nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಡುಸಲಮ್ಮ ದೇವಿ ಜಾತ್ರೆ ಸಿಡಿ ಉತ್ಸವದ ಬಗ್ಗೆ ಜನ್ನ ಕವಿ ಏನು ಹೇಳಿದ್ದ?
    ಲೇಖನ April 18, 2022

    ಉಡುಸಲಮ್ಮ ದೇವಿ ಜಾತ್ರೆ ಸಿಡಿ ಉತ್ಸವದ ಬಗ್ಗೆ ಜನ್ನ ಕವಿ ಏನು ಹೇಳಿದ್ದ?

    By adminApril 18, 2022No Comments2 Mins Read
    udusalamma jathre
    •  ಡಾ.ವಡ್ಡಗೆರೆ ನಾಗರಾಜಯ್ಯ

    ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಉಡುಸಲಮ್ಮ ದೇವಿ ಜಾತ್ರೆಯಲ್ಲಿ ನಿನ್ನೆ ದಿನ (16-04-2022) ನಡೆದಿರುವ ಸಿಡಿ ಉತ್ಸವದ ವಿಡಿಯೋ ತುಣುಕು ಇದು.  ಇಂತಹ ಸಿಡಿ ಆಚರಣೆಯನ್ನು ಕುರಿತು ಜನ್ನ ಕವಿ ‘ಯಶೋಧರ ಚರಿತೆ’ ಕಾವ್ಯದಲ್ಲಿ ಹೀಗೆ ಹೇಳಿದ್ದಾನೆ :

     ಆ ದೇವಿಯ ಜಾತ್ರೆಗೆ ಮೊಳೆ|

    ವೋದೆಳವೆರೆ ಸಿರದ ಗಾಳಮುರಿಯುಯ್ಯಲೆ‌ ಕೈ||

    ವೋದಸುಕೆ ಕೋಕಿಲಧ್ವನಿ|

    ಮೂದಲೆಯುಲಿಯಾಗೆ ಬಂದನಂದು ವಸಂತಂ||

     

    ತಾಳುಗೆಯ ನುರ್ಚಿ ನೆತ್ತಿಯ

    ಗಾಳಂ ಗಗನದೊವಿಲ್ವ ವಾರಿಯ ಬೀರರ್|

    ಪಾಳಿಯೊಳೆಸೆದರ್ ಪಾಪದ

    ಜೋಳದ ಬೆಳಸಿಂಗೆ ಬೆರ್ಚುಗಟ್ಟಿದ ತೆರೆದಿಂ||

     ವಸಂತ ಮಾಸದಲ್ಲಿ ಬರುವ ಮಾರಿಜಾತ್ರೆಯ ಸಂದರ್ಭದಲ್ಲಿ ಚಂಡಮಾರಿ ದೇವತೆಗೆ ಅದೇ ದೇವಮಂದಿರದ ಆವರಣದಲ್ಲಿ ನಡೆಯುವ ಸಿಡಿ ಆಚರಣೆಯನ್ನು ಜನ್ನ ಕವಿ ವಿವರಿಸುತ್ತಾನೆ. ಬಾಲಚಂದ್ರನು ಸಿರದ ಗಾಳದಂತೆ (ಸಿಡಿ ಆಚರಣೆಯಲ್ಲಿ ಬಳಸುವ ಕಬ್ಬಿಣದ ಕೊಕ್ಕೆಯಂತೆ), ಚಿಗುರಿದ ಅಶೋಕ ವೃಕ್ಷವು ಉರಿಯ ಉಯ್ಯಾಲೆಯಂತೆ, ಕೋಕಿಲಧ್ವನಿಯು ಮೂದಲೆಯ ಉಲಿಯಂತೆ ತೋರುತ್ತಿರಲು ವಸಂತಮಾಸ ಆಗಮಿಸುತ್ತದೆ. ಇದೇ ವಸಂತ ಮಾಸದಲ್ಲಿ ನಡೆಯುವ ಮಾರಿ  ಜಾತ್ರೆಯ ಆಚರಣಾ ವಿಧಿಗಳಾದ ‘ಸಿರದ ಗಾಳ’, ‘ಉರಿಯ ಉಯ್ಯಲೆ’, ‘ಮೂದಲೆಯ ಉಲಿ’, ‘ನೆತ್ತಿಯ ಗಾಳ’ ಮುಂತಾದ ಜನಪದ ಚಟುವಟಿಕೆಗಳನ್ನು ಜನ್ನ ಕವಿ ನಿರುದ್ವಿಗ್ನವಾಗಿ ದಾಖಲಿಸಿರುತ್ತಾನೆ.  ಸಿರ ಎಂದರೆ ನಮ್ಮ ಕುತ್ತಿಗೆಯ ಹಿಂಬದಿಯ ಭಾಗ. ಇದನ್ನು ಸಿರಪಟ್ಟಿ, ಪಟ್ಟೆಸಿರ, ಎಕ್ಕತ್ತು, ಎಕ್ಸಿರ ಮುಂತಾದ ಪದಗಳಿಂದ ಕರೆಯುತ್ತೇವೆ. ದೇವಿ ಜಾತ್ರೆಯ ಭಾಗವಾಗಿ ನಡೆಯುವ ಸಿಡಿ ಉತ್ಸವದಲ್ಲಿ  ಸಿಡಿಗಂಬವನೇರಿ ಸಿಡಿ ಆಟ ಪ್ರದರ್ಶಿಸುವ ವ್ಯಕ್ತಿಯ ಕುತ್ತಿಗೆಯ ಹಿಂಬದಿಯಲ್ಲಿರುವ ಸ್ನಾಯುಗಳ ಮೇಲೆ ಮುಷ್ಟಿಯಿಂದ ಗುದ್ದಿ ನರಗಳನ್ನು ಸಡಿಲಿಸಲಾಗುತ್ತದೆ. ಸಡಿಲಿಸಿದ ಮುಖ್ಯ ನರಗಳಿಗೆ ಕಬ್ಬಿಣದ ಗಾಳವನ್ನು (ಸಿರಗಾಳ) ಸಿಕ್ಕಿಸಿ, ಅವನನ್ನು ಸಿಡಿಗಂಬಕ್ಕೇರಿಸಿ ಆಕಾಶದಲ್ಲಿ ತೂಗಾಡಿಸಲಾಗುತ್ತದೆ. ಸಿರದ ನರಗಳ ಬದಲು ನೆತ್ತಿಯ ನರಗಳಿಗೆ ಸಿಕ್ಕಿಸುವ ಕೊಕ್ಕೆಯನ್ನು ‘ನೆತ್ತಿಯ ಗಾಳ’ ಎಂದು ಕರೆಯುತ್ತಾರೆ.

    ಜನ್ನ ಕವಿ ತಾನು ಬದುಕಿದ್ದ ಕಾಲದಲ್ಲಿ ಸುದತ್ತನಪುರದ ಚಂಡಮಾರಿ ದೇವತೆಯ ಜಾತ್ರೆಯಲ್ಲಿ ನಡೆಯುವ ಸಿಡಿ ಆಚರಣೆಯ ಪ್ರತಿಯೊಂದು ವಿಧಿಗಳನ್ನು ಶ್ರದ್ಧೆಯಿಂದ ಗಮನಿಸಿ ತನ್ನ ಕಾವ್ಯದಲ್ಲಿ ದಾಖಲಿಸಿದ್ದಾನೆ. ಹಿಂಸೆಯ ಪರಿಕಲ್ಪನೆಯನ್ನು ವಿವರಿಸುವ ಮೂಲಕವೇ ಅಹಿಂಸೆ ಎಂಬ ಮೌಲ್ಯದ ಮಹತ್ವವನ್ನು ಓದುಗರಿಗೆ ಮನಗಾಣಿಸುತ್ತಾನೆ. ರಾಜಸತ್ತೆಯ ಅಂದಿನ ಕಾಲದಿಂದಲೂ ಪ್ರಜಾಸತ್ತೆಯ ಇಂದಿನ ಕಾಲದವರೆಗೂ ಅನೂಚಾನವಾಗಿ ನಡೆಯುತ್ತಾ ಬಂದಿದೆ. ಇಂತಹ ರುದ್ರಭೀಷಣ ಆಚರಣೆಗಳಲ್ಲಿ ‘ಉತ್ತಮರು’ ಎನ್ನಿಸಿಕೊಂಡವರಿಗೆ ಮನರಂಜನೆ ನೀಡಲು ಪಾಲ್ಗೊಳ್ಳುತ್ತಿರುವ ‘ವಾರಿಯ ಬೀರರ್’ ಮಾತ್ರ ಕೆಳ ಜಾತಿಗಳ ಜನ. ಜನ್ನ ಕವಿ ಹೇಳುವ ‘ಉರಿಯ ಉಯ್ಯಲೆ’ ಎಂಬುದು ಕೊಂಡೋತ್ಸವ ಅಥವಾ ಅಗ್ನಿಗೊಂಡ ಆಚರಣೆಯಾಗಿರುತ್ತದೆ. ಕೊಂಡ ಹಾಯುವ ಆಚರಣದಯಲ್ಲಿ ಬೆಂಕಿಗೆ ಬಿದ್ದು ಸತ್ತ ‘ವಾರಿಯ ಬೀರರ್’  ಗಳಿಗೆ ಲೆಕ್ಕವಿಲ್ಲ. ಕೆಳಜಾತಿಗಳ ‘ವಾರಿಯ ಬೀರರ್’ ತೋರಿಸುವ ವೀರತ್ವದ ಬಾಳು ಎಂಥದ್ದೆಂದರೆ, ಜನ್ನನೇ ಹೇಳುವಂತೆ ‘ಜೋಳದ ಬೆಳಸಿಂಗೆ ಬೆರ್ಚುಗಟ್ಟಿದ ತೆರೆದಿಂ’. ಇಂತಹ ಆಚರಣೆಗಳನ್ನು ನಮ್ಮ ಬಾಬಾ ಸಾಹೇಬರು  ಕೊಟ್ಟಿರುವ ಸಂವಿಧಾನದ ಅಗ್ನಿಕುಂಡದಲ್ಲಿ ಸುಡುವುದೇ ಲೇಸು. ಏನಂತೀರಿ?


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.