅಪಘಾತದ ಬಗ್ಗೆ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ತುಮಕೂರಿನ ಬಿಜೆಪಿ ನಾಯಕಿಗೆ ಸಂಕಷ್ಟ!

    June 4, 2023

    ಸರ್ಕಾರದ ದೌರ್ಜನ್ಯ ಎದುರಿಸಲು ಬಿಜೆಪಿ ಕಾನೂನು ಹೆಲ್ಪ್ ಲೈನ್ ಆರಂಭ: ತೇಜಸ್ವಿ ಸೂರ್ಯ

    June 4, 2023

    ಒಡಿಶಾ ರೈಲು ದುರಂತ, ಕೂಲಂಕುಷ ತನಿಖೆ ನಡೆಸಲಾಗುವುದು: ಪ್ರಧಾನಿ ಮೋದಿ

    June 4, 2023
    Facebook Twitter Instagram
    ಟ್ರೆಂಡಿಂಗ್
    • ಒಡಿಶಾ ರೈಲು ಅಪಘಾತದ ಬಗ್ಗೆ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ತುಮಕೂರಿನ ಬಿಜೆಪಿ ನಾಯಕಿಗೆ ಸಂಕಷ್ಟ!
    • ಸರ್ಕಾರದ ದೌರ್ಜನ್ಯ ಎದುರಿಸಲು ಬಿಜೆಪಿ ಕಾನೂನು ಹೆಲ್ಪ್ ಲೈನ್ ಆರಂಭ: ತೇಜಸ್ವಿ ಸೂರ್ಯ
    • ಒಡಿಶಾ ರೈಲು ದುರಂತ, ಕೂಲಂಕುಷ ತನಿಖೆ ನಡೆಸಲಾಗುವುದು: ಪ್ರಧಾನಿ ಮೋದಿ
    • ಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು
    • ಹೆಂಡತಿಯನ್ನು ಕೊಂದು ಹೈಡ್ರಾಮಾ ಮಾಡಿದ್ದ ಪತಿ: ತನಿಖೆಯಲ್ಲಿ ಬಯಲಾಯ್ತು ಅಸಲಿ ಕಥೆ
    • ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರವರ 139ನೇ ಜಯಂತಿ
    • ದ್ವಿಚಕ್ರ ವಾಹನ ಸವಾರನ ಮೇಲೆ ಕರಡಿ ದಾಳಿ: ಸವಾರನ ಸ್ಥಿತಿ ಗಂಭೀರ
    • ಕಾರು ದ್ವಿಚಕ್ರ ವಾಹನಗಳ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ
    ತಿಪಟೂರು January 16, 2022

    ಸಾಮರಸ್ಯದ ಬದುಕಿನಿಂದ ಆತ್ಮತೃಪ್ತಿ ಸಾಧ್ಯ: ಶ್ರೀ ಚಂದ್ರಶೇಖರನಾಥ ಸ್ವಾಮೀಜಿ

    By adminJanuary 16, 2022No Comments2 Mins Read
    sankranti

    ತಿಪಟೂರು : ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮರಕ ಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು.

    ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು ಉಳಿಸಿ ಕೆಟ್ಟ ವಿಚಾರಗಳನ್ನು ದೇವಾಲಯ, ಮಠಗಳಿಗೆ ಬಂದಂತಹ ಸಂದರ್ಭದಲ್ಲಿ ಬಿಟ್ಟು ಹೋಗಬೇಕು. ಪರಮಾತ್ಮನು ಎಲ್ಲರಿಗೂ ಒಂದೇ ರೀತಿಯಲ್ಲಿ ಅಥೈಸಿಕೊಳ್ಳಲು ಸಾಧ್ಯವಿಲ್ಲ. 21ನೇ ಶತಮಾನದಲ್ಲಿಯೂ ಮೂರ್ತಿ ಪೂಜೆ ಆಚರಣೆಯಲ್ಲಿದೆ ಎಂದರೆ ಆ ಮೂರ್ತಿಯಲ್ಲಿನ ಶಕ್ತಿ ದೈವತ್ತವ ಇದೇ ಎನ್ನುವುದನ್ನು ತಿಳಿಯುವ ಅವಶ್ಯಕವಿದೆ. ಧರ್ಮ ಎಂದರೆ ಎಲ್ಲಾ ಮತಗಳು ಇಲ್ಲಿ ನೆಲೆಸಿರುತ್ತವೆ. ಮಾನವನು ಇದರ ಒಳ ಅರ್ಥವನ್ನು ತಿಳಿದು ನಡೆಯಬೇಕು ಎಂದರು.

    ಕಿಚ್ಚು ಹಾಯಿಸುವಿಕೆ:

    ಗ್ರಾಮಸ್ಥೆರೆಲ್ಲಾ ಮಠದ ಆವರಣದಲ್ಲಿ ಸೇರಿ ತಮ್ಮ ರಾಸುಗಳನ್ನು ಸಿಂಗಾರ ಮಾಡಿ ಕಿಚ್ಚು ಹಾಯಿಸುವಿಕೆಗೆ ಸಿದ್ಧರಾದಾಗ ಭತ್ತದ ಒಣ ಹುಲ್ಲನ್ನು ಹಾಕಿ ಪೂಜೆ ಸಲ್ಲಿಸಿದ ಶ್ರೀಗಳು ಕಿಚ್ಚು ಹಚ್ಚಿಸಿದ ತಕ್ಷಣವೇ ಸಿಂಗರಿಸಿದ ರಾಸುಗಳು ಕಿಚ್ಚಿನಲ್ಲಿ ಹಾಯ್ದು ಓಡಿದವು. ದಣಿದು ಬಂದಂತಹ ದನಗಳಿಗೆ ಎಡೆ ಮಾಡಿ ಹಬ್ಬದ ಊಟವನ್ನು ಎಡೆಯ ರೂಪದಲ್ಲಿ ನೀಡಿದರು. ಗ್ರಾಮ ದೇವತೆಯಾದ ಶ್ರೀ ಚೌಡೇಶ್ವರಿ ದೇವಿಯ ದೇವಾಲಯವನ್ನು ಮೂರು ಸುತ್ತು ಸುತ್ತಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತವೆ. ಕಾರ್ತಿಕ ಮಾಸದಲ್ಲಿ ಚೆನ್ನಾಗಿ ಮೇಯ್ದು ಮೈತುಂಬಿಕೊಂಡ ದನಗಳಿಗೆ “ ಕಣ್ಣೆಸರಾಗಬಾರದೆಂದು” ಕಿಚ್ಚು ಹಾಯಿಸುತ್ತಾರೆ. ಅಲ್ಲದೇ ದನಕರುಗಳಿಗೆ ಯಾವುದೇ ಸಾಂಕ್ರಾಮಿಕ ರೋಗಗಳು ಬಾರದಿರಲೆಂಬ ಉದ್ದೇಶದಿಂದ ಕಿಚ್ಚು ಹಾಕಲಾದ ಸ್ಥಳದ ಬೂದಿಯನ್ನು ಹೊಯ್ದು ಜಾನವಾರುಗಳಿಗೆ ಸವರುತ್ತಾರೆ. ಮನೆ ಮಂದಿಯೆಲ್ಲ ಬೂದಿಯನ್ನು ವಿಭೂತಿಯಾಗಿ ಬಳಸುತ್ತಾರೆ.

    ಈ ಸಂದರ್ಭದಲ್ಲಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶೃಂಗೇರಿ ಶಾಖಾಮಠದ ಗುಣನಾಥ ಸ್ವಾಮೀಜಿ ಸೇರಿದಂತೆ ಸಡಗರವನ್ನು ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು, ಗ್ರಾಮಸ್ಥರು ಸೇರಿದ್ದು ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ತದ ನಂತರದಲ್ಲಿ ಎಲ್ಲರಿಗೂ ದಸರೀಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಎಳ್ಳು ಬೆಲ್ಲ, ಪೊಂಗಲ್ ನೀಡಿ ಆಶೀರ್ವದಿಸಿದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೇಮಾವತಿ ನಾಲೆಗೆ ಮ್ಯಾನ್ ಹೋಲ್, ಚರಂಡಿ ನೀರು ಸೇರುವುದನ್ನು ತಡೆಗಟ್ಟಲು ಎಸ್ ಯುಸಿಐ ಮನವಿ

    June 3, 2023

    ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ: ಅಧಿಕಾರಿಗಳಿಗೆ ಶಾಸಕ ಕೆ.ಷಡಕ್ಷರಿ ಸೂಚನೆ

    May 26, 2023

    ವರುಣ ಕ್ಷೇತ್ರದಲ್ಲಿ ವಾರ್ ರೂಮ್ ಸಂಯೋಜಕನಾಗಿ ಜವಾಬ್ದಾರಿಯುತ ಕೆಲಸ ನೀಡಿದ್ದಕ್ಕೆ ಧನ್ಯವಾದ: ಟುಡಾ ಶಶಿಧರ್

    May 21, 2023
    Our Picks

    ಒಡಿಶಾ ರೈಲು ದುರಂತ, ಕೂಲಂಕುಷ ತನಿಖೆ ನಡೆಸಲಾಗುವುದು: ಪ್ರಧಾನಿ ಮೋದಿ

    June 4, 2023

    ಒಡಿಶಾ ರೈಲು ದುರಂತ: ಸಿಗ್ನಲಿಂಗ್ ದೋಷದ ಮೇಲೆ ತನಿಖೆ

    June 4, 2023

    ಮಾಧ್ಯಮ ವರದಿಗಳಿಗೆ ವಿರುದ್ಧವಾಗಿ, ಕುಸ್ತಿಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ನಾನು ಯಾವುದೇ ಹೇಳಿಕೆ ನೀಡಿಲ್ಲ: ರೋಜರ್ ಬಿನ್ನಿ

    June 3, 2023

    ದೇವಸ್ಥಾನದ ಆಭರಣಗಳನ್ನು ಒತ್ತೆ ಇಟ್ಟ ಪ್ರಧಾನ ಅರ್ಚಕನಿಗೆ ಆರು ವರ್ಷ ಜೈಲು ಶಿಕ್ಷೆ!

    June 3, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಡಿಶಾ ರೈಲು ಅಪಘಾತದ ಬಗ್ಗೆ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ತುಮಕೂರಿನ ಬಿಜೆಪಿ ನಾಯಕಿಗೆ ಸಂಕಷ್ಟ!

    June 4, 2023

    ತುಮಕೂರು: ಬಾಲಸೋರ್‌ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ…

    ಸರ್ಕಾರದ ದೌರ್ಜನ್ಯ ಎದುರಿಸಲು ಬಿಜೆಪಿ ಕಾನೂನು ಹೆಲ್ಪ್ ಲೈನ್ ಆರಂಭ: ತೇಜಸ್ವಿ ಸೂರ್ಯ

    June 4, 2023

    ಒಡಿಶಾ ರೈಲು ದುರಂತ, ಕೂಲಂಕುಷ ತನಿಖೆ ನಡೆಸಲಾಗುವುದು: ಪ್ರಧಾನಿ ಮೋದಿ

    June 4, 2023

    ಸಿಲಿಂಡರ್ ಮೇಲಿನ ಸಬ್ಸಿಡಿ ಬಿಟ್ಟಂತೆ, ಗ್ಯಾರಂಟಿ ಯೋಜನೆಗಳನ್ನು ತ್ಯಜಿಸಬಹುದು

    June 4, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.