ತಮಿಳುನಾಡಿನ ತಿರುಪ್ಪೂರ್ ನಲ್ಲಿ ಇಬ್ಬರು ರೈತರು ಸೇರಿದಂತೆ ಏಳು ಜನರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಚಿರತೆಯನ್ನು ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ನಾಲ್ಕು ದಿನಗಳ ಹಿಂದೆ ಜನವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ ಹೊಲದ ಬಳಿಯಿದ್ದ ವರದರಾಜನ್ ಮತ್ತು ಮಾರನ್ ಎಂಬ ಇಬ್ಬರು ರೈತರ ಮೇಲೆ ದಾಳಿ ಮಾಡಿತ್ತು. ರೈತರನ್ನು ರಕ್ಷಿಸಲು ಯತ್ನಿಸಿದ ಇತರ ಮೂವರಿಗೆ ಗಾಯಗಳಾಗಿವೆ.ಗ್ರಾಮಸ್ಥರ ಪ್ರಕಾರ, 60 ವರ್ಷದ ವರದರಾಜನ್ ಜನವರಿ 24 ರಂದು ಮುಂಜಾನೆ ತನ್ನ ಜಮೀನಿಗೆ ಹೋದಾಗ ಚಿರತೆ ಅವನ ಮೇಲೆ ಧಾಳಿ ನಡೆಸಿ ಭುಜವನ್ನು ಕಚ್ಚಿತ್ತು. ಎಲ್ಲರೂ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿರತೆಯನ್ನ ಸೆರೆ ಹಿಡಿದು ಬೋನಿಗೆ ಹಾಕುವ ಪ್ರಯತ್ನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗೂ ಗಾಯಗಳಾಗಿವೆ. ಚಿರತೆ ಚಲನವಲನದ ಮೇಲೆ ನಿಗಾ ಇಡಲು ಅಧಿಕಾರಿಗಳು 10 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿತ್ತು, ಕತ್ತಲಲ್ಲಿ ಒಂಟಿಯಾಗಿ ಓಡಾಡದಂತೆ ಜನರಿಗೆ ಮನವಿ ಮಾಡಿದ್ದರು.ಅಮ್ಮಾಪಾಳ್ಯಂ ಬಳಿ ಪ್ರಾಣಿಯನ್ನು ಪತ್ತೆಹಚ್ಚಲಾಗಿದೆ. ಚಿರತೆಯನ್ನು ಅಣ್ಣಮಲೈ ಅರಣ್ಯಕ್ಕೆ ಬಿಡಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy