nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿಗೂ ಜನರನ್ನು ಕಾಡುತ್ತಿರುವ ನಟಿ ಮಂಜುಳ ನಿಗೂಢ ಸಾವು
    ಸ್ಪೆಷಲ್ ನ್ಯೂಸ್ March 28, 2022

    ಇಂದಿಗೂ ಜನರನ್ನು ಕಾಡುತ್ತಿರುವ ನಟಿ ಮಂಜುಳ ನಿಗೂಢ ಸಾವು

    By adminMarch 28, 2022No Comments2 Mins Read
    manjula

    ಬೆಂಗಳೂರು: 1970 ಮತ್ತು 80ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ನಟಿ ಮಂಜುಳ ಬದುಕಿದ್ದು ಕೇವಲ 34 ವರ್ಷ ಮಾತ್ರ. ಪ್ರತಿಭಾವಂತ ನಟಿ ಮಂಜುಳ ಇಲ್ಲ ಅನ್ನೋದನ್ನಇಂದಿಗೂ ನಂಬೋದಕ್ಕೆ ಆಗುತ್ತಿಲ್ಲ. ಅವರ ಸಾವು ಆಕಸ್ಮಿಕ ಅಲ್ಲ, ಆತ್ಮಹತ್ಯೆ ಅನ್ನೋ ಮಾತು ಮತ್ತೇ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಇಂಟ್ರಸ್ಟಿಂಗ್‌ ವಿಚಾರ ನಿಮ್ಮ ಮುಂದೆ.

     ‘ಸಂಪತ್ತಿಗೆ ಸವಾಲ್’, ‘ಎರಡು ಕನಸು’, ‘ಬೆಸುಗೆ’,‌ ‘ಭಕ್ತ ಕುಂಬಾರ’, ‘ಮೂರೂವರೆ ವಜ್ರಗಳು’, ‘ಮಯೂರ’, ‘ದಾರಿ ತಪ್ಪಿದ ಮಗ’, ‘ನೀ ನನ್ನ ಗೆಲ್ಲಲಾರೆ’, ‘ತಾಯಿಗಿಂತ ದೇವರಿಲ್ಲ’, ‘ಎರಡು ಮುಖ’, ‘ಯಾರ ಸಾಕ್ಷಿ?’ ಈ ಸಿನಿಮಾಗಳನ್ನು ಯಾರು ನೋಡಿಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ಹಂಡ್ರೆಡ್‌ ಪರ್ಸೆಂಟ್‌ ನೋಡರ್ತೀರಿ. ಯಾಕಂದ್ರೆ ಇವೆಲ್ಲವೂ ನಟಿ ಮಂಜುಳ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿರೋ ಆಗಿನ ಸೂಪರ್ ಡೂಪರ್ ಹಿಟ್ ಸಿನಿಮಾಗಳು.


    Provided by
    Provided by

    ಸುಮಾರು  54ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಂಜುಳ ಅವರ ಜೀವನವೇ ರೋಚಕ. ಏಕೆಂದರೆ ಸಣ್ಣ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ನಟಿ ಮಂಜುಳ ಅದ್ಭುತ ನಟಿಯಾಗಿದ್ದವರು. ಮಂಜುಳ ಅವರು ಸಿನಿಮಾದಲ್ಲಿ ಇದ್ದಾರೆ ಅಂದರೆ ಸಾಕು ಅಭಿಮಾನಿಗಳು ಮುಗಿಬಿದ್ದು ಸಿನಿಮಾವನ್ನು ನೋಡುತ್ತಿದ್ದರು. ಆ ಮಟ್ಟಿಗೆ ಕ್ರೇಜ್‌ ಇತ್ತು. ಇವರು ನಟಿಸಿದ ಆಲ್ಮೋಸ್ಟ್‌ ಎಲ್ಲಾ ಮೂವಿಸ್‌ ಹಿಟ್ ಆಗಿವೆ.

     ‘ಮನೆ ಗೆದ್ದ ಮಗ’ ಇವರ ಕೊನೆಯ ಸಿನಿಮಾ. ತಮ್ಮ‌ ಅಭಿನಯದ ಮೂಲಕ ಇಂದಿಗೂ ಕೂಡ ಪ್ರತಿಯೊಬ್ಬರ ಹೃದಯದಲ್ಲಿ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ. ಸಿನಿಮಾ ನಿರ್ದೇಶಕ ಅಮೃತಂ ಅವರನ್ನು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರ.  ಅನಂತರ ಒಂದು ಗಂಡು ಮಗುವಿಗೆ ಜನ್ಮ ನೀಡಿದರು. ಅಷ್ಟೇ ಅಲ್ಲದೆ ಒಂದು ಹೆಣ್ಣು ಮಗುವನ್ನು ಕೂಡ ಆ ಸಮಯದಲ್ಲಿ ದತ್ತು ತೆಗೆದುಕೊಂಡಿದ್ದರು. ತಮ್ಮ‌ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿ ಗಂಡು ಮಗುವಿಗೆ ಅಭಿಷೇಕ್ ಎಂದು, ಹೆಣ್ಣು ಮಗುವಿಗೆ ಅಭಿನಯ ಎಂದು ಹೆಸರಿಟ್ಟಿದ್ದರು.

     ಮಂಜುಳ ಹುಟ್ಟಿದ್ದು ರಾಜಧಾನಿ ಬೆಂಗಳೂರು. ತಂದೆ ಶಿವಣ್ಣ ಪೋಲೀಸ್ ಸಬ್‌ ಇನ್‌ಸ್ಪೆಕ್ಟರ್ ಆಗಿದ್ದರು. ಭರತನಾಟ್ಯ ಪ್ರವೀಣೆಯಾಗಿದ್ದ ಮಂಜುಳರ ಪ್ರತಿಭೆ ‘ಪ್ರಭಾತ್’ ಕಲಾವಿದರು ತಂಡದ ಮೂಲಕ ಬೆಳಕಿಗೆ ಬಂದರು. ಸಿ.ವಿ.ಶಿವಶಂಕರ್ ಅವರ ‘ಮನೆ ಕಟ್ಟಿ ನೋಡು’ ಚಿತ್ರದಿಂದ ಬಾಲನಟಿಯಾಗಿ ಬೆಳ್ಳಿತೆರೆಗೆ ಬಂದರು. ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್‌ ಸಿ ಓದುತ್ತಿರುವಾಗಲೇ ‘ಯಾರ ಸಾಕ್ಷಿ’ ಚಿತ್ರದಿಂದ ನಾಯಕಿಯಾದರು.

     ಕನ್ನಡದ ನಾಯಕನಟ ಶ್ರೀನಾಥ್ ಮತ್ತು ಮಂಜುಳ ಪ್ರಣಯ ಜೋಡಿ ಎಂದೇ ಖ್ಯಾತಿ ಗಳಿಸಿತ್ತು ‘ಸಂಪತ್ತಿಗೆ ಸವಾಲ್’ ಚಿತ್ರದಲ್ಲಿನ ಬಜಾರಿ ಸ್ವಭಾವದ ಹೆಣ್ಣಿನ ಪಾತ್ರವಾದ ದುರ್ಗಿ ಪಾತ್ರದಲ್ಲಿ ಅಭಿನಯಿಸಿ ಸಖತ್‌ ಕ್ಲಿಕ್ ಆಗಿದ್ದರು. ಇವತ್ತಿಗೂ ಆ ಪಾತ್ರದ ಬಗ್ಗೆ ಚರ್ಚೆಗಳಾಗುತ್ತಲೇ ಇದೆ. ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಮಿಂಚಿದ್ದ ಮಂಜುಳರವರ ವೈಯಕ್ತಿಕ ಜೀವನ ಮಾತ್ರ  ಸುಖಮಯವಾಗಿರಲಿಲ್ಲ. ‘ಹುಡುಗಾಟದ ಹುಡುಗಿ’ ಚಿತ್ರವನ್ನು ನಿರ್ದೇಶಿಸಿದ ‘ಅಮೃತಂ’ ಅವರು ಮಂಜುಳರನ್ನು ತನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಂಡರು.

    ಬಣ್ಣದ ಜಗತ್ತಿನಿಂದ ದೂರ ಉಳಿದಿದ್ದ ಮಂಜುಳ ತಾನಾಯಿತು ತನ್ನ ಸಂಸಾರವಾಯಿತೆಂದು ಸಂತೋಷದಿಂದಿದ್ದರು. ಈ ಸಮಯದಲ್ಲಿಯೇ ಅವರು ಬೆಂಕಿ ಆಕಸ್ಮಿಕದಲ್ಲಿ ನಿಗೂಢ ರೀತಿಯಲ್ಲಿ ತಮ್ಮ 35ನೇ ವಯಸ್ಸಿನಲ್ಲಿ ಸಾವನ್ನಪ್ಪಿದರು. ಸಣ್ಣ ವಯಸ್ಸಿನಲ್ಲೇ ಮಂಜುಳ ಸಾವನ್ನಪ್ಪಿದ್ದು ಇವತ್ತಿಗೂ ಪ್ರತಿಯೊಬ್ಬರಿಗೂ ಕಾಡುತ್ತಿದೆ. ಯಾಕಂದ್ರೆ ಅವರ ಸಿನಿಮಾಗಳನ್ನು ತೆರೆ ಮೇಲೆ ನೋಡಿದಾಗ ಛೇ..! ಹಿಂಗಾಗಬಾರದಿತ್ತು ಅನ್ನೋ ಮಾತುಗಳನ್ನು ಇವತ್ತಿಗೂ ಮಾತನ್ನಾಡಿಕೊಳ್ಳುತ್ತಾರೆ.

     ಆದರೆ ಒಂದಂತು ಸತ್ಯ ಮಂಜುಳ ಸಾವು ಆತ್ಮಹತ್ಯೆಯಲ್ಲ ಅನ್ನೋ ವಾದ ಕೂಡ ನಡೆಯುತ್ತಲೇ ಇದೆ. ನಟಿ ಮಂಜುಳಾ ಅವರು ಹಾಲು ಕಾಯಿಸಲು ಹೋದಾಗ ಏಕಾಏಕಿ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದು ಹೇಗೆ? ಅನ್ನೋ ಪ್ರಶ್ನೆ ಕಾಡುತ್ತಲೇ ಇವೆ. ಆತ್ಮಹತ್ಯೆ ಮಾಡಿಕೊಳ್ಳುವಂತದ್ದು ಏನಾಗಿತ್ತು..? ವೈವಾಹಿಕ ಜೀವನ ಸುಖಕರವಾಗಿರಲಿಲ್ಲ ಅನ್ನೋ ವಾದ ಕೂಡ ಇದೆ. ಏನೇ ಆಗಲಿ ಅದ್ಭುತ ನಟಿಯನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಇವತ್ತಿಗೂ ಆ ನೋವಿನಲ್ಲೇ ಇದೆ.

     ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.