ರಾಜಾಜಿನಗರದ ಶ್ರೀ ರಾಮಮಂದಿರ ಆಟದ ಮೈದಾನದಲ್ಲಿ ಜನರು ಕುಳಿತುಕೊಳ್ಳುವ ಗ್ಯಾಲರಿ, ಟೆನ್ಸಿಲ್ ರೂಫ್, ರಕ್ಷಣಾ ಬೇಲಿ, ಹೊನಲು ಬೆಳಕು ವ್ಯವಸ್ಥೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು 6ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಸುರೇಶ್ಕುಮಾರ್ ಹೇಳಿದರು.
ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆಟದ ಮೈದಾನದ ನವೀಕರಣ ಕಾಮಗಾರಿಯನ್ನು ಐದು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಆಟದ ಮೈದಾನವನ್ನು ಲೋಕರ್ಪಣೆ ಮಾಡಲಾಗುವುದು ಎಂದು ಹೇಳಿದರು.
ಶ್ರೀ ರಾಮಮಂದಿರ ಆಟದ ಮೈದಾನ ರಾಮಲೀಲಾ ಮೈದಾನದಷ್ಟೆ ಪ್ರಸಿದ್ಧಿ ಪಡೆದಿದೆ. ರಾಷ್ಟದ ಮಹಾನ್ ನಾಯಕರು ಶ್ರೀ ರಾಮಮಂದಿರ ಆಟದ ಮೈದಾನಕ್ಕೆ ಭೇಟಿ ನೀಡಿದ್ದಾರೆ. ಈ ಜಾಗವನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ನಿಗದಿತ ಅವಯಲ್ಲಿ ಕಾಮಗಾರಿಗಳನ್ನು ಪೂರ್ಣ ಗೊಳಿಸಲಾಗುವುದು ಎಂದರು.
ಸಂಸದ ಪಿ.ಸಿ.ಮೋಹನ್ ಮಾತನಾಡಿ, ಶ್ರೀ ರಾಮಮಂದಿರ ಆಟದ ಮೈದಾನ ಇತಿಹಾಸವುಳ್ಳ ಕ್ರೀಡಾಂಗಣವಾಗಿದೆ. ಮಾಜಿ ಪ್ರಧಾನಿ ವಾಜಪೇಯಿ ಅವರಂತಹ ನಾಯಕರು ಈ ಆಟದ ಮೈದಾನದಲ್ಲಿ ಬಹಿರಂಗ ಸಭೆ ಮಾಡಿದ ಇತಿಹಾಸವಿದೆ. ಕ್ರೀಡಾ ಚಟುವಟಿಕೆಗಳು ಪ್ರತಿಯೊಬ್ಬರಿಗೂ ಮುಖ್ಯ. ಮಾನಸಿಕ, ದೈಹಿಕವಾಗಿ ಸದೃಢವಾಗಲು ಮತ್ತು ಜನರಿಗೆ ಸಹಕಾರಿಯಾಗಲು 6 ಕೋಟಿ ವೆಚ್ಚದಲ್ಲಿ ನವೀಕರಣ ಕಾರ್ಯವಾಗಲಿದೆ ಎಂದರು.
ಮಾಜಿ ಉಪಮಹಾಪೌರ ರಂಗಣ್ಣ, ಪಾಲಿಕೆ ಮಾಜಿ ಸದಸ್ಯರಾದ ಮುನಿರಾಜು, ದೀಪಾ ನಾಗೇಶ್, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರರಾವ್, ಮುಖಂಡ ಬಿ.ಎನ್.ಶ್ರೀನಿವಾಸ್, ಕಾರ್ಯಪಾಲಕ ಅಭಿಯಂತರ ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy