ಮಧುಗಿರಿ: ಶಾಸಕರಾದ ಚಿದಾನಂದ್ ಎಂ. ಗೌಡ ರವರು ಮಧುಗಿರಿ ನಗರದ ನಿವೇದಿತಾ ಶಿಕ್ಷಣ ಸಂಸ್ಥೆಯಲ್ಲಿ ಮಧುಗಿರಿ ಟೈಮ್ಸ್ ಪತ್ರಿಕೆ ಮತ್ತು ನ್ಯೂಸ್ ಚಾನಲ್ ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು,ಮಧುಗಿರಿ ಟೈಮ್ ಚಾನಲ್ ಲೋಗೋ ಬಿಡುಗಡೆಗೊಳಿಸಿದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಿ ಪತ್ರಿಕೆ ಮತ್ತು ಮಾಧ್ಯಮದ ಮಹತ್ವದ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ನವರು, ವಿಧಾನಪರಿಷತ್ ಶಾಸಕರು ಹಾಗೂ ಸರ್ಕಾರದ ಮುಖ್ಯಸಚೇತಕರಾದ ಹಾಗೂ ವೈ.ಎ.ನಾರಾಯಣ ಸ್ವಾಮಿ, ಮಧುಗಿರಿ ಶಾಸಕರಾದ ವೀರಭದ್ರಯ್ಯನವರು ಹಾಗೂ ಅನೇಕ ಕ್ಷೇತ್ರದ ಗಣ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5