nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Facebook Twitter Instagram
    ಟ್ರೆಂಡಿಂಗ್
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    • ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ:  ಕೊರಟಗೆರೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ
    • ತಿಪಟೂರು:  ಟ್ಯೂಷನ್ ಗೆ ಹೋಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ | ನಮ್ಮ ತುಮಕೂರು ಫಲಶ್ರುತಿ
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.21ಕ್ಕೆ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವ: ಉಪರಾಷ್ಟ್ರಪತಿಗಳು ಸೇರಿದಂತೆ ಗಣ್ಯರ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇ.98ರಷ್ಟು ಭರವಸೆ ಈಡೇರಿಸಿದ್ದೇನೆ, ಇನ್ನಷ್ಟು ಅಭಿವೃದ್ಧಿಗೆ ಕೈ ಜೋಡಿಸಿ : ಲಕ್ಷ್ಮೀ ಹೆಬ್ಬಾಳಕರ್ ಮನವಿ
    ಜಿಲ್ಲಾ ಸುದ್ದಿ April 27, 2023

    ಶೇ.98ರಷ್ಟು ಭರವಸೆ ಈಡೇರಿಸಿದ್ದೇನೆ, ಇನ್ನಷ್ಟು ಅಭಿವೃದ್ಧಿಗೆ ಕೈ ಜೋಡಿಸಿ : ಲಕ್ಷ್ಮೀ ಹೆಬ್ಬಾಳಕರ್ ಮನವಿ

    By adminApril 27, 2023No Comments3 Mins Read
    laxmi hebalkar

    ಬೆಳಗಾವಿ: 5 ವರ್ಷದ ಹಿಂದೆ  2018ರ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ಭರವಸೆಗಳಲ್ಲಿ ಶೇ.98ರಷ್ಟು ಈಡೇರಿಸಿದ್ದೇನೆ. ವಿರೋಧ ಪಕ್ಷದ ಶಾಸಕಿಯಾಗಿದ್ದರಿಂದ 2 ಭರವಸೆಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಅವುಗಳನ್ನೂ ಮೊದಲ ಆದ್ಯತೆಯ ಮೇಲೆ ಈಡೇರಿಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

    ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಯುಕ್ತ ಕಂಗ್ರಾಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅವರು ಪ್ರಚಾರ ನಡೆಸುತ್ತಿದ್ದರು. ಕ್ಷೇತ್ರ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಿಂದುಳಿದಿದ್ದರಿಂದ ಕಳೆದ ಬಾರಿ ಮೂಲಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿದ್ದೇನೆ. ರಸ್ತೆ, ಚರಂಡಿ, ಕುಡಿಯುವ ನೀರು, ಶಾಲೆ, ದೇವಸ್ಥಾನ, ಸಮುದಾಯ ಭವನಗಳ ಬೇಡಿಕೆಗಳನ್ನು ಈಡೇರಿಸಿದ್ದೇನೆ. ಇದರ ಜೊತೆಗೆ, ಕಾಲೇಜು ಮತ್ತು ಆಸ್ಪತ್ರೆ ಕಟ್ಟಿಸುವ ಯೋಜನೆಯನ್ನೂ ನಾನು ಹಾಕಿಕೊಂಡಿದ್ದೆ. ಆದರೆ ನಮ್ಮ ಸರಕಾರವಿಲ್ಲದ್ದರಿಂದ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಈಡೇರಿಸುತ್ತೇನೆ ಎಂದು ಅವರು ತಿಳಿಸಿದರು.


    Provided by
    Provided by

    ಜಲಸಂಪನ್ಮೂಲ ಇಲಾಖೆಯಿಂದ 695.81 ಕೇಟಿ ರೂ., ಸಣ್ಣ ನೀರಾವರಿ ಇಲಾಖೆಯಿಂದ 3092 ಲಕ್ಷ ರೂ., ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 5142.74 ಲಕ್ಷ ರೂ., ಲೋಕೋಪಯೋಗಿ ಇಲಾಖೆಯಿಂದ 1694.35 ಲಕ್ಷರೂ., ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 100 ಲಕ್ಷ ರೂ., ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ   50 ಲಕ್ಷ ರೂ., ಪ್ರವಾಸೋದ್ಯಮ ಇಲಾಖೆಯಿಂದ 300 ಲಕ್ಷ ರೂ., ಹಿಂದುಳಿದ ವರ್ಗಗಳ ಇಲಾಖೆಯಿಂದ  100 ಲಕ್ಷ ರೂ., ಶಾಸಕರ ನಿಧಿಯಿಂದ 792 ಲಕ್ಷ ರೂ. ಗ್ರಾಮೀಣಾಭಿವೃದ್ಧಿ ನಿಗಮದಿಂದ 800 ಲಕ್ಷ ರೂ. ಮುಜರಾಯಿ ಇಲಾಖೆಯಿಂದ 960 ಲಕ್ಷ ರೂ. ರಸ್ತೆ, ದೇವಸ್ಥಾನ, ಬ್ರಿಡ್ಜ್ ಕಂ ಬಾಂದಾರ, ಕೆರೆಗಳ ಅಭಿವೃದ್ಧಿ, ಸರಕಾರಿ ಶಾಲೆಗಳ ಕೊಠಡಿ ನಿರ್ಮಾಣ , ದುರಸ್ತಿ, ಶಾಲಾ ಮೈದಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿದ್ದೇನೆ ಎಂದು ಅವರು ತಿಳಿಸಿದರು.

    ಕೊರೋನಾ, ಪ್ರವಾಹದಂತಹ ಸಂಕಷ್ಟದ ಸಂದರ್ಭದಲ್ಲಿ ನಿಮ್ಮ ಮನೆ ಮಗಳಾಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ಉಚಿತ ಅಂಬುಲೆನ್ಸ್ ಒದಗಿಸಿದ್ದೇನೆ. ಔಷಧ, ಆಹಾರದ ಕಿಟ್ ಗಳನ್ನು ವಿತರಿಸಿದ್ದೇನೆ. ಗ್ರಾಮೀಣ ಮಕ್ಕಳಿಗೆ, ಯುವಕರಿಗೆ ಜಿಮ್ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಒದಗಿಸಿದ್ದೇನೆ. ಸರಕಾರದ ಅನುದಾನವಲ್ಲದೆ ಲಕ್ಷ್ಮೀ ತಾಯಿ ಫೌಂಡೇಶನ್ ಮೂಲಕ ಸ್ವಂತ ಹಣವನ್ನೂ ಒದಗಿಸಿ ಅಗತ್ಯ ಕೆಲಸ, ಬಡವರ ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿವರಿಸಿದರು.

    ಗ್ರಾಮೀಣ ಬಸ್ ನಿಲ್ದಾಣ, ವಾಲ್ಮೀಕಿ ಭವನ, ಮರಾಠಾ ಭವನ, ಅಂಬೇಡ್ಕರ್ ಭವನ, 103 ದೇವಸ್ಥಾನಗಳ ನಿರ್ಮಾಣ ಮತ್ತು ಜೀರ್ಣೋದ್ಧಾರ, ಜೈನ ಬಸದಿ, ಮಸೀದಿ, ಚರ್ಚ್ ಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದೇನೆ. ರಾಜಹಂಸಗಡದಲ್ಲಿ ದೇಶದಲ್ಲೇ ಬೃಹತ್ತಾದ, ಅಪರೂಪದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣ ಮಾಡಿ, ಕೋಟೆಯ ಅಭಿವೃದ್ಧಿ ಮಾಡಿಸಿದ್ದೇನೆ. ಮಕ್ಕಳ ವಿದ್ಯಾಭ್ಯಾಸಗಳಿಗೆ ನೆರವಾಗಿದ್ದೇನೆ ಎಂದು ತಿಳಿಸಿದರು.

    ವಿರೋಧ ಪಕ್ಷದ ಶಾಸಕಿಯಾಗಿ, ಅದರಲ್ಲೂ ಮೊದಲ ಬಾರಿಗೆ ಶಾಸಕರಾಗಿ ಇಷ್ಟೊಂದು ಅನುದಾನ ತರುವುದು ಸುಲಭವಿರಲಿಲ್ಲ. ಆದರೆ ಯಾರ್ಯಾರದ್ದೋ ಕಾಲು ಹಿಡಿದು, ಏನೆಲ್ಲ ಹೋರಾಟ ಮಾಡಿ ಕೆಲಸ ತಂದಿದ್ದೇನೆ. ಈ ಬಾರಿ ನಮ್ಮದೇ ಸರಕಾರ ಬರುವುದರಿಂದ ಹೆಚ್ಚಿನ ಕೆಲಸ ತರಲು ಸಾಧ್ಯವಾಗುತ್ತದೆ ಎನ್ನುವ ವಿಶ್ವಾಸವಿದೆ. ವಿಶೇಷವಾಗಿ ಯುವಕರಿಗೆ ಉದ್ಯೋಗ ಒದಗಿಸುವಂತಹ ಯೋಜನೆಗಳನ್ನು ತರುತ್ತೇನೆ. ಉನ್ನತ ಶಿಕ್ಷಣ ಗ್ರಾಮೀಣ ಕ್ಷೇತ್ರದಲ್ಲೇ ಸಿಗುವಂತೆ ಮಾಡುವ ಸಂಕಲ್ಪ ಮಾಡಿದ್ದೇನೆ. ಅತ್ಯಂತ ಕಡಿಮೆ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

    ಬ್ಯಾಲೆಟ್ ಯುನಿಟ್ ನಲ್ಲಿ 4ನೇ ನಂಬರ್ ನಲ್ಲಿರುವ ನನ್ನ ಚುನಾವಣೆ ಚಿಹ್ನೆಯಾಗಿರುವ ಹಸ್ತದ ಗುರುತಿನ ಮುಂದಿರುವ ಬಟನ್ ಒತ್ತುವ ಮೂಲಕ ನನ್ನನ್ನು ಬೆಂಬಲಿಸಿ, ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಅವರು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಸ್ಥಳೀಯ ಯುವಕ ಸಂಘಗಳು, ಮಹಿಳಾ ಮಂಡಲಗಳು, ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳು ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿದವು. ನಿಮ್ಮ ಪರವಾಗಿ ನಾವೇ ಪ್ರಚಾರ ಕೈಗೊಂಡು ಮತ ಹಾಕಿಸುತ್ತೇವೆ. ಕಳೆದಬಾರಿಗಿಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹೊಸ ವರ್ಷ –2026,   ಸಂಕ್ರಾಂತಿ…!

    January 14, 2026

    ಹೊಸ ವರ್ಷ ಆರಂಭದಲ್ಲಿ ಬರುವ ಮೊದಲ ಹಬ್ಬ ಸಂಕ್ರಾಂತಿ.  ಮಕರ ಸಂಕ್ರಾಂತಿಯನ್ನು ಉತ್ಸವ ಸಂಭ್ರಮದಿಂದ ಆಚರಿಸುತ್ತಾರೆ.  ಆದರೆ ದಕ್ಷಿಣ ಭಾರತದಲ್ಲಿ…

    ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ

    January 14, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.