ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಜನರ ಮೇಲೆ ಬಹಳ ಅನುಕಂಪ ಬಂದು ಬರ ಅಧ್ಯಯಕ್ಕೆ ಹೊರಟಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಅಧ್ಯಯನ ಮುಗಿಸಿ ವರದಿ ಕೊಟ್ಟಿದೆ. ಕೇಂದ್ರ ವರದಿಯನ್ನು ಸ್ವೀಕರಿಸಿ ಅಧಿಕಾರಿಗಳನ್ನು ಕಳುಹಿಸಿಕೊಟ್ಟಿದೆ.
ಬಿಜೆಪಿ, ಜೆಡಿಎಸ್ ಶಾಸಕರು ಅನುದಾನ ಕೊಡಿಸುವ ಕೆಲಸ ಮಾಡಲಿ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಪರಿಹಾರ ಕೊಡಿಸುವ ಕೆಲಸ ಮಾಡಲಿ. ಅದು ಬಿಟ್ಟು ಪ್ರಚಾರಕ್ಕಾಗಿ ಎರಡು ಗಿಡಗಳನ್ನು ನೋಡುವುದಲ್ಲ.
ಕೇಂದ್ರ ಸರ್ಕಾರದ ಬಳಿ ನಾವೇನು ಭಿಕ್ಷೆ ಕೇಳುತ್ತಿಲ್ಲ. ಕರ್ನಾಟಕಕ್ಕೆ ಕೇಂದ್ರ ಕೊಡಬೇಕಾದ ಅನುದಾನ ಕೊಡಲಿ ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.