ಕೊರಟಗೆರೆ: ವರುಣನ ರುದ್ರಾವತಾರ ಮುಂದುವರೆದಿದ್ದು ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಕೊರಟಗೆರೆ ತಾಲ್ಲೂಕಿನ ಕುರುಡುಗನಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೋಂ ವೀರಕ್ಯಾತಪ್ಪ ಎಂಬ 70 ವರ್ಷದ ವೃದ್ದೆಯು ತನ್ನ ಜಮೀನಿಗೆ ಹೋಗಿ ವಾಪಸ್ ಬರುವ ಮಾರ್ಗ ಮಧ್ಯೆಯ ಹುಂಜಿನ ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿದ ತಕ್ಷಣವೇ ಕೊರಟಗೆರೆ ಆರಕ್ಷಕ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಮತ್ತು ಆರಕ್ಷಕ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ ಗ್ರಾಮಸ್ಥರ ಸಹಕಾರದಿಂದ ವೃದ್ಧೆಯ ಮೃತ ದೇಹವನ್ನು ಹುಡುಕಿ ಹೊರತೆಗೆದಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz