nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾತಾಳಕ್ಕೆ ಇಳಿದ ಹುಣಸೆ ಹಣ್ಣಿನ ಬೆಲೆ: ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ
    ತುಮಕೂರು March 29, 2022

    ಪಾತಾಳಕ್ಕೆ ಇಳಿದ ಹುಣಸೆ ಹಣ್ಣಿನ ಬೆಲೆ: ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಒತ್ತಾಯ

    By adminMarch 29, 2022No Comments2 Mins Read
    hunase

    ತುಮಕೂರು: ನಾಡಿನಾದ್ಯಂತ ಹುಣಸೆ ಹಣ್ಣಿನ ಬೆಲೆಯು ಕುಸಿದಿರುವುದರಿಂದ ರೈತರಿಗೆ ನೆರವಾಗಲು ಹುಣಸೆಹಣ್ಣಿಗೂ ಬೆಂಬಲ ಬೆಲೆ ಘೋಷಿಸಬೇಕು ಮತ್ತು ಹುಣಸೆಹಣ್ಣಿನ ಖರೀಧಿ ಕೇಂದ್ರಗಳನ್ನು ತೆರೆಯಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪ ಸರ್ಕಾರವನ್ನು ಒತ್ತಾಯಿಸಿದರು.

    ನಗರದ ಎಪಿಎಂಸಿಯ ಹುಣಸೆಹಣ್ಣಿನ ಮಂಡಿಯಲ್ಲಿ ಸೋಮವಾರ ರೈತರು ಮತ್ತು ಮಂಡಿ ವರ್ತಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಹುಣಸೆ ಬೆಳೆಯುವ ಪ್ರದೇಶವಾದ ಜಿಲ್ಲೆಯ ರೈತರ ಪಾಲಿಗೆ ಯುಗಾದಿ ಶುಭ ಸೂಚನೆ ಕೊಟ್ಟಿಲ್ಲ. ಎಪಿಎಂಸಿಯಲ್ಲಿ ಹುಣಸೆಹಣ್ಣಿನ ಬೆಲೆ ತೀವ್ರವಾಗಿ ಕುಸಿದಿದೆ. ಬೆಲೆ ಕುಸಿದ ರೀತಿ ಕಂಡ ರೈತರು ಅಕ್ಷರಶಃ ತತ್ತರಿಸಿದ್ದಾರೆ ಎಂದರು.


    Provided by
    Provided by
    Provided by

    ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗ್ರಾಮಾಂತರ ಸೇರಿದಂತೆ ಪಕ್ಕದ ಚಿತ್ರದುರ್ಗ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಹೀಗೆ ಬಯಲು ಸೀಮೆಯ ಕಲ್ಪವೃಕ್ಷ ಕಾಮದೇನು ಹುಣಸೆ. ಇದೊಂದು ಬಂಗಾರದ ಬೆಳೆ. ಬೀಜ, ಹಿಪ್ಪೆ, ನಾರು, ತೊಗಟೆ ಸಂಪೂರ್ಣ ಬಳಕೆಗೆ ಉಪಯೋಗಿಸಲ್ಪಡುವ ಹುಣಸೆ ಜನೋಪಯೋಗಿರುವ ಫಸಲು, ಒಂದು ಮರಕ್ಕೆ 1,500 ರಿಂದ 3,000 ರೂ. ಇದ್ದ ಬೆಲೆ ಈಗ 500 ರಿಂದ 800 ರೂಪಾಯಿಗೆ ಖೇಣಿದಾರರು ಕೇಳುತ್ತಿದ್ದಾರೆ. ಹಿಂದೆ ಕ್ವಿಂಟಾಲ್‌ ಗೆ 28,000ದಿಂದ 30,000 ರೂ. ಇದ್ದ ಬೆಲೆ, ಈಗ ಕೇವಲ 9,000 ಸಾವಿರದಿಂದ 20,000 ರೂ.ಗೆ ಕುಸಿದು ಆತಂಕ ಸೃಷ್ಠಿಸಿದೆ ಎಂದರು.

    ಆದ್ದರಿಂದ ಸರ್ಕಾರ ತಕ್ಷಣ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು ಹಾಗೂ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಇದರ ಜೊತೆಗೆ ಕೋಲ್ಡ್ ಸ್ಟೋರೇಜ್ ಅತ್ಯವಶ್ಯಕವಾಗಿ ಬೇಕಾಗಿದೆ. ಅಡಕೆ, ತೆಂಗು  ಸೇರಿದಂತೆ ನೂರಾರು ಬೆಳೆಗಳಿಗೆ “ಪರಿಹಾರ, ಅನುದಾನ, ಸಾಲಸೌಲಭ್ಯ” ಗಳನ್ನು ಸರ್ಕಾರ ನೀಡಿದಂತೆ ಹುಣಸೆ ಬೆಳೆಗೂ ಸಹ ಅನುದಾನ, ಪರಿಹಾರ, ಸಾಲ-ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

    ಹುಣಸೆ ಬೆಳೆ ರೈತರ ಜೀವನಾಡಿಯಾಗಿದೆ. ಇದು ಮಳೆಯಾಶ್ರಿತ ರೈತರ ಬೆಳೆಯಾಗಿದ್ದು, ವೈಜ್ಞಾನಿಕ ಸಮೀಕ್ಷೆ ನಡೆಸಿ ಮೌಲ್ಯವನ್ನು ಹೆಚ್ಚಿಸಬೇಕು ಹಾಗೂ ಉಪ ಉತ್ಪನ್ನಗಳ ಕುರಿತು ಅರಿವು ಮೂಡಿಸಬೇಕು. ಪ್ರತಿದಿನ ಹುಣಸೆ ಮರಗಳಲ್ಲಿ ಹಣ್ಣನ್ನು ಉದುರಿಸಿ, ಕುಟ್ಟಿ, ನಾರು ತೆಗೆಯಲು ಕೂಲಿ, ಹುಣಸೆಹಣ್ಣು ಆರಿಸುವ, ಅದನ್ನು ತಂದು ಬೀಜ ಬೇರ್ಪಡಿಸುವ, ನಾರು ತೆಗೆಯುವ ಖರ್ಚು, ಮಾರುಕಟ್ಟೆಗೆ ಸಾಗಿಸಲು ವೆಚ್ಚ, ಯಾರ್ಡ್ಗಳಲ್ಲಿ ಜಾಗದ ಬಾಡಿಗೆ, ಇತ್ಯಾದಿ ಖರ್ಚುಗಳು ಹೇಳತೀರದಾಗಿದೆ. ಹೀಗಾಗಿ ಕೊಳ್ಳುವ ವರ್ತಕರಿಗೆ ಮತ್ತು ಬೆಳೆದ ರೈತರಿಗೆ ಕನಿಷ್ಟ ಬೆಲೆ ಸಿಗುವಂತಾಗಬೇಕು, ಮರಗಳಲ್ಲಿ ಕೊಳೆತರು, ವ್ಯಾಪಾರಿ ನೋಡುತ್ತಿಲ್ಲ, ಬೆಲೆ ಕುಸಿತದಿಂದಾಗಿ ರೈತರಿಗೂ ಮತ್ತು ವರ್ತಕರಿಗೂ ನಷ್ಟ. ಸರ್ಕಾರದ ವತಿಯಿಂದ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆAದು ಮುರಳೀಧರ ಹಾಲಪ್ಪ ಆಗ್ರಹಿಸಿದರು.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, 2018 ರಲ್ಲಿ ಹುಣಸೆಗೆ ಕ್ವಿಂಟಲ್ ಬೆಲೆ ಗರಿಷ್ಠ 25 ಸಾವಿರಕ್ಕೆ ಮಾರಾಟವಾಗಿತ್ತು 2019ರಲ್ಲಿ 16 ಸಾವಿರಕ್ಕೆ ಇಳಿದಿತ್ತು, ಆದರೆ 2020ರಲ್ಲಿ 35 ಸಾವಿರಕ್ಕೆ ಏರಿಕೆ ಕಂಡು ದಾಖಲೆಯ ಬರೆದಿತ್ತು. ಆದರೆ ಈಗ 9 ಸಾವಿರದಿಂದ  20 ಸಾವಿರಕ್ಕೆ ಇಳಿದಿರುವುದು ಆತಂಕ ಸೃಷ್ಠಿಸಿದೆ ಎಂದರು.

    ನವ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್ ಮಾತನಾಡಿ, ನಾವು  ಅಂದುಕೊಂಡಿದ್ದ ಬೆಲೆಗೂ ಮಾರುಕಟ್ಟೆ ಬೆಲೆಗೂ ಅಜಗಜಾಂತರ ವ್ಯತ್ಯಾಸವಿದೆ. ಈ ಮೊತ್ತಕ್ಕೆ ಮಾರಿದರೆ ನಮಗೆ ಏನೂ ಗಿಟ್ಟುವುದಿಲ್ಲ, ಸರ್ಕಾರ ಹುಣಸೆಗೆ ಬೆಂಬಲ ಬೆಲೆ ಘೋಷಿಸುವುದರ ಜೊತೆಗೆ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಎಪಿಎಂಸಿ ಸಹಾಯಕ ಕಾರ್ಯದರ್ಶಿಗಳಾದ ಹೊನ್ನೂರು ಸ್ವಾಮಿ ಮತ್ತು  ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.

    ಈ ವೇಳೆ ಎಪಿಎಂಸಿ ಮಾಜಿ ಸದಸ್ಯ ಯದು, ಮುಖಂಡರಾದ ಟಿ.ಎಸ್.ನಿರಂಜನ್, ಮರಿಚೆನ್ನಮ್ಮ, ವಸಂತಮ್ಮ, ಗೀತಾ, ನಟರಾಜು, ಮಂಜುನಾಥ್, ಪ್ರಕಾಶ್, ಕೃಷ್ಣಮೂರ್ತಿ, ರಿಜ್ವಾನ್ ಪಾಷ, ಸಿ.ಡಿ.ರಾಜಪ್ಪ, ಸಂಜೀವ್, ಎಸ್. ಮಲ್ಲಿಕಾರ್ಜುನ್, ಡಿ.ಸಿ ಕೃಷ್ಣಮೂರ್ತಿ, ಗಿರಿಯಪ್ಪ ಆರ್.ಎಸ್, ಬಸವರಾಜು, ಸಿ.ಕೆ ಮಧು, ಕೆ.ದರ್ಶನ್, ಎಸ್. ದೊಡ್ಡಯ್ಯ, ರಾಮಣ್ಣ, ಬಿ.ತಿಮ್ಮಯ್ಯ, ರಂಗಣ್ಣ, ರಾಮಣ್ಣ, ಸೋಮಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ವರದಿ: ಮಾರುತಿ ಪ್ರಸಾದ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು…

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.