nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    ತುಮಕೂರು November 11, 2025

    ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ

    By adminNovember 11, 2025No Comments2 Mins Read
    drama

    ತುಮಕೂರು: ತುಮಕೂರಿನ ಶ್ರೀ ರಂಗರಂಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ!?” ಶೀರ್ಷಿಕೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಸಹಯೋಗದಲ್ಲಿ ನ.12 ಮತ್ತು 13 ನವೆಂಬರ್ 2025ರ ಸಂಜೆ 4-00 ಗಂಟೆಯಿಂದ 7-30 ಗಂಟೆವರೆಗೆ ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಿದೆ.

    1987ರಲ್ಲಿ ರಿಚರ್ಡ್ ಜಿ. ಲೂಯಿಸ್ ಅವರ ಮಾರ್ಗದರ್ಶದಲ್ಲಿ ಆರಂಭವಾಗಿ ನವೆಂಬರ್ 12 ಮತ್ತು 13 ರಂದು ರಂಗಶಕ್ತಿ ರಿಚರ್ಡ್ ಜಿ. ಲೂಯಿಸ್ ಅವರಿಂದ ಉದ್ಘಾಟನೆಯಾಗುತ್ತಿದೆ. ಅಧ್ಯಕ್ಷತೆಯನ್ನು ಕಲಾವೃಂದದ ಬೆನ್ನೆಲುಬಾಗಿರುವ ಪತ್ರಿಕಾ ಕ್ಷೇತ್ರದ ಡಾ.ಎಸ್.ನಾಗಣ್ಣನವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಣ ಮತ್ತು ಸಹಕಾರಿ ಕ್ಷೇತ್ರದ ರೂವಾರಿ ಡಾ. ಲ್ಯಾನ್ಸಿ ಹೆಚ್. ಪಾಯಸ್‌ ಆಗಮಿಸುವರು.

    ಜೊತೆಯಲ್ಲಿ ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲರಾದ ಮಾಲಿನಿ ಎಸ್., ತುಮಕೂರು ವಿಶ್ವವಿದ್ಯಾಲಯ ಮತ್ತು ಜಿಲ್ಲಾ ಪಂಚಾಯತ್‌ ನ ಲೆಕ್ಕ ಪರಿಶೋಧಕರು, ಕಲಾವಿದರೂ ಆಗಿರುವ ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ ಕೆ.ಮಿರ್ಜಿ, ಬೆಂಗಳೂರಿನ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾಗಿರುವ ಕೆ.ವಿ.ಮೋಹನ್‌ ಕುಮಾರ್ ಮತ್ತು ಮೊದಲಿನಿಂದಲೂ ಕಲಾವೃಂದದ ಜೊತೆಯಾಗಿರುವ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್, ಜಿಲ್ಲಾಧ್ಯಕ್ಷರು, ರಾಜ್ಯ ಇಂಜಿನಿಯರ್ ಸೇವಾ ಸಂಘದ ಜಿ.ಎನ್‌. ರಾಧಾಕೃಷ್ಣರವರು ಭಾಗವಹಿಸುವರು.

    ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಬೆಂಗಳೂರಿನ ಅಂತರರಾಷ್ಟ್ರ ಖ್ಯಾತ ಹಾಸ್ಯ ಕಲಾವಿದರಾದ ರಿಚರ್ಡ್ ಜಿ. ಲೂಯಿಸ್ ಮತ್ತು ತಂಡದವರಿಂದ ಹಾಸ್ಯಮಿತ ರಂಗಗೀತೆಗಳ ಕಾರ್ಯಕ್ರಮವನ್ನು 12–11–2025 ಸಂಜೆ 4 ಗಂಟೆಗೆ ಏರ್ಪಡಿಸಿದೆ. ಅಂದು ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸಂಜೆ 5:30 ಗಂಟೆಗೆ ಉನ್ನಿಕೃಷ್ಣನ್ ಅವರು ಪ್ರಸ್ತುತಪಡಿಸುವ ಡಾ.ಆರ್.ವಿ.ಭಂಡಾರಿ ರಚಿತ, ಈರಪ್ಪ ಮಹಾಲಿಂಗಪೂರ ನಿರ್ದೇಶನದಲ್ಲಿ ಅಭಿನಯಿಸುವ ನಾಟಕ “ಬೆಳಕು ಹಂಚಿದ ಬಾಲಕ”, ಮತ್ತು 6:30 ಗಂಟೆಗೆ ಅಕ್ಷತ ಸಿ. ಅವರು ಪ್ರಸ್ತುತ ಪಡಿಸುವ ಡಾ.ಶ್ರೀಪಾದ ಭಟ್ ಅವರ ಆರ್. ದಿವ್ಯ ನಿರ್ದೇಶನದಲ್ಲಿ “ಬಲಿ” ನಾಟಕಗಳು ಪ್ರಯೋಗಿಸಲ್ಪಡುತ್ತಿವೆ.

    13—11–2025 ರಂದು ಸಂಜೆ 5:30 ಗಂಟೆಗೆ ಸವಿತಾ, ಶ್ರೀರಂಗರಂಗ ಹವ್ಯಾಸಿ ಕಲಾವೃಂದದ ಮಕ್ಕಳ ತಂಡ ಪ್ರಸ್ತುತ ಪಡಿಸುವ ಆರ್.ಕೆ.ಶಿವಕುಮಾರ್ ರಚನೆಯ ಹೆಚ್.ಎಂ. ರಂಗಯ್ಯ ನಿರ್ದೇಶನದ “ಪ್ರೀತಿಯ ಕಾಳು” ನಾಟಕವು, ಸಂಜೆ 6:30 ಗಂಟೆಗೆ ಕಾರವಾರ ಜಿಲ್ಲೆಯ ಶಿರಸಿಯ ರಂಗಚಿತ್ರದ ಅಖಿಲೇಶ್ ಪ್ರಸ್ತುತ ಪಡಿಸುವ ಹೆಚ್.ಎಸ್. ವೆಂಕಟೇಶ್‌ ಮೂರ್ತಿ ಅವರ ಆರ್.ಕೆ.ಶಿವಕುಮಾರ್ ನಿರ್ದೇಶನದಲ್ಲಿ “ಕಂಸಾಯಣ” ನಾಟಕವು ಪ್ರಯೋಗಿಸಲ್ಪಡುತ್ತಿದೆ.

    ಅಂದು ಸಂಜೆ 4 ಗಂಟೆಗೆ ಮಕ್ಕಳ ನಾಟಕೋತ್ಸವದ ಸಮಾರೋಪ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಜಿ.ವೆಂಕಟೇಶಲು ಮಾತನಾಡುವುದರು, ಮುಖ್ಯ ಅತಿಥಿಗಳಾಗಿ ಸಿರಾ ತಾಲ್ಲೂಕಿನ ಚಿಕ್ಕನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಜಗದೀಶ ಕಣಕಾಲ, ಅಧ್ಯಾಪಕ ಈರಪ್ಪ ಮಹಾಲಿಂಗಪೂರ, ಹೆಚ್‌.ಎಂ.ರಂಗಯ್ಯ ಆರ್.ಕೆ. ಶಿವಕುಮಾರ್ ಮತ್ತು ಶ್ರೀರಾಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು, ತುಮಕೂರು ನಗರದ ಸಾರ್ವಜನಿಕ ಬಂಧುಗಳು, ಕಲಾಪೋಷಕರು, ತಮ್ಮ ಮಕ್ಕಳಿಗೆ ಸದರಿ ನಾಟಕಗಳನ್ನು ತೋರಿಸುವುದರ ಮೂಲಕ ಮಕ್ಕಳ ಕಲಾಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕೆಂದು ಈ ಮೂಲಕ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.