nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 67ನೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ: ನವೆಂಬರ್ 1 ಕನ್ನಡಿಗರ ಹೆಮ್ಮೆಯ ದಿನ: ಶಾಸಕ ಎಂ.ವಿ.ವೀರಭದ್ರಯ್ಯ
    ರಾಜ್ಯ ಸುದ್ದಿ November 2, 2022

    67ನೇ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ: ನವೆಂಬರ್ 1 ಕನ್ನಡಿಗರ ಹೆಮ್ಮೆಯ ದಿನ: ಶಾಸಕ ಎಂ.ವಿ.ವೀರಭದ್ರಯ್ಯ

    By adminNovember 2, 2022No Comments2 Mins Read
    pavagada

    ಮಧುಗಿರಿ: 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಸಕರಾದ ಎಂ.ವಿ.ವೀರಭದ್ರಯ್ಯ, ಉಪ ವಿಭಾಗ ಅಧಿಕಾರಿಗಳಾದ ಸೋಮಪ್ಪ ಕಡಕೋಳ, ತಾಲೂಕು ದಂಡಾಧಿಕಾರಿ ಸುರೇಶ್ ಆಚಾರ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಹಲವು ಗಣ್ಯರು ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

    ನಂತರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಾಲ್ನಡಿಗೆ ಮೆರೆವಣಿಗೆ ಮುಖಾಂತರ ಸಾಗಿದರು. ಕ್ರೀಡಾಂಗಣದಲ್ಲಿ ಮೊದಲಿಗೆ ರಾಷ್ಟ್ರಗೀತೆ ಹಾಡುವ ಮೂಲಕ ಉಪವಿಭಾಗಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಗೀತೆ ಹಾಡುವ ಮೂಲಕ ಶಾಸಕರು ನಾಡ ಧ್ವಜಾರೋಹಣ ನೆರವೇರಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉಪವಿಭಾಗ ಅಧಿಕಾರಿ ಸೋಮಪ್ಪ ಕಡಕೋಳ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಆರಂಕುಸಮಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ, ಮರಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ವನವಾಸಿ ದೇಶದೊಳ್ ಎಂದು ತನ್ನ ತಾಯಿನಾಡಿನ ಬಗ್ಗೆ ಇರುವ ಪ್ರೀತಿಯನ್ನು ಮಹಾಕವಿ ಪಂಪ ವ್ಯಕ್ತಪಡಿಸಿರುತ್ತಾರೆ ಎಂದರು.

    ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು ಎಂಬ ನಾಡಗೀತೆ ರಚಿಸಿ ಕನ್ನಡಿಗರಲ್ಲಿ ಜಾಗೃತಿ ಮೂಡಿಸಿದ ನಾಡಕವಿ ಹೂಯಿಲಗೋಳ ನಾರಾಯಣರಾಯರು, ಎಲ್ಲಾದರು ಇರು ಎಂತಾದರು ಇರುಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ ಕನ್ನಡ ಗೋವಿನ ಓ ಮುದ್ದಿನ ಕರುಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಸಾರಿದ ಕುವೆಂಪು ರವರ ಸಾಲುಗಳು, ಇನ್ನೂ ಅನೇಕ ಕನ್ನಡ ಸಾಹಿತಿ ಸಾಲುಗಳು ಕನ್ನಡ ಕಂಪನ್ನು ಎತ್ತಿ ಹಿಡಿದಿವೆ ಎಂದು ತಿಳಿಸಿದರು.

    ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಗುತ್ತದೆ. ಈ ದಿನದಂದು ಇಡೀ ಕರ್ನಾಟಕದ ಪ್ರತಿ ಮನೆಯಲ್ಲೂ ಹಬ್ಬದ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಾರೆ. ನಮ್ಮ ಕನ್ನಡ ನಾಡು ಶ್ರೀಗಂಧದ ಬೀಡು. ಕರುನಾಡು, ಕನ್ನಡ ನಾಡು, ಕನ್ನಡಾಂಭೆಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುತ್ತದೆ. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳು ಗೂಡು, ಪವಿತ್ರ ಕಾವೇರಿ, ತುಂಗಭದ್ರೆ ನದಿಗಳು ಹರಿಯುವ, ಸಾಧು-ಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿಗಿದೆ ಎಂದು ತಿಳಿಸಿದರು.

    ಪ್ರಧಾನ ಭಾಷಣಕರಾದ ಡಾ.ಅಮರಾವತಿ ದೇಹಚಾರ್ ಮಾತನಾಡಿ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಡೀ ಕರ್ನಾಟಕ ರಾಜ್ಯಾದ್ಯಂತ ಅದ್ಧೂರಿಯಾಗಿ ವಿಜೃಂಭಣೆಯಿಂದ ಈ ದಿನ ಕನ್ನಡ ನಾಡ ಹಬ್ಬ ಆಚರಿಸಲಾಗುತ್ತಿದೆ. ಕನ್ನಡ ಭಾಷೆಯನ್ನು ನಾವು ಎಲ್ಲಾ ವರ್ಗದಲ್ಲಿಯೂ ಸಹ ಎತ್ತಿ ಹಿಡಿಯಬೇಕು ಎಂದು ತಿಳಿಸಿದರು.

    ಎಸ್.ಎಂ.ಆಂಗ್ಲಶಾಲೆ, ಕಾರ್ಡಿಯಲ್ ಆಂಗ್ಲ ಶಾಲೆ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿತು. ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
    ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಎಂ.ಆರ್.ಜಗನ್ನಾಥ್, ಚಂದ್ರಶೇಖರ್ ಬಾಬು, ಗಂಗರಾಜು, ನಾಣಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಹಾಗೂ ಜನಸಾಮಾನ್ಯರು ಇದ್ದರು.

    ವರದಿ : ಅಬಿದ್, ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ತಿಪಟೂರು: ತಾಲೂಕಿನ ಸಾರ್ಥವಳ್ಳಿ ವಲಯದ ಸಾರ್ಥವಳ್ಳಿ ನಿವಾಸಿಯಾದ ಗಂಗಾಧರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಳೆದ…

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.