nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ ಮೀಟಿಂಗ್ : ಸಿಎಂಗಳಿಗೆ ಪ್ರಧಾನಿ ಮೋದಿ ಕೊಟ್ಟ ಸೂಚನೆಗಳೇನು..?
    ರಾಜ್ಯ ಸುದ್ದಿ April 28, 2022

    ಕೋವಿಡ್ ಮೀಟಿಂಗ್ : ಸಿಎಂಗಳಿಗೆ ಪ್ರಧಾನಿ ಮೋದಿ ಕೊಟ್ಟ ಸೂಚನೆಗಳೇನು..?

    By adminApril 28, 2022No Comments2 Mins Read
    meeting

    ದೇಶದಲ್ಲಿ ಕೊರೊನಾ ಅಲೆ ನಮ್ಮನ್ನು ಸಂಪೂಣವಾಗಿ ಬಿಟ್ಟು ಹೋಗಿಲ್ಲ. ನಮ್ಮಲ್ಲಿ ಪರಿಸ್ಥಿತಿ ಹದಗೆಟ್ಟಿಲ್ಲವಾದರೂ ನಿರ್ಲಕ್ಷ್ಯವಹಿಸದೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.ಈ ಹಿಂದೆ ಅನುಸರಿಸಿದ್ದ ತ್ರಿ-ಟಿ (ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್) ತಂತ್ರವನ್ನು ಎಲ್ಲಾ ರಾಜ್ಯಗಳು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಕೋವಿಡ್ ಹೋಗಿದೆ ಎಂದು ಯಾರೂ ಭಾವಿಸಬೇಡಿ. ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಆದರೂ ನಿರ್ಲಕ್ಷ್ಯ ಬೇಡ ಎಂದು ಅವರು ಕಿವಿಮಾತು ಹೇಳಿದರು.

    ಇಂದು ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನರೆನ್ಸ್ ನಡೆಸಿದ ಮೋದಿ ಅವರು, ಇತರೆ ದೇಶಗಳಿಗೆ ಹೋಲಿಸಿದರೆ ನಾವು ಸುರಕ್ಷಿತವಾಗಿದ್ದೇವೆ. ಈ ಹಿಂದೆ 1, 2 ಮತ್ತು 3ನೇ ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಓಮಿಕ್ರಾನ್ ಎದುರಿಸಿರುವಾಗ 4ನೇ ಅಲೆ ನಮಗೇನು ದೊಡ್ಡ ಸಮಸ್ಯೆಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು.


    Provided by
    Provided by

    ಒಂದನೇ ಲಸಿಕೆಯನ್ನು ಬಹುತೇಕ ಎಲ್ಲರೂ ಪಡೆದಿದ್ದಾರೆ. ಕೆಲವರು 2ನೇ ಲಸಿಕೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಇಂಥವರನ್ನುಗುರುತಿಸಿ ಲಸಿಕೆ ನೀಡಬೇಕೆಂದು ಸಲಹೆ ಮಾಡಿದರು.60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡುತ್ತಿದ್ದೇವೆ. ಕೆಲವರು ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಇನ್ನು ಕೆಲವರು ಕೋವಿಡ್ ಹೋಗಿರುವಾಗ ನಮಗೇಕೆ ಎಂದು ಉದಾಸೀನ ತೋರುತ್ತಿದ್ದಾರೆ. ಮೊದಲು ಇವರನ್ನು ಗುರುತಿಸಿ ಲಸಿಕೆ ಹಾಕಿ ಎಂದು ಪ್ರಧಾನಿಯವರು ಹೇಳಿದರು.

    ಲಸೀಕಾಕರಣ ಮತ್ತು ಶಾಲೆಗಳಲ್ಲಿ ಹೆಚ್ಚು ಅಭಿಯಾನವನ್ನು ಮೂಡಿಸಬೇಕು. ಕೋವಿಡ್ ನಿಯಮಗಳನ್ನು ಚಾಚುತಪ್ಪದೆ ಪಾಲನೆ ಮಾಡಿ. ಮುಖಕ್ಕೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಪ್ರತಿ ನಿಯಮಗಳನ್ನು ಪಾಲನೆ ಮಾಡಬೇಕೆಂದು ಮನವಿ ಮಾಡಿದರು.ಹಿಂದಿನ ಅಲೆಗಳಿಂದ ನಾವು ಸಾಕಷ್ಟು ಪಾಠ ಕಲಿತ್ತಿದ್ದೇವೆ. ಆರೋಗ್ಯ ಕ್ಷೇತ್ರಕ್ಕೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ. ಮೂಲಭೂತ ಸೌಕರ್ಯಗಳಿಗೆ ಕೊರತೆ ಇಲ್ಲ. ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಕೊರತೆಯೂ ಈಗಿಲ್ಲ. ಎಲ್ಲವೂ ಸುಭದ್ರ ಸ್ಥಿತಿಯಲ್ಲಿವೆ ಎಂದು ಹೇಳಿದರು.

    ಕೊರೊನಾದಿಂದ ರಕ್ಷಣೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕು. ಕೆಲವು ಕಡೆ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆಯೇ ರಕ್ಷಾ ಕವಚ ಎಂಬುದನ್ನು ಮರೆಯಬಾರದು ಎಂದು ಜನತೆಗೆ ಕಿವಿಮಾತು ಹೇಳಿದರು.
    ಯಾವ ರಾಜ್ಯಗಳು ಕೂಡ ಕೋವಿಡ್ ಅಲೆಯನ್ನು ನಿಭಾಯಿಸುವುದಿಲ್ಲ ವಿಫಲವಾಗಿಲ್ಲ. ಎಲ್ಲರೂ ಕೂಡ ಸಮರ್ಪಕವಾಗಿ ನಿಭಾಯಿಸಿದ್ದಾರೆ. ಜೂನ್ ತಿಂಗಳಿಗೆ 4ನೇ ಬರಬಹುದೆಂದು ಹೇಳುತ್ತಿದ್ದಾರೆ. ತಕ್ಷಣವೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಡಿಮೆ ಮಾಡಿ ಎಂದು ಮೋದಿ ಹೇಳಿದರು.

    ತೆರಿಗೆ ಕಡಿಮೆ ಮಾಡಿ:

    ತೈಲೋತ್ಪನ್ನಗಳ ಬೆಲೆ ಹೆಚ್ಚುತ್ತಿರುವುದು ಎಲ್ಲರಿಗೂ ಗೊತ್ತಿದೆ. ಕರ್ನಾಟಕ ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲೇ ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿತು. ಆದರೆ ಅದರ ಅಕ್ಕಪಕ್ಕದಲ್ಲಿರುವ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ಸೇರಿದಂತೆ ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳು ಕಡಿಮೆ ಮಾಡಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

    ಕರ್ನಾಟಕ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಮಾರಾಟವನ್ನು ಕಡಿತಗೊಳಿಸಿತು. ತೆರಿಗೆ ಕಡಿಮೆ ಮಾಡುವುದರಿಂದ ಜನತೆಗೆ ಲಾಭವಾಗಲಿದೆ. ಆರು ತಿಂಗಳು ನೀವು ತೆರಿಗೆ ಲಾಭವನ್ನು ಅನುಭವಿಸಿದ್ದೀರಿ. ನಿಮ್ಮ ಜನತೆಗೆ ಅನುಕೂಲವಾಗುವುದಾದರೆ ತೆರಿಗೆ ಕಡಿಮೆ ಮಾಡಲು ಸಮಸ್ಯೆಯಾದರೂ ಏನು ಪ್ರಶ್ನಿಸಿದರು.

    ವರದಿ ಆಂಟೋನಿ ಬೇಗೂರು

    admin
    • Website

    Related Posts

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.