nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಸಾಗುವಳಿ ಚೀಟಿ ಕ್ರಮಬದ್ಧಗೊಳಿಸದಿದ್ದರೆ ಪ್ರತಿಭಟನೆ: ಸಿರಾ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ಎಚ್ಚರಿಕೆ!
    • ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ
    • ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 48 ರಿಂದ 60 ಸಾವಿರ ರೂ. ಸೌಲಭ್ಯ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 17, 2024

    ಪಂಚ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ 48 ರಿಂದ 60 ಸಾವಿರ ರೂ. ಸೌಲಭ್ಯ: ಸಿಎಂ ಸಿದ್ದರಾಮಯ್ಯ

    By adminSeptember 17, 2024No Comments2 Mins Read
    cm siddaramaiah

    ಕಲಬುರಗಿ : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ನನ್ನಲ್ಲಿ ಮೂಡಿದೆ.

    ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದು, ವಾರ್ಷಿಕವಾಗಿ ಸರ್ಕಾರವು ಇದಕ್ಕಾಗಿ 4,000 ಕೋಟಿ ರೂ. ವೆಚ್ಚ ಮಾಡಲಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರ ವೆಚ್ಚ 1,387 ಕೋಟಿ ರೂ. ಗಳನ್ನು ನಮ್ಮ ಸರ್ಕಾರ ಭರಿಸುತ್ತಿದೆ.

    “ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲಾಗುತ್ತಿದೆ. ಇದರಲ್ಲಿ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಕೆ.ಜಿ.ಗೆ 34 ರೂ. ಗಳಂತೆ ತಲಾ ಸದಸ್ಯರಿಗೆ 170 ರೂ. ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗುತ್ತಿದೆ. ಪ್ರದೇಶದ 7 ಜಿಲ್ಲೆಗಳಲ್ಲಿ ಕಳೆದ ಜೂನ್-2024 ಮಾಹೆಗೆ ಒಟ್ಟು 22.59 ಲಕ್ಷ ಪಡಿತರ ಚೀಟಿಯ ಕುಟುಂಬದ ಸದಸ್ಯರಿಗೆ 1,551 ಕೋಟಿ ರೂ. ಹಣ ಪಾವತಿಸಿದೆ.

    200 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ “ಗೃಹ ಜ್ಯೋತಿ” ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜೆಸ್ಕಾಂ ವ್ಯಾಪ್ತಿಯಲ್ಲಿ 21.88 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರ 1,104 ಕೋಟಿ ರೂ. ಜೆಸ್ಕಾಂಗೆ ಸಬ್ಸಿಡಿ ಪಾವತಿಸಿದೆ.

    ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯಡಿ ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಇದುವರೆಗೆ 24.53 ಲಕ್ಷ ಮಹಿಳೆಯರಿಗೆ ತಲಾ 2,000 ರೂ. ಗಳಂತೆ 5000 ಕೋಟಿ ರೂ. ಗಳನ್ನು ಡಿ.ಬಿ.ಟಿ. ಮೂಲಕ ಪಾವತಿಸಿದೆ. ಇದರಿಂದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದಂತಾಗಿದೆ.

    2022-23ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆಯಡಿ ಇದೂವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!

    September 2, 2026

    ಅಡುಗೆ ರುಚಿ ನೋಡಿದರೆ ತಿಳಿಯುವುದಿಲ್ಲ ತಿಂದರೆ ಮಾತ್ರ ರುಚಿ ತಿಳಿಯುವುದು ರುಚಿಯ ಪರಂಪರೆ ಆತಿತ್ಯದ ಹೊಸ ಅಧ್ಯಾಯ ಅನಾದಿಯಿಂದಲೇ ಮನೆಎಂದಾಕ್ಷಣ…

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.