nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 21ನೇ ಶತಮಾನದಲ್ಲಿ ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ : ಸಿಎಂ ಬೊಮ್ಮಾಯಿ
    ರಾಜ್ಯ ಸುದ್ದಿ May 17, 2022

    21ನೇ ಶತಮಾನದಲ್ಲಿ ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ : ಸಿಎಂ ಬೊಮ್ಮಾಯಿ

    By adminMay 17, 2022No Comments2 Mins Read
    bomayi

    ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ನಗರದ ಎಂಪ್ರೆಸ್ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆ ಮತ್ತು ಶಾಲಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದ ಮಕ್ಕಳು ಸ್ಪರ್ಧಾತ್ಮಕವಾಗಿರುವ ಈ ಕಾಲದಲ್ಲಿ ಮೂಲಭೂತ ಶಿಕ್ಷಣದಿಂದ ವಂಚಿತವಾಗಬಾರದು, ಎರಡು ವರ್ಷದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ, ಇಂತಹ ಮಕ್ಕಳಿಗೆ ವಿಶೇಷ ಪಠ್ಯ ಕ್ರಮದ ಮೂಲಕ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಕಲಿಕಾ ಚೇತರಿಕೆ ಉದ್ದೇಶವಾಗಿದೆ ಎಂದರು.


    Provided by
    Provided by

    ನಮ್ಮ ರಾಜ್ಯದ ಭವಿಷ್ಯಕ್ಕೆ ಅಡಿಪಾಯ ಕಲಿಕಾಚೇತರಿಕೆಯಾಗಿದ್ದು, ಶಿಕ್ಷಣಕ್ಕೆ ಅನುದಾನ ನೀಡಿದರೆ ಸಾಲದು, ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಧ್ಯೇಯ ಹೊಂದಲಾಗಿದೆ, ಶಿಕ್ಷಕರ ನೇಮಕ ಮತ್ತು ಕೊಠಡಿ ನಿರ್ಮಾಣದಿಂದ ಎಲ್ಲವು ಆಗುವುದಿಲ್ಲ, ಜ್ಞಾನದ ಶತಮಾನದಲ್ಲಿ ಶಿಕ್ಷಣಕ್ಕೆ ಒತ್ತು ನೀಡಬೇಕಿರುವುದು ಸರ್ಕಾರದ ಬದ್ಧತೆಯಾಗಬೇಕಿದೆ ಎಂದರು.
    21ನೇ ಶತಮಾನದಲ್ಲಿ ಜ್ಞಾನಕ್ಕೆ ಬೆಲೆ ಇದೆ, ಜ್ಞಾನ ಇದ್ದವನೇ ಜಗತ್ತು ಆಳುತ್ತಾರೆ, ಪ್ರಪಂಚದಲ್ಲಿ ಇಂದು ಬೆಂಗಳೂರು ತಂತ್ರಜ್ಞಾನಕ್ಕೆ ಹೆಸರಾಗಿದೆ ಎಂದ ಅವರು, ವಿಶ್ವಮಟ್ಟದ ಜ್ಞಾನವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒದಗಿಸಬೇಕಿದೆ, ನಮ್ಮ ಮಕ್ಕಳಿಗೆ ಸಂಖ್ಯೆಯ ಬಗ್ಗೆ ಅದ್ಭುತ ಕಲಿಕೆ ಇದೆ, ವಿದೇಶದ ಮಕ್ಕಳಿಗೆ ಹೋಲಿಕೆ ಮಾಡಿದರೆ ನಮ್ಮ ಮಕ್ಕಳು ಕ್ರಿಯಾಶೀಲರಾಗಿದ್ದು, ಅವರಿಗೆ ಉತ್ತೇಜನ ನೀಡಬೇಕಿದೆ ಎಂದರು.

    ಪ್ರಧಾನಿ ಮೋದಿ ಅವರು ಆಡಳಿತದಲ್ಲಿ ಅನೇಕ ಸಾಹಸಗಳನ್ನು ಮಾಡುತ್ತಿದ್ದಾರೆ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ, ಶಿಶುವಿಹಾರದಿಂದ ಹೊಸ ಶಿಕ್ಷಣ ನೀತಿ ಜಾರಿಯಾಗಲಿದ್ದು, ಮಕ್ಕಳಲ್ಲಿ ಕಲಿಕೆಯ ಉತ್ತೇಜನ ನೀಡಲು ನಿಟ್ಟಿನಲ್ಲಿ ಪಠ್ಯಕ್ರಮವನ್ನು ರೂಪಿಸಲಾಗಿದೆ ಎಂದ ಅವರು ಮಕ್ಕಳಲ್ಲಿನ ಕುತೂಹಲವನ್ನು ತಣ್ಣಿಸುವ ವರೇ ನಿಜವಾದ ಗುರುಗಳು ಎಂದು ಹೇಳಿದರು.

    ಮಕ್ಕಳ ವಿಚಾರಮಟ್ಟದಲ್ಲಿಯೇ ಶಿಕ್ಷಣದ ಪಠ್ಯವನ್ನು ಶಿಕ್ಷಣ ತಜ್ಞರು ರೂಪಿಸಿದ್ದಾರೆ, ಶಿಕ್ಷಕರಿಗೆ ಮಾತ್ರವಲ್ಲ ಮಕ್ಕಳಿಗೂ ಪ್ರಶ್ನೆ ಕೇಳುವ ಹಕ್ಕಿದೆ, ಮಕ್ಕಳ ಪ್ರಶ್ನೆಗಳಿಗೆ ತರ್ಕಬದ್ಧ ಚಿಂತನೆ ಇರುತ್ತದೆ ಅದಕ್ಕೆ ಪ್ರೋತ್ಸಾಹ ನೀಡಿ, ಮೊಟಕುಗೊಳಿಸಬೇಡಿ ಎಂದು ಶಿಕ್ಷಕರಿಗೆ ಸೂಚಿಸಿದ ಅವರು, ಜ್ಞಾನದ ಬಾಗಿಲನ್ನು ಸದಾ ತೆರದಿಟ್ಟು, ನಿರಂತರ ಕಲಿಕೆಯಿಂದ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

    ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಕೋವಿಡ್ ನಂತರ ಪರಿಣಾಮ ಮಕ್ಕಳ ಕಲಿಕೆಯ ಮೇಲಾಗಿದೆ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಳ ಮಾಡಲು ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಒಂದೂವರೆ ಎರಡು ವರ್ಷ ಕಲಿಕೆಯ ಗುಣಮಟ್ಟದಲ್ಲಿ ಆಗಿರುವ ಬದಲಾವಣೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಎಲ್ಲ ರೀತಿಯ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

    ಕಲಿಕಾ ಚೇತರಿಕೆ ಒಂದು ವರ್ಷದ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಒಂದನೇ ತರಗತಿಯಿಂದ ಮೂರನೇ ತರಗತಿವರೆಗೆ ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಮೂಲಕ ಮೂರು ತಿಂಗಳು ಅವರ ಕಲಿಕೆಗೆ ಉತ್ತೇಜನ ನೀಡಲಾಗುವುದು ಅದರಂತೆ ನಾಲ್ಕು ಮತ್ತು ಉಳಿದ ತರಗತಿಗಳಿಗೂ ಇದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

    ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಅಗತ್ಯ ಅನುದಾನ ಮತ್ತು ಪುಸ್ತಕವನ್ನು ರೂಪಿಸಲಾಗಿದ್ದು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ, ಎಸ್ಸಿಎಸ್ಟಿ ಮಕ್ಕಳ ಕಲಿಕೆಯನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
    ಗೃಹ ಸಚಿವ ಅರಗ ಜ್ಞಾನೇಂದ್ರ, ವೈ.ಎ.ನಾರಾಯಣಸ್ವಾಮಿ, ಸಂಸದ ಜಿ.ಎಸ್.ಬಸವರಾಜು, ಜ್ಯೋತಿಗಣೇಧ್, ಚಿದಾನಂದಗೌಡ, ರಾಜೇಶ್ ಗೌಡ, ಎಸ್.ಆರ್.ಗೌಡ ಮೇಯರ್ ಕೃಷ್ಣಪ್ಪ, ಶಿಕ್ಷಣ ಇಲಾಖೆ ಆಯುಕ್ತ ವಿಶಾಲ್, ಕಾರ್ಯದರ್ಶಿ ಪಲ್ಲವಿ ಅಕುರಾತಿ, ಐಜಿಪಿ ಚಂದ್ರಶೇಖರ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಎಸ್ಪಿ ರಾಹುಲ್ ಕುಮಾರ್ ಶಹಪೂರವಾಡ ಸೇರಿದಂತೆ ಇತರರಿದ್ದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.