nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಟಿಎಂನಿಂದಲೇ ಹಣ ಕದಿಯುತ್ತಾರೆ, ಇವಿಎಂ ಯಾವ ಲೆಕ್ಕ? | ನಮ್ಮತುಮಕೂರು ಜೊತೆ ಟಿ.ಬಿ.ಜಯಚಂದ್ರ ಹೇಳಿದಿಷ್ಟು
    ಜಿಲ್ಲಾ ಸುದ್ದಿ April 22, 2022

    ಎಟಿಎಂನಿಂದಲೇ ಹಣ ಕದಿಯುತ್ತಾರೆ, ಇವಿಎಂ ಯಾವ ಲೆಕ್ಕ? | ನಮ್ಮತುಮಕೂರು ಜೊತೆ ಟಿ.ಬಿ.ಜಯಚಂದ್ರ ಹೇಳಿದಿಷ್ಟು

    ಚುನಾವಣೆಗೆ ಹಣ ಹಾಕಿ ಅಧಿಕಾರ ಗಿಟ್ಟಿಸಿಕೊಳ್ಳುವುದು ಬಳಿಕ ವ್ಯಾಪಾರ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು 40 % ಕಮಿಷನ್ ಕೇಳುವ ಮೂಲಕ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣರಾಗಿದ್ದಾರೆ.
    By adminApril 22, 2022No Comments2 Mins Read
    t b jayachandra

    ಚಿತ್ರದುರ್ಗ: ಬಿಜೆಪಿಯು ವಾಮಮಾರ್ಗದಿಂದ ಸರ್ಕಾರ ರಚಿಸಿದ್ದು, ಇದೀಗ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಸಿ.ಪಾಪಣ್ಣ ಅವರ ಮನೆಗೆ ಭೇಟಿ ನೀಡಿದ್ದ ಸಂದರ್ಭ ನಮ್ಮತುಮಕೂರು ಜೊತೆಗೆ ಮಾತನಾಡಿದ ಅವರು, ಬಿಜೆಪಿಯು ಎಂ ಎಲ್ ಎಗಳನ್ನು ಖರೀದಿಸುವ ಮೂಲಕ ವಾಮಮಾರ್ಗದಲ್ಲಿ ಸರ್ಕಾರ ರಚಿಸಿತು. 2008ರಲ್ಲಿಯೂ ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆ ಸಂದರ್ಭದಲ್ಲಿ 3 ಮುಖ್ಯಮಂತ್ರಿಗಳು ಆಡಳಿತ ನಡೆಸುವಂತಾಗಿತ್ತು ಎಂದರು.


    Provided by
    Provided by

    ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿಯವರು ಮಾಡಿರುವ ಸಾಧನೆ ಎಂದರೆ, ಅಕ್ರಮ ಗಣಿಗಾರಿಕೆ ಮಾಡಿ ಜೈಲಿಗೆ ಹೋಗಿರುವುದು ಎಂದರು.

    ಚುನಾವಣೆಗೆ ಹಣ ಹಾಕಿ ಅಧಿಕಾರ ಗಿಟ್ಟಿಸಿಕೊಳ್ಳುವುದು ಬಳಿಕ ವ್ಯಾಪಾರ ಮಾಡುವುದೇ ಬಿಜೆಪಿಯ ಉದ್ದೇಶವಾಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು 40 % ಕಮಿಷನ್ ಕೇಳುವ ಮೂಲಕ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಶ್ವರಪ್ಪನ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ಟಿ.ಬಿ.ಜಯಚಂದ್ರ ಆಕ್ರೋಶ ವ್ಯಕ್ತಪಡಿಸಿದರು.

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿ ಹಾಕುವ ಸಂಚು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, 3 ತಿಂಗಳಲ್ಲಿ ಈಶ್ವರಪ್ಪ ಆರೋಪ ಮುಕ್ತರಾಗಿ ಮತ್ತೆ ಸಚಿವ ಸ್ಥಾನ ಪಡೆದುಕೊಳ್ಳುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

    ಅಂದಿನ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನದಲ್ಲೆ ಕರ್ನಾಟಕ ನಂ. 1 ಮೊದಲನೇಯ ಸ್ಥಾನ ಪಡೆದುಕೊಂಡಿತ್ತು.  ಆದರೆ ಇಂದಿನ ಬಿ ಜೆ ಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರದಲ್ಲಿ ನಂ 1 ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಲೂಟಿ ಮಾಡುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

    ಪಂಡಿತ್ ಜವಾಹರ್ ಲಾಲ್ ನೆಹರು, ಮೌಲಾನ್ ಆಜಾದ್ ,  ಸರದಾರ್ ವಲ್ಲಬಾಯಿ ಪಾಟೇಲ್ , ಇವರುಗಳ ನೇತೃತ್ವದಲ್ಲಿ ಬಂದಂತಹ H A L, H M T, AIR INDIA ಗಳನ್ನು ಮಾರಾಟ ಮಾಡಿದ್ದು, ರಾಷ್ಟ್ರೀಯ ಬ್ಯಾಂಕ್ ಗಳನ್ನು ಖಾಸಗಿಕರಣ ಮಾಡುತ್ತಿರುವುದು ಬಿಜೆಪಿಯ ಸಾಧನೆಯಾಗಿದೆ. 148 ಸ್ವತಂತ್ರ ರಾಷ್ಟ್ರಗಳಲ್ಲಿ ಇವಿಎಂ ಬಳಕೆ ಮಾಡುತ್ತಿರುವುದು ಭಾರತ ಸೇರಿದಂತೆ ಕೇವಲ 3 ದೇಶಗಳಲ್ಲಿ ಮಾತ್ರ. ಜಪಾನ್ ನಂತಹ ಮುಂದುವರಿದ ದೇಶ, ಇಸ್ರೆಲ್ ನಂತಹ ದೇಶಗಳು ಇಂದಿಗೂ  ಬ್ಯಾಲೆಟ್ ಸಿಸ್ಟಮ್ ಬಳಸುತ್ತಿದ್ದಾರೆ ಎಂದು ಅವರು ಹೇಳಿದರು.

    ಇಂದಿನ ತಂತ್ರಜ್ಞಾನ ಕಾಲದಲ್ಲಿ ಎಟಿಎಂನಿಂದಲೇ ವಿವಿಧ ಮಾರ್ಗಗಳನ್ನು ಬಳಸಿ ಹಣ ಕದಿಯುತ್ತಾರೆ. ಅಂತಹದ್ದರಲ್ಲಿ, ಇವಿಎಂ ಮೆಷಿನ್ ಹ್ಯಾಕ್ ಮಾಡುವುದು ಅಷ್ಟು ಕಷ್ಟಕರ ಕೆಲಸವೇ ಎಂದು ಅವರು ಪ್ರಶ್ನಿಸಿದರು.

    ಡಿ.ಸುಧಾಕರ್ ಗೆ ಟಿಕೆಟ್ ಕೈ ತಪ್ಪುತ್ತಾ?

    ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮನೆಯೊಂದು ಎರಡು ಬಾಗಿಲು ಎನ್ನುವಂತಾಗಿದೆ. ಮಾಜಿ ಸಚಿವ ಸುಧಾಕರ್ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪುತ್ತಾ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಟಿ.ಬಿ.ಜಯಚಂದ್ರ,  ರಾಜಕೀಯ ಪಕ್ಷದಲ್ಲಿ ಹೊಸ ಮುಖಗಳು ಬರುತ್ತಾ ಇರುತ್ತವೆ, ಹಳೆಯ ಮುಖ ಬದಲಾಗುತ್ತಿರುತ್ತದೆ ಎಂದರು.

    ಈ ಸಂದರ್ಭದಲ್ಲಿ  ಕಾಂಗ್ರೆಸ್ ಮುಖಂಡರಾದ ಸೋಮಶೇಖರ್ ಬಿ., ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ  ಸಿ.ಬಿ.ಪಾಪಣ್ಣ, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಆರ್ ರಾಮಕೃಷ್ಣಪ್ಪ, ಬಿ.ಸಿ.ಜಯಣ್ಣ, ಈಶ್ವರಪ್ಪ, ಶಶಿಕುಮಾರ್ ದಿಂಡಾವರ , ನರಸಿಂಹಮೂರ್ತಿ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ನರಸಿಂಹಮೂರ್ತಿ, ಜವನಗೊಂಡನಹಳ್ಳಿ, ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷರಾದ ಎಮ್.ಎಸ್.ಗೌರಿ ಮುರುಳಿಧರನ್  ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಕೊರಟಗೆರೆ: ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅಸಂಘಟಿತ…

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.