ತುಮಕೂರು: ರಾಷ್ರೀಯ ಹಾಗೂ ರಾಜ್ಯಹಬ್ಬಗಳ ಆಚರಣೆಯ ದಿನಗಳನ್ನುರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯವು ಆಯೋಜಿಸಿದ್ದ 69ನೆಯ ಕನ್ನಡರಾಜ್ಯೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆ ಆಡಳಿತ ಭಾಷೆಯಾಗಬೇಕು.‘ಕನ್ನಡ ಮಾತನಾಡಿ, ಕನ್ನಡದಲ್ಲೇ ವ್ಯವಹರಿಸಿ’ಎಂದುಕಡ್ಡಾಯ ಮಾಡುವ ಕಾಲದಲ್ಲಿ ನಾವಿರುವುದು ಬೇಸರದ ಸಂಗತಿ,ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದರು.
ಒತ್ತಾಯಪೂರ್ವಕವಾಗಿಯಾವುದೇ ಭಾಷೆಯನ್ನುಯಾರ ಮೇಲೂ ಹೇರುವ ಬದಲು,ಕನ್ನಡದ ನೆಲ, ಜಲ, ಗಾಳಿಯ ಮಹತ್ವ ತಿಳಿದು, ಭಾಷೆಯನ್ನು ಬಳಸಿ, ಉಳಿಸಿದರೆ ಅವರೂ ಕನ್ನಡತಾಯಿಯ ಮಕ್ಕಳು.ಕರ್ನಾಟಕದಗಡಿ ಭಾಗಗಳಲ್ಲಿ ಕನ್ನಡ ಭಾಷೆ ಮಾಯವಾಗುತ್ತಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.
ವಿವಿ ಕುಲಸಚಿವೆ ನಾಹಿದಾ ಜಮ್ ಜಮ್, ರಾಷ್ರೀಯ ಹಬ್ಬಗಳ ಆಚರಣೆ ಸಂಯೋಜಕ ಡಾ.ಎ.ಎಂ.ಮಂಜುನಾಥ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಯ ಬೋಧಕ–ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296