nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವಿಳಂಬ: ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಅತಂತ್ರ
    ತುಮಕೂರು April 22, 2022

    ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವಿಳಂಬ: ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಅತಂತ್ರ

    By adminApril 22, 2022No Comments2 Mins Read
    aidso

    ತುಮಕೂರು:  ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವಿಳಂಬ ನಡೆಸಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಅತಂತ್ರವಾಗಿದೆ ಎಂದು  ಎಐಡಿಎಸ್ ಒ ನ ಅಧ್ಯಕ್ಷರಾದ ಅಶ್ವಿನಿ ಟಿ ಹೇಳಿದರು.

    ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಪದವಿ ಪಥಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಇದುವರೆಗೂ ಪರೀಕ್ಷಾ ಶುಲ್ಕ ಕೂಡ ಪಾವತಿಸಲು ಯಾವುದೇ ಸೂಚನೆ ಹೊರಡಿಸಿಲ್ಲ. ಆದರೆ ತರಗತಿಗಳು ಮುಗಿದು ಪರೀಕ್ಷಾ ಸಿದ್ಧತೆಗೆಂದು ಕಳೆದ ಒಂದು ತಿಂಗಳಿಂದ ರಜಾ ನೀಡಲಾಗಿದೆ. ಇನ್ನೊಂದು ಕಡೆ ದ್ವಿತೀಯ ಮತ್ತು ತೃತಿಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೇ ತಿಂಗಳ 23 ರಂದು ಮುಗಿಯುತ್ತದೆ. ಕೊರೋನಾ ಸಾಂಕಾಮಿಕದ ಮೊದಲನೇಯ ಮತ್ತು ಎರಡನೇಯ ಅಲೆಯಿಂದಾಗಿ ಕಳೆದ ಶೈಕ್ಷಣಿಕ ವರ್ಷವು ಗೊಂದಲದಲ್ಲೇ ಕಳೆದು ಹೋಗಿದೆ. ವರ್ಷವು ಕೂಡ ಶೈಕ್ಷಣಿಕ ಚಟುವಟಿಕೆಗಳು ಸಮರ್ಪಕವಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಆತಂತ್ರ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.


    Provided by
    Provided by

    ಒಂದು ಕಡೆ ರಾಜ್ಯ ಸರ್ಕಾರ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಯಾವುದೇ ಪೂರ್ವಭಾವಿ ಸಿದ್ಧತೆಯಿಲ್ಲದೆ ಹಠಾತ್ತನೆ 4 ವರ್ಷದ ಪದವಿ ಜಾರಿಗೊಳಿಸಿರುವುದು ಹಾಗೂ ವಿಷಯ ಹಂಚಿಕೆಯ ಗೊಂದಲದಲ್ಲೇ ವಿದ್ಯಾರ್ಥಿಗಳ ಸುಮಾರು ತಿಂಗಳ ಸಮಯ ಕಳೆದುಹೋಗಿವೆ. ವಿದ್ಯಾರ್ಥಿಗಳಿಗೆ ಈ ವರ್ಷದ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳು ಬಂದಿರುವುದು ಬಹಳ ತಡವಾಗಿದೆ. ಏಪ್ರಿಲ್ ಎರಡನೇ ವಾರ ಮುಗಿಯುತ್ತಾ ಬಂದಿದ್ದರು ಸಹ ತುಮಕೂರು ವಿಶ್ವವಿದ್ಯಾನಿಲಯದ ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈಗಾಗಲೇ ವಿ.ವಿಯು ಈ ಶೈಕ್ಷಣಿಕ ವರ್ಷದಿಂದ ಎನ್‌ಪಿ-202) ಜಾರಿ ಮಾಡಿದ್ದು, ಈ ನೂತನ ನೀತಿಗೆ ತಕ್ಕಂತೆ ಪರೀಕ್ಷಾ ಸಿದ್ಧತೆಗಳು-ಅಂದರೆ, ಪ್ರಶ್ನೆಪತ್ರಿಕೆ, ಪರೀಕ್ಷಾ ವೇಳಾಪಟ್ಟಿ, ಪಠ್ಯಕ್ರಮ ಪೂರ್ಣಗೊಳ್ಳುವುದು ಎಲ್ಲವೂ ಈಗಾಗಲೇ ಮುಗಿದಿರಬೇಕಿತ್ತು. ಆದರೆ ಈ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದರಲ್ಲಿ ರಾಜ್ಯ ಸರ್ಕಾರ ಮತ್ತು ವಿ.ವಿ.ಗಳು ಸಂಪೂರ್ಣ ವಿಫಲವಾಗಿವೆ ಎಂದರು.

    ಕೆಲವು ವಿ.ವಿ.ಗಳು ನಿಗದಿಪಡಿಸಿದ್ದ ವೇಳಾಪಟ್ಟಿಯನ್ನು ಎರಡು ಮೂರು ಬಾರಿ ಮುಂದೂಡಿವೆಯಲ್ಲದೆ, ಪರೀಕ್ಷೆಯ ವೇಳಾಪಟ್ಟಿ, ಪರೀಕ್ಷಾ ಪ್ರಕ್ರಿಯೆಯ ಕುರಿತು ಸನೆ ಸಹ ನೀಡುತ್ತಿಲ್ಲ. ಹೆಚ್ಚು ಕಡಿಮೆ ಪ್ರಥಮ ವರ್ಷದ ಪದವಿ ಕೋರ್ಸ್ ಮುಗಿಯಬೇಕಿದ್ದ ಸಮಯದಲ್ಲಿ ವಿ.ವಿ.ಗಳು ಪಥಮ ಸೆಮಿಸ್ಟರ್ ಪರೀಕ್ಷೆಯ ಕುರಿತು ವೇಳಾಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗದೆ, ಅತಂತ್ರ ಸ್ಥಿತಿಯಲ್ಲಿರುವುದು, ಎನ್‌ಇಪಿ- 2020ರ ಹಠಾತ್ ಹೇಲಕೆಯು ಸೃಷ್ಟಿಸಿರುವ ಬಿಕ್ಕಟ್ಟುಗಳಿಗೆ, ಸಮಸ್ಯೆಗಳಿಗೆ ಹಿಡಿದ ಕನ್ನಡಿಯಾಗಿದೆ ಎಂಬುದನ್ನು ನಾವು ಮರೆಯಬಾರದು ಎಂದರು.

    ಜೂನ್-ಜುಲೈ ತಿಂಗಳಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ, ಈಗಿನ ಪರಿಸ್ಥಿತಿಯಲ್ಲಿ ಹಿಂದಿನ ವರ್ಷ ಪದವಿ ಸೇರಿದ್ದ ವಿದ್ಯಾರ್ಥಿಗಳ ಇನ್ನೂ ತಮ್ಮ ಮೊದಲ ವರ್ಷ ಪೂರೈಸಿಲ್ಲ. ಒಂದೇ ಸಮಯದಲ್ಲಿ, ಪ್ರಥಮ ವರ್ಷದ ಎರಡು ವಿಭಿನ್ನ ಬ್ಯಾಚ್‌ ಗಳನ್ನು ನಡೆಸಲು ಹೇಗೆ ಸಾಧ್ಯ? ಅದು ವೈಜ್ಞಾನಿಕವು ಅಲ್ಲ, ವಾಸ್ತವವೂ ಅಲ್ಲ. ಈ ಬಿಕ್ಕಟ್ಟನ್ನು ಬಗೆಹರಿಸುವ ಕುಂಬ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರದ ಕ್ರಮ ಏನು? ಈಗಿರುವ ಪ್ರಥಮ ಪದವಿ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ವಿವಿಗಳ ಚಿಂತನೆ ಏನು? ಈ ಪರೀಕ್ಷೆ ಮುಗಿಯುವುದು ಯಾವಾಗ? ವಿದ್ಯಾರ್ಥಿಗಳ ಉಗ ಶಿಕ್ಷಣಕ್ಕೆ ಅಂದರೆ ಸ್ನಾತಕೋತ್ತರ ಪದವಿ ಪ್ರದೇಶಕ್ಕೆ ತಡವಾಗುವುದಿಲ್ಲವೇ? ವಿವಿಧ ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ ಪದವಿ ಪ್ರವೇಶ ಬೇರೆ ಬೇರೆ ಸಮಯದಲ್ಲಿರುತ್ತದೆ. ಈ ಕುರಿತು ಸರ್ಕಾರದ ನಿಲುವೇನು ಎನ್‌ಇಪಿ ಹಾತ್ ಹೇರಿಕೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗ ಸೃಷ್ಟಿಸುವಲ್ಲಿ ಯಾವ ರೀತಿ ಕಾರ್ಯವೈಕರಿ ನಡೆಸಿದೆ? ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎನ್ ಇಪಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಸರ್ಕಾರದ ನಿಲುವೇನು? ಎಂದರು

    ಈ ಸಂದರ್ಭದಲ್ಲಿ ಎಐಡಿಎಸ್ ಓ ನ ಅಧ್ಯಕ್ಷರು ಅಶ್ವಿನಿ ಟಿ ಈ, ಕಾರ್ಯದರ್ಶಿ ಲಕ್ಕಪ್ಪ, ಹಾಗೂ ಜಂಟಿ ಕಾರ್ಯದರ್ಶಿ ಅಷರ್ ಉಪಸ್ಥಿತರಿದ್ದರು.

    ವರದಿ: ಎ.ಎನ್. ಪೀರ್ ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

    February 10, 2026

    ಕೊರಟಗೆರೆ: ಹಿಂದೂ ಎನ್ನುವುದು ಕೇವಲ ಒಂದು ಧರ್ಮವಲ್ಲ; ಅದು ಜೀವನ ದರ್ಶನ, ಬದುಕುವ ಸಂಸ್ಕೃತಿ ಎಂದು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ…

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.