nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ
    ಜಿಲ್ಲಾ ಸುದ್ದಿ April 9, 2022

    ಕಾಂಗ್ರೆಸ್ ಜಾರಿಗೊಳಿಸಿದ ಯೋಜನೆ ಕಡಿತಗೊಳಿಸಿ ಬಿಜೆಪಿಯಿಂದ ಜನ ವಿರೋಧಿ ಆಡಳಿತ: ಸಿದ್ದರಾಮಯ್ಯ

    By adminApril 9, 2022No Comments3 Mins Read
    siddaramaiha

    ಸರಗೂರು: ತಾಲೂಕಿನ ಮೊಳೆಯೂರು ಗ್ರಾಮದಲ್ಲಿ ಕುರುಬ ಸಮಾಜದಿಂದ ಶುಕ್ರವಾರ ನಡೆದ ಶ್ರೀ ಬಿಲ್ ಕುಮಾರಸ್ವಾಮಿ, ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನಕ ಭವನವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದರು.

    ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಆಡಳಿತರೂಢ ಬಿಜೆಪಿ ಸರಕಾರ ಮೊಟುಕುಗೊಳಿಸಿದ್ದು, ಜನ ವಿರೋಧಿ ಆಡಳಿತ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.


    Provided by
    Provided by

    ನಾನು ಮುಖ್ಯಮಂತ್ರಿಯಾಗಿದ್ದಾಗ 165 ಭರವಸೆಗಳನ್ನು ಈಡೇರಿಸಿದ್ದೇನೆ. ಶ್ರೀ ಸಾಮಾನ್ಯನ ಅನುಕೂಲಕ್ಕಾಗಿ ಕಾಂಗ್ರೆಸ್ ಜಾರಿಗೊಳಿಸಿದ ಇಂದಿರಾ ಕ್ಯಾಂಟಿನ್, ಪಶು ಭಾಗ್ಯ, ಶೋ ಭಾಗ್ಯ ಸೇರಿದಂತೆ ಇನ್ನಿತರ ಯೋಜನೆಗಳನ್ನು ನಿಷೇಧಿಸಿ, ಇನ್ನು ಕೆಲವು ಯೋಜನೆಗಳನ್ನು ಕಡಿತಗೊಳಿಸುವ ಮೂಲಕ ಬಿಜೆಪಿ ಜನ ವಿರೋಧಿ ಆಡಳಿತ ನೀಡುತ್ತಿದೆ. ಎಸ್‍ ಸಿ, ಎಸ್ಟಿ ಅನುದಾನ ಕಡಿತಗೊಳಿಸಿ, ಮೋಸ ಮಾಡುತ್ತಿದ್ದಾರೆ.  ರೈತರಿಗೆ ಕನಿಷ್ಠ ಬೆಂಬಲ ನೀಡುವಲ್ಲಿ ವಿಫಲವಾಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಪ್ರಧಾನಿ ನರೇಂದ್ರ ಮೋದಿ ರೈತರ ಮನೆ ಹಾಳು ಮಾಡಿದ್ದಾರೆ ಎಂದು ಅವರು ಟೀಕಿಸಿದರು.

    ತಾಲೂಕು ಅಭಿವೃದ್ಧಿಗೆ  ಕಡೆಗಣೆನೆ:

    ಮುಖ್ಯಮಂತ್ರಿಯಾಗಿದ್ದಾಗ ಕೊನೆಯ ಅವಧಿಯಲ್ಲಿ 53 ಹೊಸ ತಾಲೂಕು ಘೋಷಣೆ ಮಾಡಿದೆ. ಅವುಗಳಿಗೆ ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯಾಗಲೀ, ಬಿಜೆಪಿಯ ಯಡಿಯೂರಪ್ಪ ಹಾಗೂ ಬಸವರಾಜು ಬೊಮ್ಮಾಯಿಯಾಗಲೀ ತಮ್ಮ ಆಡಳಿತದ ಅವಧಿಯಲ್ಲಿ ಹೊಸ ತಾಲೂಕುಗಳಿಗೆ  ಮೂಲ ಸೌಲಭ್ಯ ಒದಗಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದು, ಅಭಿವೃದ್ಧಿ ಮಾಡುವಲ್ಲಿ ಕಣಗಣಿಸುತ್ತಿದ್ದಾರೆ ಎಂದರು.

    2023ಕ್ಕೆ ಕಾಂಗ್ರೆಸ್ ಅಧಿಕಾರ ಕ್ಕೆ ಬರಲಿದೆ. ಆಗ ನೂತನ ತಾಲೂಕುಗಳಿಗೆ ಮೂಲ ಸೌಲಭ್ಯ ಒದಗಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.

     ಬಿಜೆಪಿ ಕೆಟ್ಟ ಸರಕಾರ:

    ರಾಜ್ಯದ ಇತಿಹಾಸದಲ್ಲೇ ಬಿಜೆಪಿಯಂಥ ಕೆಟ್ಟ ಸರಕಾರವನ್ನು ಕಂಡಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಅಭಿವೃದ್ಧಿಗಾಗಿ 165 ಭರವಸೆಗಳನ್ನು ಈಡೇರಿಸಿದ್ದೆ. ಆದರೆ, ಬಿಜೆಪಿ ಸರಕಾರ ಅಭಿವೃದ್ಧಿಗೆ ಹೊತ್ತು ನೀಡುತ್ತಿಲ್ಲ ಎಂದರು.

    ಬದಲಿಗೆ ಕೋಮು ಗಲಭೆ ಸೃಷ್ಟಿಸುತ್ತಿದೆ. ಸಂಪ್ರದಾಯದ ಹೆಸರಿನಲ್ಲಿ ಜಾತಿ ಹೊಡೆಯ ಕೆಲಸವಾಗಬಾರದು. ಬಿಜೆಪಿ ಎಲ್ಲವನ್ನೂ ಮೀರಿದೆ. ಹೀಗಾಗಿ ಪೀಕ್ ಪ್ಯಾಕೇಟ್ ಮಾಡುವ ಬಿಜೆಪಿಗೆ ಮತದಾನ ಮಾಡಬಾರದು ಎಂದು ಸಲಹೆ ನೀಡಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಜನರ ಕಲ್ಯಾಣಕ್ಕಾಗಿ 20 ಅಂಶಗಳನ್ನು ತಂದರು. ಅವರನ್ನು ಬಿಟ್ಟರೆ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರೈಸಿದ ಸಿದ್ದರಾಮ್ಮಯ್ಯ ಅವರು ಒಂದು ಕಪ್ಪು ಚುಕ್ಕಿಯೂ ಇಲ್ಲದೆ ಜನಪರವಾಗಿ ಬಿಗಿಯಾದ ಆಡಳಿತ ನಡೆಸಿ, ಹಲವು ಯೋಜನೆಗಳ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

    ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ತಿದ್ದಿದ ಸಮಾಜ ಸುಧಾರಕ ಕನಕದಾಸರ ಹೆಸರಿನಲ್ಲಿ ಭವನ ನಿರ್ಮಿಸಿರುವುದು ಸಂತಸದ ವಿಚಾರ. ಆದರೆ, ಬಿಜೆಪಿ ಸರಕಾರ ರಾಜ್ಯದಲ್ಲಿ ಜಾತಿ-ಜಾತಿಗಳ ನಡುವಿನ ಸಂಘರ್ಷ ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದೆ. ಸರಗೂರು ತಾಲೂಕು ಕೇಂದ್ರವನ್ನಾಗಿ ಮಾಡಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದರು.

    ಇದೇ ಸಂದರ್ಭ ನಿವೇಶನ ದಾನಿಗಳಾದ ಎಂ.ಎನ್.ಅನಂತಕೃಷ್ಣಮೂರ್ತಿ, ಎಂ.ಎಸ್.ಕೃಷ್ಣಪ್ಪ, ತಿಮ್ಮೇಗೌಡ, ಪುಟ್ಟಸ್ವಾಮೇಗೌಡ ಅವರನ್ನು ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.

    ಖ್ಯಾತ ಜಾನಪದ ಗಾಯಕ ಅಮ್ಮ ರಾಮಚಂದ್ರ ಮತ್ತು ಮರಿಸ್ವಾಮಿ ಹಂಸ ಅವರ ತಂಡದಿಂದ ಜಾನಪದ ಗಾಯನ, ಪನ್ನಗ ವಿಜಯಕುಮಾರ್ ಮತ್ತು ತಂಡದವರಿಂದ ಭಜನಾ ಕಾರ್ಯಕ್ರಮ ನಡೆಯಿತು.

    ಶಾಸಕ ಅನಿಲ್ ಚಿಕ್ಕಮಾದು, ಯತೀಂದ್ರ ಸಿದ್ದರಾಮಯ್ಯ, ಸಂಡೂರು ತುಕರಾಮ್,  ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿದರು. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಎಂ.ಕೆ.ಸೋಮಶೇಖರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಮುಲ್ ನಿರ್ದೇಶಕ ಕೆ.ಈರೇಗೌಡ, ಬಿ.ಮಟಕೆರೆ ಗ್ರಾಪಂ ಅಧ್ಯಕ್ಷೆ ರೂಪಬಾಯಿ, ಉಪಾಧ್ಯಕ್ಷ ದೇವದಾಸ್, ಜಿ.ಪಂ. ಮಾಜಿ ಅಧ್ಯಕ್ಷರಾದ ಎಂ.ಪಿ.ನಾಗರಾಜು, ಕೆ.ಮರೀಗೌಡ, ಪಿ.ರವಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪಕೋಟೆ, ತಾಲೂಕು ಅಧ್ಯಕ್ಷ ಎಂ.ಬಿ.ಆನಂದ್, ಎಂ.ಎನ್.ಅನಂತಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡರಾದ ಎಂ.ಎನ್.ಅಣ್ಣಯ್ಯಸ್ವಾಮಿ, ಜಿ.ಕೃಷ್ಣ, ಎಂ.ಕೆ.ಹರಿದಾಸ್, ಗುಣಪಾಲ್, ಕೆಎಸ್‍ ಆರ್‍ ಟಿಸಿ ಬಿ.ಜವರೇಗೌಡ, ಸತೀಶ್‍ಗೌಡ, ಶಂಭುಲಿಂಗನಾಯಕ, ಎಸ್.ಎಸ್.ಪ್ರಭುಸ್ವಾಮಿ, ಎಂ.ಸಿ.ದೊಡ್ಡನಾಯಕ, ಎಂ.ಎಸ್.ದೇವರಾಜು, ಸಂತೋಷ್, ಎಂ.ಕೆ.ಕೃಷ್ಣಪ್ಪ, ಗುಡಿಗೌಡ ಎಂ.ಎನ್.ಕುಮಾರ್, ದೇವರಾಜು, ಶೇಖರಪ್ಪ, ಎಂ.ಸಿ.ಬೀರೇಗೌಡ, ಶಿವಮೂರ್ತಿ, ಎಂ.ಆರ್.ಆನಂದ್, ಕರಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ…

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.