nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023
    Facebook Twitter Instagram
    ಟ್ರೆಂಡಿಂಗ್
    • ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ
    • ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ
    • ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್
    • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ
    • ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿ ಅಮಾನತು
    • ವರದಕ್ಷಿಣೆ ಕಿರುಕುಳ ತಾಳದೇ ಮಹಿಳೆ ರಾಸಾಯನಿಕ ಕುಡಿದು ಸಾವು
    • ರಮೇಶ್, ಡಿಕೆಶಿ, ಲಕ್ಷ್ಮೀ ವೈಯಕ್ತಿಕ ಟೀಕೆ ಬಿಟ್ಟು ಪಾಲಿಟಿಕ್ಸ್ ಮಾಡಲಿ:ಬಾಲಚಂದ್ರ ಜಾರಕಿಹೊಳಿ
    • ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ

    January 29, 2023

    ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ, ಹಫೀಜ್ ಮೊಹಮ್ಮದ್ ಆಜಂ ಶಾ ಖಾದ್ರಿ ಸ್ಮರಣಾರ್ಥ ಬೃಹತ್ ಉಚಿತ ಆರೋಗ್ಯ ಶಿಬಿರ

    January 29, 2023

    ಮಳೆ ನೀರು ಇಂಗುವ ಕಟ್ಟೆಯೊಳಗೆ ಬಿದ್ದ ಎರಡು ನಾಯಿಗಳ ರಕ್ಷಣೆ

    January 28, 2023
    Our Picks

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    ಇಂದು ಕೇಂದ್ರ ಬಜೆಟ್—2023 | ರಾಷ್ಟ್ರಪತಿಯನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್

    February 1, 2023

    ಸಮಾಜದ ಪ್ರತಿಯೊಂದು ವರ್ಗಕ್ಕೂ ಯಾವುದೇ ಭೇದವಿಲ್ಲದೇ ಕೆಲಸ ಮಾಡಿದೆ ನಮ್ಮ ಸರ್ಕಾರ : ರಾಷ್ಟ್ರಪತಿ ದ್ರೌಪದಿ ಮುರ್ಮು

    January 31, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆ ಆರ್ ಎಸ್ ಪಕ್ಷದಿಂದ ಜನ ಜಾಗೃತಿ

    February 1, 2023

    ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮತದಾರರಿಗೆ ಆಮಿಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಕೆ.ಆರ್.ಎಸ್ ಪಕ್ಷ…

    ಕೇಂದ್ರ ಬಜೆಟ್- 2023: ಸ್ವಚ್ಛ ನಗರ ರೂಪಿಸಲು ವಿಶೇಷ ಯೋಜನೆ

    February 1, 2023

    ಸುಮಲತಾ ಅವರು ಬಿಜೆಪಿ ಸೇರಿದರೇ ಹೆಚ್ಚು ಲಾಭ :ಸಚಿವ ಸುಧಾಕರ್

    February 1, 2023

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 2023-24ನೇ ಸಾಲಿನ ಬಜೆಟ್ ಮಂಡನೆ

    February 1, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.