ಬೆಂಗಳೂರು: ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ. ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಲಿದೆ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೆಲವು ಸಂಘಟನೆಗಳು 29 ನೇ ತಾರೀಖು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ನಾಳೆ ಯಾವುದೇ ರೀತಿಯ ಪ್ರತಿಭಟನಾ ಜಾಥಾ, ಮೆರವಣಿಗೆಗೆ ಅವಕಾಶ ಇಲ್ಲ.
ನಗರದಲ್ಲಿ ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಕರ್ನಾಟಕ ಬಂದ್ ಕರೆ ನೀಡಿದವರಿಗೆ ನೋಟಿಸ್ ನೀಡಲಾಗುತ್ತದೆ. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ಆದೇಶದ ಪ್ರಕಾರ, ಬಂದ್ಗೆ ಕರೆ ನೀಡುವುದು ಕಾನೂನು ಬಾಹಿರ. ಪೊಲೀಸ್ ಇಲಾಖೆ ಸುಪ್ರೀಂ ಕೋರ್ಟ್ ಆದೇಶದಂತೆ ಕಾರ್ಯ ನಿರ್ವಹಿಸಲಿದೆ ಎಂದು ಕಮಿಷನರ್ ಮಾಹಿತಿ ನೀಡಿದರು.