nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 48 ರಿಂದ 60 ಸಾವಿರ ರೂ. ಸೌಲಭ್ಯ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 17, 2024

    ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 48 ರಿಂದ 60 ಸಾವಿರ ರೂ. ಸೌಲಭ್ಯ: ಸಿಎಂ ಸಿದ್ದರಾಮಯ್ಯ

    By adminSeptember 17, 2024No Comments2 Mins Read
    cm siddaramaiah

    ಕಲಬುರಗಿ : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ನನ್ನಲ್ಲಿ ಮೂಡಿದೆ.


    Provided by
    Provided by

    ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದು, ವಾರ್ಷಿಕವಾಗಿ ಸರ್ಕಾರವು ಇದಕ್ಕಾಗಿ 4,000 ಕೋಟಿ ರೂ. ವೆಚ್ಚ ಮಾಡಲಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರ ವೆಚ್ಚ 1,387 ಕೋಟಿ ರೂ. ಗಳನ್ನು ನಮ್ಮ ಸರ್ಕಾರ ಭರಿಸುತ್ತಿದೆ.

    “ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲಾಗುತ್ತಿದೆ. ಇದರಲ್ಲಿ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಕೆ.ಜಿ.ಗೆ 34 ರೂ. ಗಳಂತೆ ತಲಾ ಸದಸ್ಯರಿಗೆ 170 ರೂ. ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗುತ್ತಿದೆ. ಪ್ರದೇಶದ 7 ಜಿಲ್ಲೆಗಳಲ್ಲಿ ಕಳೆದ ಜೂನ್-2024 ಮಾಹೆಗೆ ಒಟ್ಟು 22.59 ಲಕ್ಷ ಪಡಿತರ ಚೀಟಿಯ ಕುಟುಂಬದ ಸದಸ್ಯರಿಗೆ 1,551 ಕೋಟಿ ರೂ. ಹಣ ಪಾವತಿಸಿದೆ.

    200 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ “ಗೃಹ ಜ್ಯೋತಿ” ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜೆಸ್ಕಾಂ ವ್ಯಾಪ್ತಿಯಲ್ಲಿ 21.88 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರ 1,104 ಕೋಟಿ ರೂ. ಜೆಸ್ಕಾಂಗೆ ಸಬ್ಸಿಡಿ ಪಾವತಿಸಿದೆ.

    ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯಡಿ ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಇದುವರೆಗೆ 24.53 ಲಕ್ಷ ಮಹಿಳೆಯರಿಗೆ ತಲಾ 2,000 ರೂ. ಗಳಂತೆ 5000 ಕೋಟಿ ರೂ. ಗಳನ್ನು ಡಿ.ಬಿ.ಟಿ. ಮೂಲಕ ಪಾವತಿಸಿದೆ. ಇದರಿಂದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದಂತಾಗಿದೆ.

    2022-23ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆಯಡಿ ಇದೂವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

    February 4, 2026

    ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ

    February 4, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ತುಮಕೂರು : ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕೆ.ಎಸ್.ಆರ್.ಟಿ.ಸಿ./ಬಿ ಎಂ ಟಿ ಸಿ, ಬಿ.ಟಿ.ಎಸ್. ಬಸ್ಸುಗಳ ಮೇಲೆ ಇಂಗ್ಲಿಷ್ ಪೋಸ್ಟರ್‌ ಗಳು,…

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.