nammatumakuru

    Subscribe to Updates

    Get the latest creative news from FooBar about art, design and business.

    What's Hot

    ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ

    December 22, 2025

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025
    Facebook Twitter Instagram
    ಟ್ರೆಂಡಿಂಗ್
    • ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ
    • ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!
    • ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    • ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!
    • ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!
    • ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ; ನವವಿವಾಹಿತೆ ದುರ್ಮರಣ, ಪತಿಗೆ ಗಂಭೀರ ಗಾಯ
    • ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ
    • ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ವಾರ 24ನೇ ಕಂತಿನ ಹಣ ಬಿಡುಗಡೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿಗೂ ಜನರನ್ನು ಕಾಡುತ್ತಿರುವ ನಟಿ ಮಂಜುಳ ನಿಗೂಢ ಸಾವು
    ಸ್ಪೆಷಲ್ ನ್ಯೂಸ್ March 28, 2022

    ಇಂದಿಗೂ ಜನರನ್ನು ಕಾಡುತ್ತಿರುವ ನಟಿ ಮಂಜುಳ ನಿಗೂಢ ಸಾವು

    By adminMarch 28, 2022No Comments2 Mins Read
    manjula

    ಬೆಂಗಳೂರು: 1970 ಮತ್ತು 80ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದ ನಟಿ ಮಂಜುಳ ಬದುಕಿದ್ದು ಕೇವಲ 34 ವರ್ಷ ಮಾತ್ರ. ಪ್ರತಿಭಾವಂತ ನಟಿ ಮಂಜುಳ ಇಲ್ಲ ಅನ್ನೋದನ್ನಇಂದಿಗೂ ನಂಬೋದಕ್ಕೆ ಆಗುತ್ತಿಲ್ಲ. ಅವರ ಸಾವು ಆಕಸ್ಮಿಕ ಅಲ್ಲ, ಆತ್ಮಹತ್ಯೆ ಅನ್ನೋ ಮಾತು ಮತ್ತೇ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಇಂಟ್ರಸ್ಟಿಂಗ್‌ ವಿಚಾರ ನಿಮ್ಮ ಮುಂದೆ.

     ‘ಸಂಪತ್ತಿಗೆ ಸವಾಲ್’, ‘ಎರಡು ಕನಸು’, ‘ಬೆಸುಗೆ’,‌ ‘ಭಕ್ತ ಕುಂಬಾರ’, ‘ಮೂರೂವರೆ ವಜ್ರಗಳು’, ‘ಮಯೂರ’, ‘ದಾರಿ ತಪ್ಪಿದ ಮಗ’, ‘ನೀ ನನ್ನ ಗೆಲ್ಲಲಾರೆ’, ‘ತಾಯಿಗಿಂತ ದೇವರಿಲ್ಲ’, ‘ಎರಡು ಮುಖ’, ‘ಯಾರ ಸಾಕ್ಷಿ?’ ಈ ಸಿನಿಮಾಗಳನ್ನು ಯಾರು ನೋಡಿಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ಹಂಡ್ರೆಡ್‌ ಪರ್ಸೆಂಟ್‌ ನೋಡರ್ತೀರಿ. ಯಾಕಂದ್ರೆ ಇವೆಲ್ಲವೂ ನಟಿ ಮಂಜುಳ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿರೋ ಆಗಿನ ಸೂಪರ್ ಡೂಪರ್ ಹಿಟ್ ಸಿನಿಮಾಗಳು.


    Provided by
    Provided by

    ಸುಮಾರು  54ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಂಜುಳ ಅವರ ಜೀವನವೇ ರೋಚಕ. ಏಕೆಂದರೆ ಸಣ್ಣ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ನಟಿ ಮಂಜುಳ ಅದ್ಭುತ ನಟಿಯಾಗಿದ್ದವರು. ಮಂಜುಳ ಅವರು ಸಿನಿಮಾದಲ್ಲಿ ಇದ್ದಾರೆ ಅಂದರೆ ಸಾಕು ಅಭಿಮಾನಿಗಳು ಮುಗಿಬಿದ್ದು ಸಿನಿಮಾವನ್ನು ನೋಡುತ್ತಿದ್ದರು. ಆ ಮಟ್ಟಿಗೆ ಕ್ರೇಜ್‌ ಇತ್ತು. ಇವರು ನಟಿಸಿದ ಆಲ್ಮೋಸ್ಟ್‌ ಎಲ್ಲಾ ಮೂವಿಸ್‌ ಹಿಟ್ ಆಗಿವೆ.

     ‘ಮನೆ ಗೆದ್ದ ಮಗ’ ಇವರ ಕೊನೆಯ ಸಿನಿಮಾ. ತಮ್ಮ‌ ಅಭಿನಯದ ಮೂಲಕ ಇಂದಿಗೂ ಕೂಡ ಪ್ರತಿಯೊಬ್ಬರ ಹೃದಯದಲ್ಲಿ ಜೀವಂತವಾಗಿರುವುದಕ್ಕೆ ಸಾಕ್ಷಿಯಾಗಿದೆ. ಸಿನಿಮಾ ನಿರ್ದೇಶಕ ಅಮೃತಂ ಅವರನ್ನು ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರ.  ಅನಂತರ ಒಂದು ಗಂಡು ಮಗುವಿಗೆ ಜನ್ಮ ನೀಡಿದರು. ಅಷ್ಟೇ ಅಲ್ಲದೆ ಒಂದು ಹೆಣ್ಣು ಮಗುವನ್ನು ಕೂಡ ಆ ಸಮಯದಲ್ಲಿ ದತ್ತು ತೆಗೆದುಕೊಂಡಿದ್ದರು. ತಮ್ಮ‌ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿ ಗಂಡು ಮಗುವಿಗೆ ಅಭಿಷೇಕ್ ಎಂದು, ಹೆಣ್ಣು ಮಗುವಿಗೆ ಅಭಿನಯ ಎಂದು ಹೆಸರಿಟ್ಟಿದ್ದರು.

     ಮಂಜುಳ ಹುಟ್ಟಿದ್ದು ರಾಜಧಾನಿ ಬೆಂಗಳೂರು. ತಂದೆ ಶಿವಣ್ಣ ಪೋಲೀಸ್ ಸಬ್‌ ಇನ್‌ಸ್ಪೆಕ್ಟರ್ ಆಗಿದ್ದರು. ಭರತನಾಟ್ಯ ಪ್ರವೀಣೆಯಾಗಿದ್ದ ಮಂಜುಳರ ಪ್ರತಿಭೆ ‘ಪ್ರಭಾತ್’ ಕಲಾವಿದರು ತಂಡದ ಮೂಲಕ ಬೆಳಕಿಗೆ ಬಂದರು. ಸಿ.ವಿ.ಶಿವಶಂಕರ್ ಅವರ ‘ಮನೆ ಕಟ್ಟಿ ನೋಡು’ ಚಿತ್ರದಿಂದ ಬಾಲನಟಿಯಾಗಿ ಬೆಳ್ಳಿತೆರೆಗೆ ಬಂದರು. ನ್ಯಾಷನಲ್ ಕಾಲೇಜಿನಲ್ಲಿ ಬಿಎಸ್‌ ಸಿ ಓದುತ್ತಿರುವಾಗಲೇ ‘ಯಾರ ಸಾಕ್ಷಿ’ ಚಿತ್ರದಿಂದ ನಾಯಕಿಯಾದರು.

     ಕನ್ನಡದ ನಾಯಕನಟ ಶ್ರೀನಾಥ್ ಮತ್ತು ಮಂಜುಳ ಪ್ರಣಯ ಜೋಡಿ ಎಂದೇ ಖ್ಯಾತಿ ಗಳಿಸಿತ್ತು ‘ಸಂಪತ್ತಿಗೆ ಸವಾಲ್’ ಚಿತ್ರದಲ್ಲಿನ ಬಜಾರಿ ಸ್ವಭಾವದ ಹೆಣ್ಣಿನ ಪಾತ್ರವಾದ ದುರ್ಗಿ ಪಾತ್ರದಲ್ಲಿ ಅಭಿನಯಿಸಿ ಸಖತ್‌ ಕ್ಲಿಕ್ ಆಗಿದ್ದರು. ಇವತ್ತಿಗೂ ಆ ಪಾತ್ರದ ಬಗ್ಗೆ ಚರ್ಚೆಗಳಾಗುತ್ತಲೇ ಇದೆ. ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಮಿಂಚಿದ್ದ ಮಂಜುಳರವರ ವೈಯಕ್ತಿಕ ಜೀವನ ಮಾತ್ರ  ಸುಖಮಯವಾಗಿರಲಿಲ್ಲ. ‘ಹುಡುಗಾಟದ ಹುಡುಗಿ’ ಚಿತ್ರವನ್ನು ನಿರ್ದೇಶಿಸಿದ ‘ಅಮೃತಂ’ ಅವರು ಮಂಜುಳರನ್ನು ತನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಂಡರು.

    ಬಣ್ಣದ ಜಗತ್ತಿನಿಂದ ದೂರ ಉಳಿದಿದ್ದ ಮಂಜುಳ ತಾನಾಯಿತು ತನ್ನ ಸಂಸಾರವಾಯಿತೆಂದು ಸಂತೋಷದಿಂದಿದ್ದರು. ಈ ಸಮಯದಲ್ಲಿಯೇ ಅವರು ಬೆಂಕಿ ಆಕಸ್ಮಿಕದಲ್ಲಿ ನಿಗೂಢ ರೀತಿಯಲ್ಲಿ ತಮ್ಮ 35ನೇ ವಯಸ್ಸಿನಲ್ಲಿ ಸಾವನ್ನಪ್ಪಿದರು. ಸಣ್ಣ ವಯಸ್ಸಿನಲ್ಲೇ ಮಂಜುಳ ಸಾವನ್ನಪ್ಪಿದ್ದು ಇವತ್ತಿಗೂ ಪ್ರತಿಯೊಬ್ಬರಿಗೂ ಕಾಡುತ್ತಿದೆ. ಯಾಕಂದ್ರೆ ಅವರ ಸಿನಿಮಾಗಳನ್ನು ತೆರೆ ಮೇಲೆ ನೋಡಿದಾಗ ಛೇ..! ಹಿಂಗಾಗಬಾರದಿತ್ತು ಅನ್ನೋ ಮಾತುಗಳನ್ನು ಇವತ್ತಿಗೂ ಮಾತನ್ನಾಡಿಕೊಳ್ಳುತ್ತಾರೆ.

     ಆದರೆ ಒಂದಂತು ಸತ್ಯ ಮಂಜುಳ ಸಾವು ಆತ್ಮಹತ್ಯೆಯಲ್ಲ ಅನ್ನೋ ವಾದ ಕೂಡ ನಡೆಯುತ್ತಲೇ ಇದೆ. ನಟಿ ಮಂಜುಳಾ ಅವರು ಹಾಲು ಕಾಯಿಸಲು ಹೋದಾಗ ಏಕಾಏಕಿ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದು ಹೇಗೆ? ಅನ್ನೋ ಪ್ರಶ್ನೆ ಕಾಡುತ್ತಲೇ ಇವೆ. ಆತ್ಮಹತ್ಯೆ ಮಾಡಿಕೊಳ್ಳುವಂತದ್ದು ಏನಾಗಿತ್ತು..? ವೈವಾಹಿಕ ಜೀವನ ಸುಖಕರವಾಗಿರಲಿಲ್ಲ ಅನ್ನೋ ವಾದ ಕೂಡ ಇದೆ. ಏನೇ ಆಗಲಿ ಅದ್ಭುತ ನಟಿಯನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಇವತ್ತಿಗೂ ಆ ನೋವಿನಲ್ಲೇ ಇದೆ.

     ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದರ್ಶನ್​​ ಇಲ್ಲದಿದ್ದಾಗ ಕೆಲವರು ಮಾತನಾಡುತ್ತಾರೆ, ಉದ್ವೇಗಕ್ಕೆ ಒಳಗಾಗಬೇಡಿ: ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ

    December 22, 2025

    ದಾವಣಗೆರೆ: ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯ…

    ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ!

    December 22, 2025

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    December 22, 2025

    ಬಿಗ್ ಬಾಸ್ ಕನ್ನಡ: ರಜತ್ ಮತ್ತು ಚೈತ್ರಾ ಕುಂದಾಪುರ ಎಲಿಮಿನೇಷನ್‌ ಗೆ ಅಸಲಿ ಕಾರಣ ಬಯಲು!

    December 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.