nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಯ ಆರ್ಭಟದಿಂದ 80 ಮನೆಗಳ ಗೋಡೆಗಳಿಗೆ ಬಿರುಕು: ಪಡಿತರ ಕಿಟ್ ವಿತರಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್
    ಕೊರಟಗೆರೆ August 4, 2022

    ಮಳೆಯ ಆರ್ಭಟದಿಂದ 80 ಮನೆಗಳ ಗೋಡೆಗಳಿಗೆ ಬಿರುಕು: ಪಡಿತರ ಕಿಟ್ ವಿತರಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್

    By adminAugust 4, 2022No Comments2 Mins Read
    sudhakar lal

    ಕೊರಟಗೆರೆ : ಮಳೆಯಆರ್ಭಟದಿಂದ ಚನ್ನಸಾಗರ ಗ್ರಾಮವೇ ಜಯಮಂಗಲಿ ನದಿಯ ನೀರಿನಲ್ಲಿ ಮುಳುಗಿದೆ. 80 ಮನೆಗಳ ಗೋಡೆಗಳು ಬಿರುಕುಬಿಟ್ಟು ಭಯದ ವಾತಾವರಣ ನಿರ್ಮಾಣವಾಗಿದೆ. ರೈತರು ಮನೆಯಲ್ಲಿ ಶೇಖರಣೆ ಮಾಡಲಾಗಿದ್ದ ಲಕ್ಷಾಂತರ ರೂ ಮೌಲ್ಯದ ಧವಸದಾನ್ಯ ಮಳೆಯ ನೀರಿನಲ್ಲಿ ಕೊಚ್ಚಿಹೋಗಿದೆ. ಮಧುಗಿರಿ ಆಡಳಿತ ಮತ್ತು ತುಮಕೂರು ಜಿಲ್ಲಾಡಳಿತ ತಕ್ಷಣ ರೈತರ ನೆರವಿಗೆ ಧಾವಿಸಬೇಕಾಗಿದೆ.

    ಕೊರಟಗೆರೆ ವಿಧಾನಸಭಾ ಕ್ಷೇತ್ರ ಪುರವಾರ ಹೋಬಳಿ ಕೊಡಗದಾಲ ಗ್ರಾಪಂ ವ್ಯಾಪ್ತಿಯ ಚನ್ನಸಾಗರ ಗ್ರಾಮದಲ್ಲಿ ಒಟ್ಟು 80ಕ್ಕೂ ಅಧಿಕ ಕುಟುಂಬಗಳಿವೆ. ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 400 ಕ್ಕೂ ಅಧಿಕ ಜನತೆ ವಾಸವಿದ್ದಾರೆ. ಸ್ಥಳೀಯವಾಗಿ ಸರಕಾರಿ ಶಾಲೆ ಅಂಗನವಾಡಿ ಕೇಂದ್ರವಿದ್ದು, ಮಳೆಯ ನೀರಿನಲ್ಲಿ ಮುಳುಗಡೆ ಆಗಿ ಸಮಸ್ಯೆ ಸೃಷ್ಟಿಯಾಗಿದೆ.

    ಚನ್ನಸಾಗರ ಗ್ರಾಮದ 80ಮನೆಯಲ್ಲಿ ರೈತರು ಶೇಖರಣೆ ಮಾಡಿದ್ದ ರಾಗಿ, ಭತ್ತ ಮತ್ತು ದಿನಸಿ ವಸ್ತುಗಳು ಸಂಪೂರ್ಣ ನಾಶವಾಗಿದೆ. ಜಯಮಂಗಳಿ ನದಿಯ ನೀರು ಮನೆಯೊಳಗೆ ನುಗ್ಗಿರುವ ಪರಿಣಾಮ ಮನೆಯ ಆವರಣ ಕೆಸರು ಗದ್ದೆಯಾಗಿದೆ. ವಿದ್ಯಾರ್ಥಿಗಳ ಪುಸ್ತಕ ಮತ್ತು ರೈತರ ದಾಖಲೆಗಳು ಸಂಪೂರ್ಣ ನೀರಿನಲ್ಲಿ ಕೊಚ್ಚಿಹೋಗಿವೆ. ಜಾನುವಾರುಗಳಿಗೆ ಶೇಖರಣೆ ಮಾಡಿದ್ದ ಮೇವು ಸಹ ನೀರಿನಲ್ಲಿ ಹರಿದುಹೋಗಿದೆ.

    ಸುವರ್ಣಮುಖಿ, ಜಯಮಂಗಲಿ ಮತ್ತು ಗರುಡಾಚಲ ನದಿಯ ಸಂಗಮಸ್ಥಳವಾದ ಚನ್ನಸಾಗರ ಗ್ರಾಮವು ಅಪಾಯ ಸ್ಥಿತಿಗೆ ತಲುಪಿದೆ. 3ನದಿಗಳ ಸಂಗಮ ಸ್ಥಳಕ್ಕೆ ಸರಕಾರ ಹೆಚ್ಚಿನ ಭದ್ರತೆಯ ಜೊತೆಗೆ ಅಭಿವೃದ್ದಿಗೆ ಆಧ್ಯತೆ ನೀಡಬೇಕಾದ ಅನಿವಾರ್ಯತೆ ಇದೆ. ಗೌರಿಬಿದನೂರು-ಮಧುಗಿರಿಯ ನಡುವೆಯ ಸೇತುವೆಯ ಸಮೀಪವೇ ಇರುವ ಗ್ರಾಮಕ್ಕೆ ಹೆಚ್ಚಿನ ಜಾಗೃತಿ ಮತ್ತು ಕಾಳಜಿಯ ಅವಶ್ಯಕತೆ ಇದೆ.

    ಪಡಿತರ ಕಿಟ್ ವಿತರಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್:

    ಜಯಮಂಗಲಿ ನದಿಯ ನೀರಿನಿಂದ ಚನ್ನಸಾಗರ ಗ್ರಾಮವು ಜಲಾವೃತವಾದ ಪರಿಣಾಮ ಮಾಜಿ ಶಾಸಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜನರ ರಕ್ಷಣೆಗೆ ಮುಂದಾಗಿದ್ದಾರೆ.  ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ನೇತೃತ್ವದ ತಂಡ ಚನ್ನಸಾಗರ ಗ್ರಾಮಕ್ಕೆ ಭೇಟಿ ನೀಡಿ 80 ಕುಟುಂಬಗಳಿಗೆ ಪಡಿತರ ಕಿಟ್ ವಿತರಣೆ ಮಾಡಿ ಸಂಕಷ್ಟದಲ್ಲಿರುವ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

    ಅಂಗನವಾಡಿ ಕೇಂದ್ರದಲ್ಲಿದ್ದ ದಾಖಲೆ ಮತ್ತು ದಿನಸಿ ಸಾಮಾನು ನಾಶವಾಗಿವೆ. ಪ್ರಸ್ತುತವು ಕಟ್ಟಡದೊಳಗೆ ನೀರಿನಿಂದ ಜಲಾವೃತವಾಗಿದೆ. ಮಕ್ಕಳ ಆಡಿಕೆ ಸಾಮಾನು ಮತ್ತು  ಟೇಬಲ್ ಹಾಳಾಗಿವೆ. ಅಂಗನವಾಡಿ ಕೇಂದ್ರ ಸ್ಥಳಾಂತರಕ್ಕೆ ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಚನ್ನ ಸಾಗರ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸರಸ್ಪತಿ ತಿಳಿಸಿದರು.

    ಚನ್ನಸಾಗರ ಗ್ರಾಮದ 80 ಮನೆಗಳಲ್ಲಿ 380ಕ್ಕೂ ಅಧಿಕ ಜನ ವಾಸವಿದ್ದಾರೆ. ಮುಂಜಾನೆ ಘಟನೆಯಾದ ಪರಿಣಾಮ ನಾವೇಲ್ಲ ಬದುಕಿದ್ದೇವೆ. ಜಾನುವಾರುಗಳ ರಕ್ಷಣೆ ಮತ್ತು ಬಿತ್ತನೆ ಮಾಡಿದ ಬೆಳೆಯು ಮುಳುಗಿದೆ. ಅಂಗನವಾಡಿ ಮತ್ತು ಶಾಲೆಗೆ ತೆರಳಲು ಮಕ್ಕಳ ವ್ಯಾಸಂಗಕ್ಕೆ ಸಮಸ್ಯೆ ಎದುರಾಗಿದೆ. ನಮಗೆ ಶಾಶ್ವತವಾದ ಪರಿಹಾರವನ್ನು ಸರಕಾರ ಮಾಡಬೇಕಿದೆ ಎಂದು ಗ್ರಾಮಸ್ಥ ಲಕ್ಷ್ಮಿನಾರಾಯಣ ಆಗ್ರಹಿಸಿದರು.

    ಚನ್ನಸಾಗರ ಗ್ರಾಮವು ನೀರಿನಿಂದ ಜಲಾವೃತವಾಗಿ ಮನೆಯಲ್ಲಿದ್ದ ದವಸಧಾನ್ಯ ನಾಶವಾಗಿವೆ. ಮನೆಗಳ ಗೂಡೆಗಳು ಕುಸಿದು ರೈತರ ಜೀವನ ಬೀದಿಗೆ ಬಂದಿದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಈಗಾಗಲೇ ಸಮಸ್ಯೆ ಎದುರಾಗಿದೆ. ನಾನು ಇಂದು 80ಕುಟುಂಬಕ್ಕೆ ಆಹಾರದ ಕಿಟ್ ವಿತರಿಸಿದ್ದೇನೆ. ಸರಕಾರ ತಕ್ಷಣ ರೈತರ ನೆರವಿಗೆ ಆಗಮಿಸಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಒತ್ತಾಯಿಸಿದರು.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ…

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.