nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ 4ನೇ ಅಲೆ ಭಯಬೇಡ, ಎಚ್ಚರಿಕೆ ವಹಿಸಿ: ಸಚಿವ ಸುಧಾಕರ್
    ರಾಜ್ಯ ಸುದ್ದಿ April 27, 2022

    ಕೋವಿಡ್ 4ನೇ ಅಲೆ ಭಯಬೇಡ, ಎಚ್ಚರಿಕೆ ವಹಿಸಿ: ಸಚಿವ ಸುಧಾಕರ್

    By adminApril 27, 2022No Comments2 Mins Read
    sudhakar

    Provided by
    Provided by

    ಒಂದು ವೇಳೆ ನಾಲ್ಕನೇ ಕೋವಿಡ್ ಅಲೆ ಬಂದರೂ ಜನತೆ ಭಯಬೀಳಬೇಕಾದ ಅಗತ್ಯವಿಲ್ಲ. ಸರ್ಕಾರ ಇದನ್ನು ನಿಯಂತ್ರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    ಒಂದು ಮತ್ತು ಎರಡನೆ ಅಲೆ ನಮಗೆ ಸಾಕಷ್ಟು ಪಾಠ ಕಲಿಸಿದೆ.ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಪರಿಣಾಮ ಮೂರನೆ ಅಲೆಯಲ್ಲಿ ಯಾವುದೇ ರೀತಿಯ ಹೆಚ್ಚಿನ ದುಷ್ಪರಿಣಾಮ ಬೀರಲಿಲ್ಲ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಒಂದು ತಿಂಗಳು ಮುಂಚಿತವಾಗಿಯೇ ಕೋವಿಡ್ ನಾಲ್ಕನೆ ಅಲೆ ಬರಬಹುದೆಂದು ತಜ್ಞರು ವರದಿ ನೀಡಿದ್ದಾರೆ.

    ಹೀಗಾಗಿ ನಾವು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಜನರು ವದಂತಿಗಳಿಗೆ ಕಿವಿಕೊಡದೆ ಮೊದಲು ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದರು.ಐಐಟಿ ಕಾನುರ್ ಅವರನ್ನೊಳಗೊಂಡ ತಜ್ಞರ ತಂಡ ಜೂನ್ ತಿಂಗಳ ಅಂತ್ಯಕ್ಕೆ ನಾಲ್ಕನೆ ಕೋವಿಡ್ ಅಲೆ ಬರಬಹುದೆಂದು ಹೇಳಿದ್ದರು. ಆದರೆ, ಇದೀಗ ಒಂದು ತಿಂಗಳು ಮುಂಚಿತವಾಗಿಯೇ ಬರಬಹುದೆಂದು ವರದಿ ಕೊಟ್ಟಿದ್ದಾರೆ. ಒಂದು, ಎರಡು ಮತ್ತು ಮೂರನೆ ಅಲೆಯಲ್ಲಿ ಅವರು ನೀಡಿರುವ ವೈಜ್ಞಾನಿಕ ವರದಿಗಳು ಸರಿಸುಮಾರು ಬಹುತೇಕ ಸರಿಯಾಗಿದೆ ಎಂದರು.

    ಲಸಿಕೆ ಇಲ್ಲದಿದ್ದಾಗ ಪರದಾಡುವ ಬದಲು ನಮ್ಮಲ್ಲಿ ಸಾಕಷ್ಟು ಲಸಿಕೆ ಸಂಗ್ರಹವಿದೆ. ಯಾರು ಎರಡನೇ ಮತ್ತು ಮೂರನೆ ಲಸಿಕೆಯನ್ನು ಪಡೆದಿಲ್ಲವೇ ಅಂತಹವರು ತಕ್ಷಣ ಪಡೆಯಬೇಕು. ನೀವು ಲಸಿಕೆ ಪಡೆದರೆ ಸೋಂಕು ಬರುವುದಿಲ್ಲ ಎಂದು ಭಾವಿಸಬೇಡಿ. ಆದರೆ, ಆಗಬಹುದಾದ ಅನಾಹುತವನ್ನು ತಡೆಯಲು ಸಾಧ್ಯವಾಗತ್ತದೆ ಎಂದು ಸುಧಾಕರ್ ಸಲಹೆ ಮಾಡಿದರು.

    ಅರವತ್ತು ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆಯನ್ನು ನೀಡುತ್ತಿದ್ದೇವೆ. ಲಸಿಕೆ ಪಡೆಯದೇ ಇರುವವರು ಕೂಡಲೇ ತೆಗೆದುಕೊಳ್ಳಬೇಕು. ಎರಡನೇ ಲಸಿಕೆಯನ್ನು 12ರಿಂದ 15 ಲಕ್ಷ ಮಂದಿ ಪಡೆದಿಲ್ಲ. ಉಚಿತವಾಗಿ ಕೊಟ್ಟರೂ ಲಸಿಕೆ ಹಾಕಿಸಿಕೊಳ್ಳಲು ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು.

    ನಾಲ್ಕನೆ ಅಲೆ ಬರುತ್ತದೆಯೋ ಇಲ್ಲವೋ ಎಂಬುದರ ಬಗ್ಗೆ ಚಿಂತೆ ಬೇಡ. ಇದು ಹೊಸ ಪ್ರಭೇದವೋ ಇಲ್ಲವೆ ಮುಂದುವರೆದ ಭಾಗವೋ ಎಂಬುದು ಅಧ್ಯಯನದಿಂದ ಗೊತ್ತಾಗುತ್ತದೆ. ನಾಲ್ಕನೆ ಅಲೆ ಬಂದರೂ ಆರೋಗ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಲಸಿಕೆ ಪಡೆದ ಪರಿಣಾಮ ಮೂರನೆ ಅಲೆಯಲ್ಲಿ ಐಸಿಯು, ಆಸ್ಪತ್ರೆಗೆ ದಾಖಲಾಗುವುದು, ಔಷಗಳ ಸಮಸ್ಯೆ ಎದುರಾಗಲಿಲ್ಲ.

    ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಾವು ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಜಾರಿ ಮಾಡಿದ್ದೇವೆ. ನೀವು ಸಹ ನಮ್ಮ ಜತೆ ಕೈಜೋಡಿಸಿ ಎಂದು ಮನವಿ ಮಾಡಿದರು.

    ನಾಳೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಆಯಾ ರಾಜ್ಯಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗಿಲ್ಲ. ಹಾಗಾಗಿ ಜನತೆ ಭಯಭೀತರಾಗುವುದು ಬೇಡ ಎಂದು ಡಾ.ಸುಧಾಕರ್ ಅಭಯ ನೀಡಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.