nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗೆ ಬ್ರೇಕ್ ಹಾಕಿದ ತಹಶೀಲ್ದಾರ್

    December 8, 2023

    ತಿಪಟೂರಿನ ಗ್ರಾಮೀಣ ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ

    December 8, 2023

    ನಿವೇಶನ ಹಾಗೂ ಸ್ಮಶಾನಕ್ಕಾಗಿ ತಹಶೀಲ್ದಾರ್ ಗೆ ಒತ್ತಾಯ

    December 8, 2023
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗೆ ಬ್ರೇಕ್ ಹಾಕಿದ ತಹಶೀಲ್ದಾರ್
    • ತಿಪಟೂರಿನ ಗ್ರಾಮೀಣ ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ
    • ನಿವೇಶನ ಹಾಗೂ ಸ್ಮಶಾನಕ್ಕಾಗಿ ತಹಶೀಲ್ದಾರ್ ಗೆ ಒತ್ತಾಯ
    • ಕಾರು-ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಐವರು ಸಾವು
    • ಲಿವ್ ಇನ್ ರಿಲೇಶನ್ ಶಿಪ್ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ರೂಪಿಸಬೇಕು: ಸಂಸತ್ತಿನಲ್ಲಿ ಬಿಜೆಪಿ ಸಂಸದ ಧರ್ಮೀರ್ ಸಿಂಗ್
    • ಕಲ್ಬುರ್ಗಿಯಲ್ಲಿ ವಕೀಲನ ಹತ್ಯೆ, ಚಿಕ್ಕಮಗಳೂರಿನಲ್ಲಿ ವಕೀಲನಿಗೆ ಹಲ್ಲೆ ಖಂಡಿಸಿ ತುಮಕೂರು ವಕೀಲರ ಸಂಘದಿಂದ ಪ್ರತಿಭಟನೆ
    • 2018 ರಿಂದ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ: ಕೇಂದ್ರ ಸಚಿವ
    • ಭಯೋತ್ಪಾದನೆ ನಿಧಿ ಪ್ರಕರಣದ ಆರೋಪಿ ಜಾಮಿಯಾ ವಿದ್ಯಾರ್ಥಿಗೆ ಜೈಲಿನಲ್ಲಿ ಪರೀಕ್ಷೆ ಬರೆಯಲು ಅನುಮತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಸ್ಯೆ ಆಲಿಸಲು ಜೊತೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಗೆ ಬಿ.ಎಸ್. ಯಡಿಯೂರಪ್ಪ ಆಹ್ವಾನ
    Uncategorized November 11, 2023

    ಸಮಸ್ಯೆ ಆಲಿಸಲು ಜೊತೆಗೆ ಬನ್ನಿ: ಡಿ.ಕೆ. ಶಿವಕುಮಾರ್ ಗೆ ಬಿ.ಎಸ್. ಯಡಿಯೂರಪ್ಪ ಆಹ್ವಾನ

    By adminNovember 11, 2023No Comments2 Mins Read
    yadiyoorappa

    ಬೆಂಗಳೂರು: ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ; ನೀವೂ ಬನ್ನಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಡಿಸಿಎಂ ಡಿ.ಕೆ. ಶಿವಕುಮಾರರಿಗೆ ಆಹ್ವಾನ ನೀಡಿದರು.

    ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಅವರು, ಈಗ ತಾನೇ ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸ ನೋಡಿದ್ದೇವೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಶಿವಕುಮಾರ್ ಅವರನ್ನು ಪ್ರಶ್ನಿಸುವುದಾಗಿ ತಿಳಿಸಿದರು.

    ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ ಎಂದು ಆಕ್ಷೇಪಿಸಿದರು.
    ಪೀಣ್ಯ ಕೈಗಾರಿಕಾ ಪ್ರದೇಶವು ಏμÁ್ಯದಲ್ಲೇ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೇ ಸರಕಾರ ಕಡೆಗಣನೆ ಮಾಡಿದೆ. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ ಪುನರುಜ್ಜೀವನ ಮಾಡುವ ನಿಟ್ಟಿಗೆ ಮುಂದಾಗಬೇಕಿದೆ. ಕೆಆರ್‍ಐಡಿಎಲ್ ಮೂಲಕ ಅಭಿವೃದ್ದಿ ಮಾಡಬೇಕಿದೆ. ಶಿವಕುಮಾರ್ ಅವರು ಉಸ್ತುವಾರಿ ಇದ್ದಾರೆ. ಇದಕ್ಕೆ ಹಣ ಕೊಡಲು ಸಾಧ್ಯವಾಗುವುದಿಲ್ಲವೇ? ಈ ಸರಕಾರ ದಿವಾಳಿ ಆಗಿದೆಯೇ ಎಂದು ಕೇಳಿದರು.

    ಸುಮ್ಮನೆ ದಿನ ದೂಡಲಾಗುತ್ತಿದೆ. ಒಂದೇ ಒಂದು ಕಡೆ ಒಂದು ಕಿ.ಮೀ ರಸ್ತೆ ಮಾಡಿಲ್ಲ. ಸರಕಾರವು ಜನವಿರೋಧಿ ಕೆಲಸ ಮಾಡುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿದೆ. ಜನರಿಗೆ ವಾಸ್ತವ ಪರಿಸ್ಥಿತಿ ತಿಳಿಸುವ ಕೆಲಸ ಮಾಡುತ್ತಿಲ್ಲ. ಶಿವಕುಮಾರ್ ಅವರೇ ನಿಮ್ಮ ಜೊತೆ ನಾನು ಬರ್ತೀನಿ, ನೀವು ಬನ್ನಿ, ಈ ಜನರ ಸಮಸ್ಯೆ ಆಲಿಸೋಣ ಎಂದು ಸವಾಲೆಸೆದರು.

    ನಮ್ಮ ಶಾಸಕರು ಕೂಡ ಪರಿಶೀಲನೆಗೆ ಬರುತ್ತಾರೆ. ವಿಪಕ್ಷ ಅನ್ನೋ ಕಾರಣಕ್ಕೆ ಕೊಟ್ಟಿರುವ ಅನುದಾನ ವಾಪಸ್ ಪಡೆಯಲಾಗುತ್ತಿದೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲಾಗಲ್ಲ. ಹೋರಾಟ ಮಾಡುವ ಮೊದಲು ಸಮಸ್ಯೆ ಬಗೆಹರಿಸಿ ಎಂದು ಎಚ್ಚರಿಕೆ ನೀಡಿದರು.
    ನಮ್ಮ ಸರ್ಕಾರ ಇದ್ದಾಗ ಹೇಗೆ ಅಭಿವೃದ್ಧಿ ಆಗಿದೆ ಅಂತ ಇಲ್ಲಿನ ಜನ ಹೇಳುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಏನಾಗಿದೆ ಎಂದು ಕೇಳಿದರಲ್ಲದೆ, ನಮ್ಮೆಲ್ಲಾ ಶಾಸಕರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಡಿಸಿಎಂ ಅವರ ಬ್ರಾಂಡ್ ಬೆಂಗಳೂರು ವಿಚಾರದ ಕುರಿತು ಕೇಳಿದಾಗ, ಸುಮ್ಮನೆ ಬೊಗಳೆ ಬಿಡೋದಲ್ಲ. ವಾಸ್ತವ ವಿಚಾರ ಮಾತಾಡಬೇಕು. ಬನ್ನಿ ಜನರ ಮಧ್ಯದಲ್ಲಿ ಕುಳಿತು ಮಾತಾಡೋಣ ಎಂದು ಆಹ್ವಾನಿಸಿದರು. ಬರ ಅಧ್ಯಯನ ವರದಿ ತಯಾರಿ ಮಾಡಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರಕ್ಕೆ ಒಂದು ವರದಿ ಕೊಡುತ್ತೇವೆ ಎಂದು ಅವರು ತಿಳಿಸಿದರು.
    ಶಾಸಕ ಮುನಿರಾಜು, ಜಿಲ್ಲಾಧ್ಯಕ್ಷ ನಾರಾಯಣ, ಮುಖಂಡ ಮರಿಸ್ವಾಮಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಭಾಗವಹಿಸಿದ್ದರು.

    admin
    • Website

    Related Posts

    ತುರುವೇಕೆರೆ: ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗೆ ಬ್ರೇಕ್ ಹಾಕಿದ ತಹಶೀಲ್ದಾರ್

    December 8, 2023

    ನಿವೇಶನ ಹಾಗೂ ಸ್ಮಶಾನಕ್ಕಾಗಿ ತಹಶೀಲ್ದಾರ್ ಗೆ ಒತ್ತಾಯ

    December 8, 2023

    ಲಿವ್ ಇನ್ ರಿಲೇಶನ್ ಶಿಪ್ ಅಪಾಯಕಾರಿ ಕಾಯಿಲೆ, ಇದರ ವಿರುದ್ಧ ಕಾನೂನು ರೂಪಿಸಬೇಕು: ಸಂಸತ್ತಿನಲ್ಲಿ ಬಿಜೆಪಿ ಸಂಸದ ಧರ್ಮೀರ್ ಸಿಂಗ್

    December 8, 2023
    Our Picks

    ಮುಂದಿನ ಫೆಬ್ರವರಿಯಿಂದ ಜಾರಿಗೆ ಬರಲಿದೆ ಏಕರೂಪದ ಡಿ. ಎಲ್. ಆರ್‌ ಸಿ

    December 7, 2023

    ಐಪಿಎಲ್ ನನ್ನ ವೃತ್ತಿ ಜೀವನವನ್ನು ಬದಲಿಸಿತು: ಗ್ಲೆನ್ ಮ್ಯಾಕ್ಸ್‌ ವೆಲ್

    December 7, 2023

    ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಇಬ್ಬರು ಆರೋಪಿಗಳ ಬಂಧನ

    December 4, 2023

    ಫಿಲಿಪೈನ್ಸ್ ‌ನಲ್ಲಿ ಭಾರೀ ಭೂಕಂಪ: 7.5 ತೀವ್ರತೆ; ಸುನಾಮಿ ಎಚ್ಚರಿಕೆ  

    December 4, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರುವೇಕೆರೆ: ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗೆ ಬ್ರೇಕ್ ಹಾಕಿದ ತಹಶೀಲ್ದಾರ್

    December 8, 2023

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ವರಹಸಂದ್ರ ಗೊಲ್ಲರಟ್ಟಿಯಲ್ಲಿ ಮೂಢನಂಬಿಕೆಗಳ ಕಾರಣದಿಂದ ಊರಿನಿಂದ ಹೊರಗೆ ಇಟ್ಟಿದ್ದ, ಮೂವರು ಹೆಣ್ಣು…

    ತಿಪಟೂರಿನ ಗ್ರಾಮೀಣ ಮಹಿಳಾ ಆರೋಗ್ಯಕ್ಕಾಗಿ ಪ್ರಾರಂಭವಾದ ನಮ್ಮ ಆರೋಗ್ಯ ಕೇಂದ್ರಗಳಿಗೆ ವರ್ಷದ ಸಂಭ್ರಮ

    December 8, 2023

    ನಿವೇಶನ ಹಾಗೂ ಸ್ಮಶಾನಕ್ಕಾಗಿ ತಹಶೀಲ್ದಾರ್ ಗೆ ಒತ್ತಾಯ

    December 8, 2023

    ಕಾರು-ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಐವರು ಸಾವು

    December 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.