nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    • ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ
    ಕೊರಟಗೆರೆ March 23, 2022

    ಪತ್ರಕರ್ತರಿಗೆ ಸೇವಾ ಭದ್ರತೆಯೊಂದಿಗೆ ಸರ್ಕಾರದ ಸವಲತ್ತು ಅವಶ್ಯಕ: ಶ್ರೀವೀರಭದ್ರಶಿವಾಚಾರ್ಯಸ್ವಾಮೀಜಿ

    By adminMarch 23, 2022No Comments2 Mins Read
    veerabhadra shivacharya swamy

    ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು.

    ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು- ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ,  ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.

    ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು, ಮುಂದಿನ ದಿನಗಳಲ್ಲೂ ನಿಸ್ಪಕ್ಷಪಾತ ವರದಿ ಮಾಡುವ ಮೂಲಕ ಸಮಾಜದಲ್ಲಿ ಸಾರ್ವಜನಿಕರ ಅಭಿವೃದ್ದಿಕಾರ್ಯಗಳಿಗೆ ಸಹಕಾರಿಯಾಗಬೇಕಿದೆ ಎಂದರು.

    ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ರಾಜಕೀಯದಲ್ಲಿ ಸಕ್ರಿಯವಾಗಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಸಮಾಜಿಕ ಸೇವಾಕಾರ್ಯಕ್ಕೆ ಹೊಸ ಚೇತನ್ಯ ದೊರೆಕಿದಂತಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಚುನಾವಣೆಯಲ್ಲೂ ಈ ಬಾರಿ ಯುವಕರು ಹೆಚ್ಚು ಚುನಾವಣೆಯಲ್ಲಿ ಸ್ಪರ್ದಿಸಿ ವಿಜೇತರಾಗಿದ್ದು. ಮುಂದಿನದಿನಗಳಲ್ಲಿ ಪತ್ರಿಕಾ ರಂಗದಲ್ಲಿನ ಅನೇಕ ನೂನ್ಯತೆಗಳನ್ನು ಸರಿಪಡಿಸಿ ಗ್ರಾಮೀಣ ಪತ್ರಕರ್ತರಿಗೆ ನೆರವಾಗುವಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದು ಆಶಿಸಿದರು.

     ಕೊರಟಗೆರೆ ತಾಲೂಕಿನ ಸೇವಾ ಮನೋಭಾವದಿಂದ ಕಾರ್ಯನಿರ್ವಸುತ್ತಿರುವ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ರಂಗಧಾಮಯ್ಯ, ಹೆಚ್.ಈ. ಸತೀಶ್ ಹಾರೋಗೆರೆ, ನಿರ್ದೇಶಕರಾಗಿ ಆಯ್ಕೆಯಾಗಿರುವ ಕೊರಟಗೆರೆ ನರಸಿಂಹಮೂರ್ತಿ, ಪ್ರಜಾ ಟಿ.ವಿ. ಯಶಸ್.ಕೆ.ಪದ್ಮನಾಭ್, ತೋ.ಚಿ.ಕೃಷ್ಣಮೂರ್ತಿ, ಪಬ್ಲಿಕ್ ಟಿ.ವಿ. ಮಂಜುನಾಥ್ ಹಾಗೂ 2022 ರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ ಪಡೆದ ಕೆ.ವಿ.ಪುರುಷೊತ್ತಮ್, ಹುಲಿಕುಂಟೆ ಗ್ರಾ.ಪಂ.ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮಲ್ಲಣ್ಣ ಅವರನ್ನು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಗೌರವಿಸಿ ಸನ್ಮಾನಿಸಿದರು.

    ಈ ವೇಳೆ ಫ್ರೆಂಡ್ಸ್ ಗ್ರೂಪ್ ನ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಹಂಚಿಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಸ್ವಾಮಿ, ಹುಲಿಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್, ಕೇಶವಮೂರ್ತಿ, ಕಾಕಿಮಲ್ಲಯ್ಯ, ಅಕ್ಷರದಾಸೂಹ ರಘು, ಫ್ರೆಂಡ್ಸ್ ಗ್ರೂಪ್ ಪದಾಧಿಕಾರಿಗಳಾದ ಮುರಳಿ, ಪ್ರದೀಪ್ಕುಮಾರ್, ಶಿವಶಂಕರ್, ಹೆಚ್.ರಾಜು,  ಪತ್ರಕರ್ತರಾದ ಚಿದಂಬರ, ರಾಘವೇಂದ್ರ ದೇವರಾಜ್ ಕೆ. ಎನ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ:  ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

     

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ನೇರಳೆಕೆರೆ ವೃತ್ತದ ನೇರಳೆಕೆರೆ ಗೇಟ್ ಅಂಗನವಾಡಿ ಕೇಂದ್ರದಲ್ಲಿ, ಆಗಸ್ಟ್–2026ರ ಅಂತ್ಯಕ್ಕೆ ಗೌರವ ಸೇವೆಯಿಂದ ವಯೋನಿವೃತ್ತಿ…

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸರಗೂರು: 9ನೇ ವಾರ್ಡ್ ಅಭಿವೃದ್ಧಿಗೆ ₹55 ಲಕ್ಷ ಅನುದಾನ; ಚಿಕ್ಕದೇವಮ್ಮ ದೇವಸ್ಥಾನ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ

    August 29, 2026

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.