ಚಿತ್ರದುರ್ಗ: ಡಿಜಿಟಲ್ ಕಾಂಗ್ರೆಸ್ ಸದಸ್ಯತ್ವ ನೋಂದಾವಣಿ ಅಭಿಯಾನಕ್ಕೆ ಜಿಲ್ಲೆಯ ಹಿರಿಯೂರು ನಗರದ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಹೆಚ್ಚು ಒತ್ತು ನೀಡಬೇಕು, 2023ರ ವಿಧಾನಸಭಾ ಚುನಾವಣೆ ಅಗ್ನಿ ಪರೀಕ್ಷೆಯಾಗಿದ್ದು, ಈ ಅಗ್ನಿ ಪರೀಕ್ಷೆಯಲ್ಲಿ ಗೆಲ್ಲಲೇ ಬೇಕು. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್ ಹಾಗೂ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಝಕ್ಕಪ್ಪ ಸೂಚನೆಯ ಮೇರೆಗೆ ಅಧ್ಯಕ್ಷರು, ಉಪಾಧ್ಯಕ್ಷರಿಗೆ ನೇಮಕಾತಿ ಆದೇಶ ಪತ್ರವನ್ನು ಹಾಗೂ ಯುವ ಕಾಂಗ್ರೆಸ್ ನ ಪಂಚಾಯಿತಿ ಹಾಗೂ ಇದೇ ಸಂದರ್ಭದಲ್ಲಿ ವಾರ್ಡ್ ಗಳ ಯೂಥ್ ಅಧ್ಯಕ್ಷರ ನೇಮಕಾತಿಯ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಖಾದಿರಮೇಶ್, ಡಾ.ಸುಜಾತ, ಕೆ ಪಿ ಸಿ ಸಿ ಕಾರ್ಮಿಕ ವಿಭಾಗದ ಜ್ಯೋತಿಲಕ್ಷ್ಮಿ, ಐಮಂಗಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕಲ್ಲಹಟ್ಟಿ ಹರೀಶ್ , ಅಮೃತೇಶ್ವರಸ್ವಾಮಿ, ನಗರಸಭೆ ಉಪಾಧ್ಯಕ್ಷರಾದ ಬಿ .ಎನ್. ಪ್ರಕಾಶ್, ಚಿಗಳಿಕಟ್ಟೆ ಕಾಂತರಾಜ್, ಜಿಲ್ಲಾ ಪಂಚಾಯತಿ ಸದಸ್ಯರಾದ ನಾಗೇಂದ್ರನಾಯ್ಕ, ಜಿಲ್ಲಾ ಪಂಚಾಯತಿ ಪಾಪಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಗುರುಪ್ರಸಾದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಮಣಿ, ಹಿರಿಯೂರು ಗಿರೀಶ್, ಜ್ಞಾನೇಶ್, ವಿ ಶಿವಕುಮಾರ್ , ಗಾಂಧಿನಗರ ಮಹಂತೇಶ್, ರಂಗಾಪುರ ವೆಬ್ ಲಕ್ಷ್ಮಿಕಾಂತ್, ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB