ತುಮಕೂರು: ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಪ್ರಯುಕ್ತ ಸಿದ್ಧಗಂಗಾ ಕ್ಷೇತ್ರದಲ್ಲಿ ಆಯೋಜಿಸುರುವ ‘ನಡೆದಾಡುವ ದೇವರ ಬಸವ ಭಾರತ‘ ಕಾರ್ಯಕ್ರಮ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಇನ್ನು ಕೆಲವೇ ಕ್ಷಣದಲ್ಲಿ ಸಿದ್ಧಗಂಗಾ ಮಠಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ. ಮೊದಲಿಗೆ ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಗದ್ದುಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರೊಂದಿಗೆ ನಮನ ಸಲ್ಲಿಸಿ ಆ ನಂತರ ವೇದಿಕೆಗೆ ಆಗಮಿಸಲಿದ್ದಾರೆ.
ನಾಡಿನಾದ್ಯಂತ ಮಠದ ಭಕ್ತರು, ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಾರ್ಯಕ್ರಮಕ್ಕೆ ಆಮಿಸುತ್ತಿದ್ದು, ಅಪೂರ್ವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. ತುಮಕೂರು ಸೇರಿದಂತೆ ಮಠದ ಆವರಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿದ್ಧಗಂಗಾ ಶ್ರೀಗಳ ನಾಮಸ್ಮರಣೆ, ಜಯಘೋಷ ಮೊಳಗಿದೆ. ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಶೀಕ್ಷೇತ್ರದಲ್ಲೇ ಇದ್ದು, ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5