nammatumakuru

    Subscribe to Updates

    Get the latest creative news from FooBar about art, design and business.

    What's Hot

    ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ

    November 28, 2025

    ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ

    November 28, 2025

    ಹುಳಿಯಾರು: ಡಿ.1ರಿಂದ ಹಾಲು ಕರೆಯುವ ಸ್ಪರ್ಧೆ

    November 28, 2025
    Facebook Twitter Instagram
    ಟ್ರೆಂಡಿಂಗ್
    • ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ
    • ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ
    • ಹುಳಿಯಾರು: ಡಿ.1ರಿಂದ ಹಾಲು ಕರೆಯುವ ಸ್ಪರ್ಧೆ
    • ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ
    • 2028ರ ಎಚ್.ಡಿ.ಕೋಟೆ ವಿಧಾನಸಭಾ ಚುನಾವಣೆ: ಜೆಡಿಎಸ್ ನಿಂದ ಹಿನಕಲ್ ಕೆಂಪನಾಯಕ ಟಿಕೆಟ್ ಆಕಾಂಕ್ಷಿ
    • ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ
    • LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ
    • ತುಮಕೂರು ಉಪ ವಿಭಾಗಾಧಿಕಾರಿ ಮೇಲೆ ಸುಳ್ಳು ಆರೋಪ: ತುಮಕೂರು ಜಿಲ್ಲಾ ನಾಗರಿಕರ ಹಿತರಕ್ಷಣಾ ಸಮಿತಿ ಖಂಡನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 21 ಗುಂಟೆ ಜಮೀನಿಗಾಗಿ ನಡೆಯಿತು ಮರ್ಡರ್: ಮಗ, ಪತ್ನಿ ಸೇರಿ ಐವರ ಸೆರೆ
    ರಾಜ್ಯ ಸುದ್ದಿ February 4, 2022

    21 ಗುಂಟೆ ಜಮೀನಿಗಾಗಿ ನಡೆಯಿತು ಮರ್ಡರ್: ಮಗ, ಪತ್ನಿ ಸೇರಿ ಐವರ ಸೆರೆ

    By adminFebruary 4, 2022No Comments2 Mins Read
    arrest

    ಮಗನ ಹೆಸರಿಗೆ ಜಮೀನು ಬರೆದುಕೊಡಲು ನಿರಾಕರಿಸಿದ ಪತಿ ಚನ್ನಿಗರಾಯಪ್ಪನನ್ನು ಕೊಲೆ ಮಾಡಿ ಶವ ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ, ಮಗ ಸೇರಿ ಐದು ಮಂದಿ ಆರೋಪಿಗಳನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಪತ್ನಿ ಶೋಭಾ ಅಲಿಯಾಸ್ ಯಶೋಧಾ (33), ಮಗ ನಿಖಿಲ್ ಅಲಿಯಾಸ್ ಅಭಿ (22) ಮತ್ತು ಗುರುಕಿರಣ್ (21), ವಿಶ್ವಾಸ್ (20), ಮಂಜುನಾಥ್ (29) ಬಂಧಿತ ಆರೋಪಿಗಳು.


    Provided by
    Provided by

    ಕೊರಟಗೆರೆ ತಾಲ್ಲೂಕು ಪಣ್ಣೇನಹಳ್ಳಿ ನಿವಾಸಿಯಾದ ಚನ್ನಿಗರಾಯಪ್ಪನಿಗೆ 21 ಗುಂಟೆ ಕೃಷಿ ಭೂಮಿ ಇದ್ದು, ಈತನಿಗೆ 24 ವರ್ಷಗಳ ಹಿಂದೆ ಯಶೋಧಾ ಜತೆ ಮದುವೆಯಾಗಿದ್ದು, ನಿಖಿಲ್ ಎಂಬ ಗಂಡುಮಗನಿದ್ದಾನೆ. 20 ವರ್ಷಗಳ ಹಿಂದೆ ಎಚ್‍ಎಸ್‍ಆರ್ ಲೇಔಟ್, ಗಾರೆಬಾವಿ ಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ಯಶೋಧಾ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಮಗನೊಂದಿಗೆ ವಾಸವಾಗಿದ್ದರು.ಮಗ ನಿಖಿಲ್ ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದನು. ಪತಿ ಚನ್ನಿಗರಾಯಪ್ಪ ಎರಡನೆ ಮದುವೆಯಾಗಿದ್ದು, ಕೊರಟಗೆರೆ ತಾಲ್ಲೂಕಿನ ಪಣ್ಣೇನಹಳ್ಳಿಯಲ್ಲಿರುವ 21 ಗುಂಟೆ ಜಮೀನು ಮಾರುವ ವಿಚಾರ ಯಶೋಧಾಗೆ ಗೊತ್ತಾಗಿದೆ.ಈ ವಿಚಾರವಾಗಿ ತನ್ನ ಮಗ ನಿಖಿಲ್‍ ಗೆ ಜಮೀನು ಮಾಡಿಕೊಡುವಂತೆ ಕೇಳಿದಾಗ ಪತಿ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಯಶೋಧಾ ತನ್ನ ಸ್ನೇಹಿತ ಮಂಜುನಾಥ್ ಮತ್ತು ಮಗ ನಿಖಿಲ್‍ ನೊಂದಿಗೆ ಬೆಂಗಳೂರಿನಿಂದ ಕಾರಿನಲ್ಲಿ ಹೋಗಿ ತೊಂಡೆಗೆರೆಯಿಂದ ಚನ್ನಿಗರಾಯಪ್ಪನನ್ನು ಅಪಹರಿಸಿಕೊಂಡು ನಗರದ ಎಚ್‍ಎಸ್‍ಆರ್ ಲೇಔಟ್, ಗಾರೆಬಾವಿ ಪಾಳ್ಯದ ತನ್ನ ಮನೆಗೆ ಕರೆದುಕೊಂಡು ಬಂದಿದ್ದಾರೆ.

    ಅಲ್ಲಿಯೂ ಜಮೀನನ್ನು ಮಗನ ಹೆಸರಿಗೆ ಬರೆದುಕೊಡುವಂತೆ ಕೇಳಿದಾಗ ಆತ ಅದಕ್ಕೆ ಒಪ್ಪುವುದಿಲ್ಲ. ತಂದೆಯ ನಡತೆಯಿಂದ ಬೇಸತ್ತ ಮಗ ನಿಖಿಲ್ ಕಗ್ಗಲೀಪುರದ ತನ್ನ ಸ್ನೇಹಿತರಾದ ಗುರುಕಿರಣ್, ವಿಶ್ವಾಸ್ ಸಹಾಯದಿಂದ ಚನ್ನಿಗರಾಯಪ್ಪನಿಗೆ ಮದ್ಯಪಾನ ಮಾಡಿಸಿ ಕಗ್ಗಲಿಪುರ ರಸ್ತೆಯ ಬ್ಯಾಟರಾಯನದೊಡ್ಡಿ ನಿರ್ಜನ ಪ್ರದೇಶದಲ್ಲಿರುವ ಕೆರೆಕೋಡಿ ಬಳಿ ಕರೆದುಕೊಂಡು ಹೋಗಿ ಅಲ್ಲಿಯೂ ಕುಡಿಸಿ ಸ್ನೇಹಿತರ ಸಹಾಯದಿಂದ ಕೈ-ಬಾಯಿ ಕಟ್ಟಿಹಾಕಿ ಎದೆಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

    ಮೃತದೇಹದ ಗುರುತು ಸಿಗಬಾರದೆಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಾಪಸಾಗಿದ್ದರು. ಕೆರೆಕೋಡಿ ಬಳಿ ಸುಟ್ಟು ಕರಕಲಾಗಿದ್ದ ಗಂಡಸಿನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಡಿವೈಎಸ್‍ಪಿ ಮಲ್ಲೇಶ್, ವೃತ್ತ ನಿರೀಕ್ಷಕ ಮಹಾನಂದ, ಬನ್ನೇರುಘಟ್ಟ ಠಾಣೆ ಪಿಎಸ್‍ಐ ಅಂಜನ್‍ಕುಮಾರ್ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ಕೈಗೊಂಡು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ ನಂತರ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನ.29ರಂದು ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾವಳಿ

    November 28, 2025

    ತುಮಕೂರು: ಕರ್ನಾಟಕ ಜನಪರ ವೇದಿಕೆ, ಸಿದ್ದಯ್ಯನರಸ್ತೆ, ಬೆಂಗಳೂರು ಇವರ ವತಿಯಿಂದ ನ.29ರಂದು ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ನ.30 ರಂದು ಸಂಜೆ…

    ಮಿಡಿಗೇಶಿ: ಡಿ.2ರಂದು ಹನುಮ ಜಯಂತಿ: ಪವನಾಮ ಹೋಮ

    November 28, 2025

    ಹುಳಿಯಾರು: ಡಿ.1ರಿಂದ ಹಾಲು ಕರೆಯುವ ಸ್ಪರ್ಧೆ

    November 28, 2025

    ತುಮಕೂರು ವಿವಿ: ವಿವಿಧ ಕಾಮಗಾರಿಗಳಿಗೆ 20 ಕೋಟಿ ಪ್ರಸ್ತಾವನೆಗೆ ಅನುಮೋದನೆ

    November 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.