ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಹಿಂದೂ ಯುವಕರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಿಲೀಫ್ ಸಿಕ್ಕಿದೆ.
ಈ ಬಗ್ಗೆ ಕಲಬುರಗಿ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದು, ಯತ್ನಾಳ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.
ಕೊಪ್ಪಳದಲ್ಲಿ ಯತ್ನಾಳ್ ನೀಡಿದ್ದ ಈ ಹೇಳಿಕೆಗೆ ಸಂಬಂಧಿಸಿದಂತೆ ವಿಜಯಪುರ, ಕಲಬುರ್ಗಿ ಹಾಗೂ ಕೊಪ್ಪಳದಲ್ಲಿ ದೂರುಗಳು ದಾಖಲಾಗಿದ್ದವು.
ವಿಜಯಪುರ, ಕಲಬುರಗಿಯಲ್ಲಿ ದಾಖಲಾಗಿದ್ದ ದೂರುಗಳನ್ನು ಪೊಲೀಸ್ ಇಲಾಖೆ ಕೊಪ್ಪಳಕ್ಕೆ ವರ್ಗಾಯಿಸಿತ್ತು. ಈ ದೂರುಗಳ ರದ್ದತಿ ಕೋರಿ ಕಲಬುರಗಿ ವಿಭಾಗೀಯ ಪೀಠಕ್ಕೆ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಯತ್ನಾಳ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಮೂರ್ತಿ ಎಂಐ ಅರುಣ್ ಅವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC