nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025
    Facebook Twitter Instagram
    ಟ್ರೆಂಡಿಂಗ್
    • ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ
    • ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ
    • ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು
    • ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ
    • ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’
    • ಕೊರಟಗೆರೆ | ಪದೇ ಪದೇ ಕೆಟ್ಟು ನಿಲ್ಲುತ್ತಿರುವ  112 ಪೊಲೀಸ್ ತುರ್ತು ವಾಹನ
    • ತುಮಕೂರು | ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ಪ್ರಕರಣ: ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ಆವರಿಸಿದ ಮೌನ!
    ತುಮಕೂರು April 24, 2022

    ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ಪ್ರಕರಣ: ಘಟನೆಯ ಬೆನ್ನಲ್ಲೇ ಗ್ರಾಮದಲ್ಲಿ ಆವರಿಸಿದ ಮೌನ!

    By adminApril 24, 2022No Comments2 Mins Read
    gubbi

    ವಿಶೇಷ ವರದಿ:

    ತುಮಕೂರು: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಹತ್ಯೆ ತುಮಕೂರು ತಾಲೂಕಿನ  ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯ ನಂತರ ಗ್ರಾಮದಲ್ಲಿ ಇದೀಗ ಮೌನ ಆವರಿಸಿದ್ದು,  ಸ್ಥಳೀಯ ಜನರು ಭೀತಿಗೊಂಡಿದ್ದಾರೆ.


    Provided by
    Provided by
    Provided by

    ಪೆದ್ದನಹಳ್ಳಿಯ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್‌ (33) ಕೊಲೆಯಾದವರು. ಇದೇ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್‌ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

     ಶುಕ್ರವಾರ  ಬೆಳಗ್ಗೆ ಗ್ರಾಮದ ನೀರಿನ ಕಟ್ಟೆಯ ಬಳಿಯಲ್ಲಿ ಈ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ದಾರಿಹೋಕರು ನೀಡಿದ ಮಾಹಿತಿಯಿಂದಾಗಿ ಕುಟುಂಬಸ್ಥರಿಗೆ ವಿಚಾರ ತಿಳಿದು ಬಂದಿತ್ತು. ಇಬ್ಬರ ದೇಹದ ಮೇಲೆಯೂ ಗಂಭೀರವಾದ ಗಾಯಗಳಿದ್ದು, ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎನ್ನಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು. ಶ್ವಾನಗಳು ಹಲವು ಮನೆಗಳ ಬಳಿಗೆ ಹೋಗಿದ್ದವು. ಇದರಿಂದ ಆತಂಕಗೊಂಡ ಪೆದ್ದನಹಳ್ಳಿಯ ಕೆಲವು ಪುರುಷರು ಮನೆಗಳನ್ನು ತೊರೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ.

    ಕೃಷಿ ಪಂಪ್ ಸೆಟ್ ನ ಕೇಬಲ್ ಕಳವು ಮಾಡಲು ಹೋಗಿದ್ದ ಸಂದರ್ಭದಲ್ಲಿ ಜನರ ಕೈಗೆ ಸಿಕ್ಕಿ ಬಿದ್ದು ಹತ್ಯೆ ಮಾಡಲಾಗಿದೆ  ಎನ್ನುವ ಗುಸುಗುಸು ಮಾತುಗಳು ಕೂಡ ಕೇಳಿ ಬಂದಿದೆ. ಘಟನೆಯ ಸಂದರ್ಭದಲ್ಲಿ ಮೃತದ ಜೊತೆಗಿದ್ದ ಇನ್ನಿಬ್ಬರು ಓಡಿಹೋಗಿದ್ದರು ಎಂದೂ ಹೇಳಲಾಗುತ್ತಿದೆ.

     ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿತ್ತು.

    ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದು, ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.

    ಇನ್ನೂ ಪರಿಶಿಷ್ಟ ಜಾತಿಗೆ ಸೇರಿದ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಕಳ್ಳತನದ ಕಥೆ ಕಟ್ಟಲಾಗ್ತಿದೆ ಎನ್ನುವ ಅನುಮಾನಗಳು ಕೂಡ ಕೇಳಿ ಬಂದಿದ್ದು, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ನಡೆಯುತ್ತಿದೆಯೇ ಎನ್ನುವ ಅನುಮಾನಗಳು ಶುರುವಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    ತುಮಕೂರು ದಸರಾ: ಗಮನ ಸೆಳೆದ ‘ಪಂಜಿನ ಕವಾಯತು’

    September 29, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈಭವದಿಂದ ನಡೆದ ಪಾವಗಡ ಹಿಂದೂ ಮಹಾಗಣಪತಿಯ ವಿಸರ್ಜನಾ ಶೋಭಾಯಾತ್ರೆ

    September 29, 2025

    ಪಾವಗಡ:  ಭಾನುವಾರ ಬೆಳಿಗ್ಗೆ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಪಾವಗಡ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳದಿಂದ ಪ್ರತಿಷ್ಠಾಪನೆ…

    ಬೀದರ್: ನಿರಂತರ ಮಳೆ, ವಿಶೇಷ ಪ್ಯಾಕೇಜ್‌ ಗೆ ಸಿಎಂಗೆ ಸಚಿವರ ಮನವಿ

    September 29, 2025

    ಮ್ಯಾರಥಾನ್ ಓಟ | ಪುರುಷರ ವಿಭಾಗದಲ್ಲಿ ಅಬ್ದುಲ್‌ ಬಾರಿ, ಮಹಿಳೆಯರ ವಿಭಾಗದಲ್ಲಿ ಪ್ರಣತಿ ಗೆಲುವು

    September 29, 2025

    ತುಮಕೂರು ದಸರಾ | ರಸದೌತಣ ನೀಡಿದ ನಾಡ ಕುಸ್ತಿ

    September 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.