nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025
    Facebook Twitter Instagram
    ಟ್ರೆಂಡಿಂಗ್
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 21ನೇ ಶತಮಾನದಲ್ಲಿ ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ : ಸಿಎಂ ಬೊಮ್ಮಾಯಿ
    ರಾಜ್ಯ ಸುದ್ದಿ May 17, 2022

    21ನೇ ಶತಮಾನದಲ್ಲಿ ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ : ಸಿಎಂ ಬೊಮ್ಮಾಯಿ

    By adminMay 17, 2022No Comments2 Mins Read
    bomayi

    ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನಗರದ ಎಂಪ್ರೆಸ್ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆ ಮತ್ತು ಶಾಲಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ಮಕ್ಕಳು ಸ್ಪರ್ಧಾತ್ಮಕವಾಗಿರುವ ಈ ಕಾಲದಲ್ಲಿ ಮೂಲಭೂತ ಶಿಕ್ಷಣದಿಂದ ವಂಚಿತವಾಗಬಾರದು, ಎರಡು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಂತಹ ಮಕ್ಕಳಿಗೆ ವಿಶೇಷ ಪಠ್ಯ ಕ್ರಮದ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಕಲಿಕಾ ಚೇತರಿಕೆ ಉದ್ದೇಶವಾಗಿದೆ ಎಂದರು.


    Provided by
    Provided by
    Provided by

    ನಮ್ಮ ರಾಜ್ಯದ ಭವಿಷ್ಯಕ್ಕೆ ಅಡಿಪಾಯ ಕಲಿಕಾಚೇತರಿಕೆಯಾಗಿದ್ದು, ಶಿಕ್ಷಣಕ್ಕೆ ಅನುದಾನ ನೀಡಿದರೆ ಸಾಲದು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಧ್ಯೇಯ ಹೊಂದಲಾಗಿದೆ, ಶಿಕ್ಷಕರ ನೇಮಕ ಮತ್ತು ಕೊಠಡಿ ನಿರ್ಮಾಣದಿಂದ ಎಲ್ಲವು ಆಗುವುದಿಲ್ಲ, ಜ್ಞಾನದ ಶತಮಾನದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಬದ್ಧತೆಯಾಗಬೇಕಿದೆ ಎಂದರು.
    21ನೇ ಶತಮಾನದಲ್ಲಿ ಜ್ಞಾನಕ್ಕೆ ಬೆಲೆ ಇದೆ, ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ, ಪ್ರಪಂಚದಲ್ಲಿ ಇಂದು ಬೆಂಗಳೂರು ತಂತ್ರಜ್ಞಾನಕ್ಕೆ ಹೆಸರಾಗಿದೆ ಎಂದ ಅವರು, ವಿಶ್ವಮಟ್ಟದ ಜ್ಞಾನವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒದಗಿಸಬೇಕಿದೆ, ನಮ್ಮ ಮಕ್ಕಳಿಗೆ ಸಂಖ್ಯೆಯ ಬಗ್ಗೆ ಅದ್ಭುತ ಕಲಿಕೆ ಇದೆ, ವಿದೇಶದ ಮಕ್ಕಳಿಗೆ ಹೋಲಿಕೆ ಮಾಡಿದರೆ ನಮ್ಮ ಮಕ್ಕಳು ಕ್ರಿಯಾಶೀಲರಾಗಿದ್ದು, ಅವರಿಗೆ ಉತ್ತೇಜನ ನೀಡಬೇಕಿದೆ ಎಂದರು.

    ಪ್ರಧಾನಿ ಮೋದಿ ಅವರು ಆಡಳಿತದಲ್ಲಿ ಅನೇಕ ಸಾಹಸಗಳನ್ನು ಮಾಡುತ್ತಿದ್ದಾರೆ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ, ಶಿಶುವಿಹಾರದಿಂದ ಹೊಸ ಶಿಕ್ಷಣ ನೀತಿ ಜಾರಿಯಾಗಲಿದ್ದು, ಮಕ್ಕಳಲ್ಲಿ ಕಲಿಕೆಯ ಉತ್ತೇಜನ ನೀಡಲು ನಿಟ್ಟಿನಲ್ಲಿ ಪಠ್ಯಕ್ರಮವನ್ನು ರೂಪಿಸಲಾಗಿದೆ ಎಂದ ಅವರು ಮಕ್ಕಳಲ್ಲಿನ ಕುತೂಹಲವನ್ನು ತಣ್ಣಿಸುವ ವರೇ ನಿಜವಾದ ಗುರುಗಳು ಎಂದು ಹೇಳಿದರು.

    ಮಕ್ಕಳ ವಿಚಾರಮಟ್ಟದಲ್ಲಿಯೇ ಶಿಕ್ಷಣದ ಪಠ್ಯವನ್ನು ಶಿಕ್ಷಣ ತಜ್ಞರು ರೂಪಿಸಿದ್ದಾರೆ, ಶಿಕ್ಷಕರಿಗೆ ಮಾತ್ರವಲ್ಲ ಮಕ್ಕಳಿಗೂ ಪ್ರಶ್ನೆ ಕೇಳುವ ಹಕ್ಕಿದೆ, ಮಕ್ಕಳ ಪ್ರಶ್ನೆಗಳಿಗೆ ತರ್ಕಬದ್ಧ ಚಿಂತನೆ ಇರುತ್ತದೆ ಅದಕ್ಕೆ ಪ್ರೋತ್ಸಾಹ ನೀಡಿ, ಮೊಟಕುಗೊಳಿಸಬೇಡಿ ಎಂದು ಶಿಕ್ಷಕರಿಗೆ ಸೂಚಿಸಿದ ಅವರು, ಜ್ಞಾನದ ಬಾಗಿಲನ್ನು ಸದಾ ತೆರದಿಟ್ಟು, ನಿರಂತರ ಕಲಿಕೆಯಿಂದ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

    ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಕೋವಿಡ್ ನಂತರ ಪರಿಣಾಮ ಮಕ್ಕಳ ಕಲಿಕೆಯ ಮೇಲಾಗಿದೆ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಳ ಮಾಡಲು ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಒಂದೂವರೆ ಎರಡು ವರ್ಷ ಕಲಿಕೆಯ ಗುಣಮಟ್ಟದಲ್ಲಿ ಆಗಿರುವ ಬದಲಾವಣೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

    ಕಲಿಕಾ ಚೇತರಿಕೆ ಒಂದು ವರ್ಷದ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಒಂದನೇ ತರಗತಿಯಿಂದ ಮೂರನೇ ತರಗತಿವರೆಗೆ ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಮೂಲಕ ಮೂರು ತಿಂಗಳು ಅವರ ಕಲಿಕೆಗೆ ಉತ್ತೇಜನ ನೀಡಲಾಗುವುದು ಅದರಂತೆ ನಾಲ್ಕು ಮತ್ತು ಉಳಿದ ತರಗತಿಗಳಿಗೂ ಇದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

    ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಅಗತ್ಯ ಅನುದಾನ ಮತ್ತು ಪುಸ್ತಕವನ್ನು ರೂಪಿಸಲಾಗಿದ್ದು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ, ಎಸ್ಸಿಎಸ್ಟಿ ಮಕ್ಕಳ ಕಲಿಕೆಯನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
    ಗೃಹ ಸಚಿವ ಅರಗ ಜ್ಞಾನೇಂದ್ರ, ವೈ.ಎ.ನಾರಾಯಣಸ್ವಾಮಿ, ಸಂಸದ ಜಿ.ಎಸ್.ಬಸವರಾಜು, ಜ್ಯೋತಿಗಣೇಧ್, ಚಿದಾನಂದಗೌಡ, ರಾಜೇಶ್ ಗೌಡ, ಎಸ್.ಆರ್.ಗೌಡ ಮೇಯರ್ ಕೃಷ್ಣಪ್ಪ, ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್, ಕಾರ್ಯದರ್ಶಿ ಪಲ್ಲವಿ ಅಕುರಾತಿ, ಐಜಿಪಿ ಚಂದ್ರಶೇಖರ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಎಸ್ಪಿ ರಾಹುಲ್ ಕುಮಾರ್ ಶಹಪೂರವಾಡ ಸೇರಿದಂತೆ ಇತರರಿದ್ದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025
    Our Picks

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ…

    ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

    September 19, 2025

    ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ

    September 19, 2025

    ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.