nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು
    ರಾಜ್ಯ ಸುದ್ದಿ March 22, 2022

    ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು

    By adminMarch 22, 2022No Comments2 Mins Read
    dk shivakumar

    ನೀರಿನ ರಾಜಕಾರಣ ಮಾಡಿ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಗೆ ಬಿಜೆಪಿ ಟಾಂಗ್ ನೀಡಿದೆ. ಮೇಕೆದಾಟು ಯೋಜನೆ ವಿಚಾರವಾಗಿ ಮಂಗಳವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

    ‘ಮೇಕೆದಾಟು ಯೋಜನೆ(Mekedatu Project)ಯನ್ನು ಜಾರಿಗೊಳಿಸಲು ಬಿಡುವುದಿಲ್ಲ‌‌ವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ‌ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?’ ಅಂತಾ ಪ್ರಶ್ನಿಸಿದೆ.


    Provided by
    Provided by

    ‘ರಾಹುಲ್ ಗಾಂಧಿ(Rahul Gandhi)ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ(Mekedatu Padayatre) ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ?’ ಅಂತಾ ಟೀಕಿಸಿದೆ.

    ರಾಜಕೀಯ ಲಾಭಕ್ಕಾಗಿ ಡಿಕೆಶಿ(DK Shivakumar)ಯವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ #ಸುಳ್ಳಿನಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ. ಮೂರನೇ ಬಾರಿ ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ. ನಿರೀಕ್ಷಿಸಬಹುದೇ? ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ.

    ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆಶಿಯವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ’ ಅಂತಾ ಬಿಜೆಪಿ ಕುಟುಕಿದೆ.ಕುಡಿಯುವ ನೀರಿಗಾಗಿ ರಾಜ್ಯ ಬಿಜೆಪಿ ಸರ್ಕಾರ(BJP Government) ಮಾಡುತ್ತಿರುವ ಯೋಜನೆಗೆ‌ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಡಿಕೆಶಿ ಅವರಿಗೆ ತಮಿಳುನಾಡು ಸರ್ಕಾರದ ವಿರುದ್ಧ ಧ್ವನಿ ಎತ್ತುವ ತಾಕತ್ತು ಇದೆಯೇ? ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ. ಮಹದಾಯಿ ಆಗಲಿ ಮೇಕೆದಾಟು ಆಗಲಿ ಕಾಂಗ್ರೆಸ್ ನಾಯಕರದು ಸದಾ ಇಬ್ಬಗೆಯ ನಿಲುವು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಇನ್ನೊಂದು ನೀತಿ. ತಮಿಳುನಾಡು ಸರ್ಕಾರ ತೆಗೆದುಕೊಂಡ ನಿರ್ಣಯದ ವಿರುದ್ಧ ಒಂದು ಸಾತ್ವಿಕ ಪ್ರತಿರೋಧ ತೋರುವ ಧೈರ್ಯವಾದರೂ ಡಿಕೆಶಿಯವರಿಗೆ ಇದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

    ಮೇಕೆದಾಟು ಹೋರಾಟ(Mekedatu Project)ದ ನಾಟಕದ ಮೂಲಕ ಹಳೆ ಮೈಸೂರು ಭಾಗದಲ್ಲಿ ತಮ್ಮ ನಾಯಕತ್ವ ಪ್ರತಿಷ್ಠಾಪನೆ ಮಾಡುವುದಷ್ಟೇ ಡಿಕೆಶಿಯವರ ಉದ್ದೇಶವಾಗಿತ್ತು. ಆದರೆ ಪಾದಯಾತ್ರೆಯ ಉದ್ದೇಶಕ್ಕೆ ಅವರ ಮೈತ್ರಿ ಪಕ್ಷದಿಂದಲೇ ಅಡ್ಡಿಯುಂಟಾಗಿದೆ. ಡಿಕೆಶಿಯವರೇ ಜಲ ಜಪ ಮಾಡಿಕೊಂಡು ನಾಲ್ಕು ಹೆಜ್ಜೆ ನಡೆದವರೆಲ್ಲ ಭಗೀರಥರಾಗಲು ಸಾಧ್ಯವಿಲ್ಲ’ ಅಂತಾ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.