ಮಧುಗಿರಿ: ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಮೊದಲ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಧುಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ರಾಜ್ಯ ಬಿಜೆಪಿ ದಾವಣಗೆರೆ ವಿಭಾಗ ಪ್ರಭಾರಿ ಆಸೀಫ್ ಸೇಟ್ ರವರು ಮಧುಗಿರಿಯ ಪಾವಗಡ ಸರ್ಕಲ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಐತಿಹಾಸಿಕ ಸಯ್ಯದ್ ಇಬ್ರಾಹಿಂ ಖಾಲಿಲುಲ್ಲಾ ಶಾ ಅವ್ವ್ ಳಿಯಾ ಅಲ್ಲ ದರ್ಗಾ ಷರೀಫ್ ಗೆ ಹೂವಿನ ಜಾದರ್ ಸಮರ್ಪಿಸಿ, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿ ಬೆಳೆಯಲಿ ಹಾಗೂ ಜಿಲ್ಲೆಯ ನಾಲ್ಕು ವಿಧಾನ ಸಭ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಹಫೀಜ್ ರಾಹ್ಮನ್, ಮುಬಾರಕ್ ಸಹ ಪ್ರಭಾರಿ ದಾವಣಗೆರೆ, ಮೊಹಮ್ಮದ್ ಊರೂಜ್ ಪಾಶ ಸಹ ಪ್ರಭಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಂತ್ಯಾಜ್ ಪಾಷ, ಮಧುಗಿರಿ ಮಂಡಲ ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ,ಜಿಲ್ಲಾ ವಕ್ಫ್ ಬೋರ್ಡ್ ವೈಸ್ ಚೇರ್ಮೆನ್ ಯಾಸ್ಮಿನ್ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5