ಈ ಬಾರಿ ಮಾರ್ಚ್ 29ರಿಂದ ಕರಗ ಉತ್ಸವ ಆರಂಭವಾಗಿ, ಏಪ್ರಿಲ್ 8ರವರೆಗೆ ನಡೆಯಲಿದ್ದು, ಏಪ್ರಿಲ್ 6 ರಂದು ಬೆಂಗಳೂರು ಕರಗ ಶಕ್ತ್ಯೋತ್ಸವ ಚೈತ್ರ ಪೂರ್ಣಿಮೆ ನಡೆಯಲಿದೆ.
11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದ್ದು, ಈ ಬಾರಿಯು ಕರಗವನ್ನು ಅರ್ಚಕ ವಿ. ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಪೂಜಾರಿ ಜ್ಞಾನೇಂದ್ರ ಅವರು ಕಳೆದ 12 ವರ್ಷಗಳಿಂದ ಕರಗ ಹೊರುತ್ತಿದ್ದಾರೆ. ಕರಗ ರಾತ್ರಿ 12 ಗಂಟೆಗೆ ನಗರ ಪ್ರದಕ್ಷಿಣೆಗೆ ಹೊರಡಲಿದೆ.
ಮಾರ್ಚ್. 29ರಂದು ಧ್ವಜಾರೋಹಣ ನಡೆಯುತ್ತದೆ. ನಂತರ ಏಪ್ರಿಲ್ 8ರವರಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಏಪ್ರಿಲ್ 3 ರಂದು ಆರತಿ, ಏಪ್ರಿಲ್ 4 ರಂದು ಹಸಿಕರಗ, ಏಪ್ರಿಲ್ 5 ರಂದು ಪೊಂಗಲ್, ಮರುದಿನ 6 ರಂದು ಕರಗ ಉತ್ಸವ ನಡೆಯಲಿದೆ. ಇನ್ನು ವೀರಕುಮಾರರು, ತಿಗಳ ಸಮುದಾಯದ ಕೆಲ ಭಕ್ತರು ಕರಗ ನಡೆಯುವ 11 ದಿನಗಳ ಕಾಲ ಉಪವಾಸ ಇರುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy